AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ

Sri Lanka A vs India A, Final: ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ನಡುವಣ ತ್ರಿಕೋನ ಸರಣಿಯ ಅಂತಿಮ ಪಂದ್ಯವು ದಂಬುಲ್ಲಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ಮತ್ತು ಭಾರತ ಎ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿದೆ.

ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ
Vaibhav - PriyanshImage Credit source: BCCI
ಝಾಹಿರ್ ಯೂಸುಫ್
|

Updated on: Jun 21, 2026 | 1:52 PM

Share

ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 333 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ 11 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳನ್ನು ಬಾರಿಸಿದ್ದರು. ಈ ಮೂಲಕ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಅರ್ಧಶತಕದ ಬಳಿಕ ಕೂಡ ಅಬ್ಬರಿಸಿದ ವೈಭವ್ ಸೂರ್ಯವಂಶಿ 29 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 94 ರನ್ ಬಾರಿಸಿ ಔಟಾದರು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾ ಸ್ಕೋರ್ 8.1 ಓವರ್​ಗಳಲ್ಲಿ 132 ಕ್ಕೆ ಬಂದು ನಿಂತಿತ್ತು. ಅತ್ತ ವೈಭವ್ ಔಟಾಗುತ್ತಿದ್ದಂತೆ ಪ್ರಿಯಾಂಶ್ ಆರ್ಯ (39) ಕೂಡ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ರುತುರಾಜ್ ಗಾಯಕ್ವಾಡ್ 40 ರನ್ ಬಾರಿಸಿದರೆ, ನಾಯಕ ತಿಲಕ್ ವರ್ಮಾ 67 ರನ್​ ಸಿಡಿಸಿದರು. ಇನ್ನು ಕುಮಾರ್ ಕುಶಾಗ್ರ 36 ರನ್​ಗಳ ಕೊಡುಗೆ ನೀಡಿದರು.  ಆದರೆ ಕಳೆದ ಮ್ಯಾಚ್​ನಲ್ಲಿ ಅಬ್ಬರಿಸಿದ್ದ ಸೂರ್ಯಂಶ್ ಶೆಡ್ಗೆ ಈ ಬಾರಿ ಕೇವಲ 2 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು.

ಇನ್ನು ಅಂತಿಮ ಹಂತದಲ್ಲಿ ಅಬ್ಬರಿಸಿದ ಅನ್ಕೂಲ್ ರಾಯ್ 15 ಎಸೆತಗಳಲ್ಲಿ 39 ರನ್ ಚಚ್ಚಿದರು. ಈ ಮೂಲಕ ಭಾರತ ಎ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 377 ರನ್ ಕಲೆಹಾಕಿದೆ.

ಶ್ರೀಲಂಕಾ ಎ ಪ್ಲೇಯಿಂಗ್ 11: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್) , ಅವಿಷ್ಕಾ ಫೆರ್ನಾಂಡೊ , ನುವಾನಿಡು ಫೆರ್ನಾಂಡೊ , ಸದೀರ ಸಮರವಿಕ್ರಮ , ಸಹನ್ ಅರಚ್ಚಿಗೆ (ನಾಯಕ) , ರವಿಂದು ಫರ್ನಾಂಡೊ , ವನುಜಾ ಸಹನ್ , ಮೊಹಮ್ಮದ್ ಶಿರಾಜ್ , ವಿಜಯಕಾಂತ್ ವಿಯಸ್ಕಾಂತ್ , ದುಲಾಜ್ ಸಮುದಿತಾ ,ಕುಗಥಾಸ್ ಮಥುಲನ್.

ಇದನ್ನೂ ಓದಿ: ಪೊಲಾರ್ಡ್​ ಪವರ್​ಗೆ ಗೇಲ್ ಸಾರ್ವಕಾಲಿಕ ವಿಶ್ವ ದಾಖಲೆ ಉಡೀಸ್!

ಭಾರತ ಎ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ , ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಕುಮಾರ್ ಕುಶಾಗ್ರ (ವಿಕೆಟ್ ಕೀಪರ್) , ಸೂರ್ಯಾಂಶ್ ಶೆಡ್ಗೆ , ನಿಶಾಂತ್ ಸಿಂಧು , ಅನ್ಕೂಲ್ ರಾಯ್ , ವಿಪ್ರಾಜ್ ನಿಗಮ್ , ಅಶೋಕ್ ಶರ್ಮಾ , ಯಶ್ ಠಾಕೂರ್.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?