AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್‌ನೆಸ್ ಪರೀಕ್ಷೆಯಿಂದ ಬೇಸತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 20 ರ ಹರೆಯದ ಲಂಕಾ ಕ್ರಿಕೆಟರ್..!

Bhanuka Rajapaksa: 20 ವರ್ಷದ ಭಾನುಕಾ ರಾಜಪಕ್ಸೆ ಕೌಟುಂಬಿಕ ಕಾರಣಗಳಿಂದ ಬೇಗ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. ತಮ್ಮ ನಿವೃತ್ತಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ಕಟ್ಟುನಿಟ್ಟಿನ ಫಿಟ್ನೆಸ್ ನಿಯಮಗಳನ್ನು ಸಹ ಅವರು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ.

ಫಿಟ್‌ನೆಸ್ ಪರೀಕ್ಷೆಯಿಂದ ಬೇಸತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 20 ರ ಹರೆಯದ ಲಂಕಾ ಕ್ರಿಕೆಟರ್..!
ಭಾನುಕಾ ರಾಜಪಕ್ಸೆ,
TV9 Web
| Updated By: ಪೃಥ್ವಿಶಂಕರ|

Updated on: Jan 05, 2022 | 3:32 PM

Share

ಶ್ರೀಲಂಕಾದ ಬ್ಯಾಟ್ಸ್‌ಮನ್ ಭಾನುಕಾ ರಾಜಪಕ್ಸೆ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇದರ ಅಡಿಯಲ್ಲಿ ಅವರು ಶ್ರೀಲಂಕಾ ಕ್ರಿಕೆಟ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. 20 ವರ್ಷದ ಭಾನುಕಾ ರಾಜಪಕ್ಸೆ ಕೌಟುಂಬಿಕ ಕಾರಣಗಳಿಂದ ಬೇಗ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. ತಮ್ಮ ನಿವೃತ್ತಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ಕಟ್ಟುನಿಟ್ಟಿನ ಫಿಟ್ನೆಸ್ ನಿಯಮಗಳನ್ನು ಸಹ ಅವರು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಶ್ರೀಲಂಕಾದ ಮಾಧ್ಯಮಗಳ ಪ್ರಕಾರ, ರಾಜಪಕ್ಸೆ ಅವರು ಈಗ ರೂಪಿಸಿರುವ ರೀತಿಯ ಫಿಟ್ನೆಸ್ ನಿಯಮಗಳು ಅವರ ಪವರ್ ಹಿಟ್ಟಿಂಗ್ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಹೇಳುತ್ತಾರೆ.

ಇದೇ ವೇಳೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೊರಡಿಸಿರುವ ಹೇಳಿಕೆಯಲ್ಲಿ ಕೌಟುಂಬಿಕ ಹೊಣೆಗಾರಿಕೆಯಿಂದ ನಿವೃತ್ತಿಯಾಗುವ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಕ್ರೀಡಾಪಟುವಾಗಿ ನನ್ನ ಸ್ಥಾನವನ್ನು ನಾನು ಎಚ್ಚರಿಕೆಯಿಂದ ಯೋಚಿಸಿದ್ದೇನೆ ಮತ್ತು ತಂದೆಯಾಗಿ ನನ್ನ ಪಾತ್ರ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ರಾಜಪಕ್ಸೆ ಉಲ್ಲೇಖಿಸಿದ್ದಾರೆ. ಈ ವಿಚಾರದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಾಜಪಕ್ಸೆ ಅವರ ರಾಜೀನಾಮೆಯನ್ನೂ ಅವರು ಅಂಗೀಕರಿಸಿಲ್ಲ.

ಭಾನುಕಾ ರಾಜಪಕ್ಸೆ ಶ್ರೀಲಂಕಾ ಪರ ಐದು ODI ಮತ್ತು 18 T20I ಪಂದ್ಯಗಳನ್ನು ಆಡಿದ್ದಾರೆ. ಎರಡು ಅರ್ಧಶತಕಗಳ ನೆರವಿನಿಂದ ಈ ಎಲ್ಲದರಲ್ಲಿ 409 ರನ್ ಗಳಿಸಿದರು. ಅವರು 2021 ರ ಟಿ 20 ವಿಶ್ವಕಪ್‌ಗಾಗಿ ಶ್ರೀಲಂಕಾ ತಂಡದ ಭಾಗವಾಗಿದ್ದರು. ಈ ಟೂರ್ನಿಯಲ್ಲಿ ಶ್ರೀಲಂಕಾ ಪರ ಎಂಟು ಪಂದ್ಯಗಳಲ್ಲಿ 155 ರನ್ ಗಳಿಸಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ