AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್‌ನೆಸ್ ಪರೀಕ್ಷೆಯಿಂದ ಬೇಸತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 20 ರ ಹರೆಯದ ಲಂಕಾ ಕ್ರಿಕೆಟರ್..!

Bhanuka Rajapaksa: 20 ವರ್ಷದ ಭಾನುಕಾ ರಾಜಪಕ್ಸೆ ಕೌಟುಂಬಿಕ ಕಾರಣಗಳಿಂದ ಬೇಗ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. ತಮ್ಮ ನಿವೃತ್ತಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ಕಟ್ಟುನಿಟ್ಟಿನ ಫಿಟ್ನೆಸ್ ನಿಯಮಗಳನ್ನು ಸಹ ಅವರು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ.

ಫಿಟ್‌ನೆಸ್ ಪರೀಕ್ಷೆಯಿಂದ ಬೇಸತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 20 ರ ಹರೆಯದ ಲಂಕಾ ಕ್ರಿಕೆಟರ್..!
ಭಾನುಕಾ ರಾಜಪಕ್ಸೆ,
TV9 Web
| Edited By: |

Updated on: Jan 05, 2022 | 3:32 PM

Share

ಶ್ರೀಲಂಕಾದ ಬ್ಯಾಟ್ಸ್‌ಮನ್ ಭಾನುಕಾ ರಾಜಪಕ್ಸೆ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇದರ ಅಡಿಯಲ್ಲಿ ಅವರು ಶ್ರೀಲಂಕಾ ಕ್ರಿಕೆಟ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. 20 ವರ್ಷದ ಭಾನುಕಾ ರಾಜಪಕ್ಸೆ ಕೌಟುಂಬಿಕ ಕಾರಣಗಳಿಂದ ಬೇಗ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. ತಮ್ಮ ನಿವೃತ್ತಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ಕಟ್ಟುನಿಟ್ಟಿನ ಫಿಟ್ನೆಸ್ ನಿಯಮಗಳನ್ನು ಸಹ ಅವರು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಶ್ರೀಲಂಕಾದ ಮಾಧ್ಯಮಗಳ ಪ್ರಕಾರ, ರಾಜಪಕ್ಸೆ ಅವರು ಈಗ ರೂಪಿಸಿರುವ ರೀತಿಯ ಫಿಟ್ನೆಸ್ ನಿಯಮಗಳು ಅವರ ಪವರ್ ಹಿಟ್ಟಿಂಗ್ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಹೇಳುತ್ತಾರೆ.

ಇದೇ ವೇಳೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೊರಡಿಸಿರುವ ಹೇಳಿಕೆಯಲ್ಲಿ ಕೌಟುಂಬಿಕ ಹೊಣೆಗಾರಿಕೆಯಿಂದ ನಿವೃತ್ತಿಯಾಗುವ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಕ್ರೀಡಾಪಟುವಾಗಿ ನನ್ನ ಸ್ಥಾನವನ್ನು ನಾನು ಎಚ್ಚರಿಕೆಯಿಂದ ಯೋಚಿಸಿದ್ದೇನೆ ಮತ್ತು ತಂದೆಯಾಗಿ ನನ್ನ ಪಾತ್ರ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ರಾಜಪಕ್ಸೆ ಉಲ್ಲೇಖಿಸಿದ್ದಾರೆ. ಈ ವಿಚಾರದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಾಜಪಕ್ಸೆ ಅವರ ರಾಜೀನಾಮೆಯನ್ನೂ ಅವರು ಅಂಗೀಕರಿಸಿಲ್ಲ.

ಭಾನುಕಾ ರಾಜಪಕ್ಸೆ ಶ್ರೀಲಂಕಾ ಪರ ಐದು ODI ಮತ್ತು 18 T20I ಪಂದ್ಯಗಳನ್ನು ಆಡಿದ್ದಾರೆ. ಎರಡು ಅರ್ಧಶತಕಗಳ ನೆರವಿನಿಂದ ಈ ಎಲ್ಲದರಲ್ಲಿ 409 ರನ್ ಗಳಿಸಿದರು. ಅವರು 2021 ರ ಟಿ 20 ವಿಶ್ವಕಪ್‌ಗಾಗಿ ಶ್ರೀಲಂಕಾ ತಂಡದ ಭಾಗವಾಗಿದ್ದರು. ಈ ಟೂರ್ನಿಯಲ್ಲಿ ಶ್ರೀಲಂಕಾ ಪರ ಎಂಟು ಪಂದ್ಯಗಳಲ್ಲಿ 155 ರನ್ ಗಳಿಸಿದ್ದರು.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ