AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪ್ರೋಟೋಕಾಲ್ ಉಲ್ಲಂಘನೆ; ಲಂಕಾ ತಂಡದ 3 ಆಟಗಾರರಿಗೆ 1 ವರ್ಷ ಕ್ರಿಕೆಟ್​ನಿಂದ ನಿಷೇಧ, 1 ಕೋಟಿ ರೂ. ದಂಡ!

ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಶುಕ್ರವಾರ 30 ಜುಲೈ ಮೂರು ಆಟಗಾರರ ಮೇಲೆ ನಿಷೇಧ ಮತ್ತು ದಂಡವನ್ನು ಘೋಷಿಸಿತು.

ಕೊವಿಡ್ ಪ್ರೋಟೋಕಾಲ್ ಉಲ್ಲಂಘನೆ; ಲಂಕಾ ತಂಡದ 3 ಆಟಗಾರರಿಗೆ 1 ವರ್ಷ ಕ್ರಿಕೆಟ್​ನಿಂದ ನಿಷೇಧ, 1 ಕೋಟಿ ರೂ. ದಂಡ!
ಶ್ರೀಲಂಕಾ ಕ್ರಿಕೆಟ್ ತಂಡ
TV9 Web
| Edited By: |

Updated on: Jul 31, 2021 | 7:17 AM

Share

ಭಾರತದ ವಿರುದ್ಧ ಟಿ 20 ಸರಣಿಯಲ್ಲಿ ಗೆಲುವಿನ ಸಂಭ್ರಮದಲ್ಲಿರುವ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಅಶಿಸ್ತಿನಿಂದಾಗಿ ತಂಡದ 3 ಆಟಗಾರರ ಮೇಲೆ ಮಂಡಳಿ ಒಂದು ವರ್ಷದ ನಿಷೇಧ ಹೇರಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಕೊವಿಡ್ -19 ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಕುಸಾಲ್ ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ ಮತ್ತು ಧನುಷ್ಕಾ ಗುಣತಿಲಕ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಒಂದು ವರ್ಷ ಅಮಾನತುಗೊಳಿಸಿತು. ಇದಲ್ಲದೆ ಈ ಮೂವರು ಆಟಗಾರರಿಗೂ ಭಾರಿ ದಂಡ ವಿಧಿಸಲಾಗಿದೆ. ಕ್ರಿಕೆಟ್ ಶ್ರೀಲಂಕಾ ಈ ವಿಷಯವನ್ನು ತನಿಖೆ ಮಾಡುವ ಮತ್ತು ವಿಚಾರಣೆ ನಡೆಸುವ ಶಿಸ್ತಿನ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ನಿಷೇಧವನ್ನು ಘೋಷಿಸಿತು.

ಕಳೆದ ತಿಂಗಳು ಇಂಗ್ಲೆಂಡ್ ಪ್ರವಾಸದಲ್ಲಿ, ಈ ಮೂವರು ಆಟಗಾರರು ಟಿ 20 ಸರಣಿಯ ಸೋಲಿನ ನಂತರ ತಡರಾತ್ರಿ ಡರ್ಹಾಮ್ ಬೀದಿಗಳಲ್ಲಿ ಓಡಾಡುತ್ತಿದ್ದರು. ಈ ಮೂವರು ಆಟಗಾರರ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಯಾರೋ ಪೋಸ್ಟ್ ಮಾಡಿದ್ದರು. ನಂತರ ಬಯೋ-ಬಬಲ್ ಮತ್ತು ಕೊವಿಡ್ ಪ್ರೋಟೋಕಾಲ್ ಉಲ್ಲಂಘನೆ ಬಹಿರಂಗವಾಗಿತ್ತು. ಶ್ರೀಲಂಕಾ ಕ್ರಿಕೆಟ್ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮೂವರು ಆಟಗಾರರನ್ನು ಅಮಾನತು ಮಾಡಿ ಅವರನ್ನು ಇಂಗ್ಲೆಂಡಿನಿಂದ ವಾಪಸ್ ಕಳುಹಿಸಿತು. ಈ ಕಾರಣದಿಂದಾಗಿ, ಅವರು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಅಲ್ಲದೇ, ಇತ್ತೀಚೆಗೆ ಭಾರತ ವಿರುದ್ಧದ ಸ್ವದೇಶಿ ಏಕದಿನ ಮತ್ತು ಟಿ 20 ಸರಣಿಗೆ ಅವರನ್ನು ಆಯ್ಕೆ ಮಾಡಿಲ್ಲ.

1 ವರ್ಷ ಅಮಾನತು, 1 ಕೋಟಿ ರೂ. ದಂಡ ವಿಧಿಸಲಾಗಿದೆ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಶುಕ್ರವಾರ 30 ಜುಲೈ ಮೂರು ಆಟಗಾರರ ಮೇಲೆ ನಿಷೇಧ ಮತ್ತು ದಂಡವನ್ನು ಘೋಷಿಸಿತು. ಆಟಗಾರರನ್ನು ಎಸ್‌ಎಲ್‌ಸಿ ನೇಮಿಸಿದ ನಿವೃತ್ತ ನ್ಯಾಯಾಧೀಶರ ನೇತೃತ್ವದ ಶಿಸ್ತಿನ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ನಂತರ ಸಮಿತಿಯು ಡಿಕ್ವೆಲ್ಲಾಗೆ 18 ತಿಂಗಳ ನಿಷೇಧವನ್ನು ಶಿಫಾರಸು ಮಾಡಿತು. ಆದರೆ ಮೆಂಡಿಸ್ ಮತ್ತು ಗುಣತಿಲಕ ಅವರನ್ನು ಎರಡು ವರ್ಷಗಳ ಕಾಲ ನಿಷೇಧಿಸಲಾಯಿತು.

ಆದರೆ, ಎಸ್‌ಎಲ್‌ಸಿ ನಿರ್ಬಂಧಗಳನ್ನು ಸಡಿಲಿಸಿ ಮೂವರು ಆಟಗಾರರನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡುವುದನ್ನು ಒಂದು ವರ್ಷ ನಿಷೇಧಿಸಿತು. ಅವರ ಉಳಿದ ಒಂದು ವರ್ಷದ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ. ಈ ಅಮಾನತುಗೊಂಡ ಶಿಕ್ಷೆಯು ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಈ ಸಮಯದಲ್ಲಿ ಈ ಆಟಗಾರರು ಮತ್ತೆ ನಿಯಮಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಬೇಕಾಗುತ್ತದೆ. ಆದರೆ, ಈ ಮೂವರು ಕ್ರಿಕೆಟಿಗರು 6 ತಿಂಗಳ ನಂತರ ದೇಶೀಯ ಕ್ರಿಕೆಟ್‌ಗೆ ಮರಳಲು ಸಾಧ್ಯವಾಗುತ್ತದೆ. ಇದಲ್ಲದೆ ಮೂವರು ಆಟಗಾರರಿಗೆ ಒಂದು ಕೋಟಿ ಶ್ರೀಲಂಕಾ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಇದನ್ನೂ ಓದಿ: ರಾಹುಲ್- ಅಥಿಯಾ, ಕೊಹ್ಲಿ- ಅನುಷ್ಕಾ; ಇಂಗ್ಲೆಂಡ್​ ಬೀದಿಗಳಲ್ಲಿ ಮಾಡೆಲ್​ಗಳಂತೆ ಫೋಟೋಗಳಿಗೆ ಪೋಸ್ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗರು

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು