AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪ್ರೋಟೋಕಾಲ್ ಉಲ್ಲಂಘನೆ; ಲಂಕಾ ತಂಡದ 3 ಆಟಗಾರರಿಗೆ 1 ವರ್ಷ ಕ್ರಿಕೆಟ್​ನಿಂದ ನಿಷೇಧ, 1 ಕೋಟಿ ರೂ. ದಂಡ!

ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಶುಕ್ರವಾರ 30 ಜುಲೈ ಮೂರು ಆಟಗಾರರ ಮೇಲೆ ನಿಷೇಧ ಮತ್ತು ದಂಡವನ್ನು ಘೋಷಿಸಿತು.

ಕೊವಿಡ್ ಪ್ರೋಟೋಕಾಲ್ ಉಲ್ಲಂಘನೆ; ಲಂಕಾ ತಂಡದ 3 ಆಟಗಾರರಿಗೆ 1 ವರ್ಷ ಕ್ರಿಕೆಟ್​ನಿಂದ ನಿಷೇಧ, 1 ಕೋಟಿ ರೂ. ದಂಡ!
ಶ್ರೀಲಂಕಾ ಕ್ರಿಕೆಟ್ ತಂಡ
TV9 Web
| Edited By: |

Updated on: Jul 31, 2021 | 7:17 AM

Share

ಭಾರತದ ವಿರುದ್ಧ ಟಿ 20 ಸರಣಿಯಲ್ಲಿ ಗೆಲುವಿನ ಸಂಭ್ರಮದಲ್ಲಿರುವ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಅಶಿಸ್ತಿನಿಂದಾಗಿ ತಂಡದ 3 ಆಟಗಾರರ ಮೇಲೆ ಮಂಡಳಿ ಒಂದು ವರ್ಷದ ನಿಷೇಧ ಹೇರಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಕೊವಿಡ್ -19 ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಕುಸಾಲ್ ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ ಮತ್ತು ಧನುಷ್ಕಾ ಗುಣತಿಲಕ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಒಂದು ವರ್ಷ ಅಮಾನತುಗೊಳಿಸಿತು. ಇದಲ್ಲದೆ ಈ ಮೂವರು ಆಟಗಾರರಿಗೂ ಭಾರಿ ದಂಡ ವಿಧಿಸಲಾಗಿದೆ. ಕ್ರಿಕೆಟ್ ಶ್ರೀಲಂಕಾ ಈ ವಿಷಯವನ್ನು ತನಿಖೆ ಮಾಡುವ ಮತ್ತು ವಿಚಾರಣೆ ನಡೆಸುವ ಶಿಸ್ತಿನ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ನಿಷೇಧವನ್ನು ಘೋಷಿಸಿತು.

ಕಳೆದ ತಿಂಗಳು ಇಂಗ್ಲೆಂಡ್ ಪ್ರವಾಸದಲ್ಲಿ, ಈ ಮೂವರು ಆಟಗಾರರು ಟಿ 20 ಸರಣಿಯ ಸೋಲಿನ ನಂತರ ತಡರಾತ್ರಿ ಡರ್ಹಾಮ್ ಬೀದಿಗಳಲ್ಲಿ ಓಡಾಡುತ್ತಿದ್ದರು. ಈ ಮೂವರು ಆಟಗಾರರ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಯಾರೋ ಪೋಸ್ಟ್ ಮಾಡಿದ್ದರು. ನಂತರ ಬಯೋ-ಬಬಲ್ ಮತ್ತು ಕೊವಿಡ್ ಪ್ರೋಟೋಕಾಲ್ ಉಲ್ಲಂಘನೆ ಬಹಿರಂಗವಾಗಿತ್ತು. ಶ್ರೀಲಂಕಾ ಕ್ರಿಕೆಟ್ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮೂವರು ಆಟಗಾರರನ್ನು ಅಮಾನತು ಮಾಡಿ ಅವರನ್ನು ಇಂಗ್ಲೆಂಡಿನಿಂದ ವಾಪಸ್ ಕಳುಹಿಸಿತು. ಈ ಕಾರಣದಿಂದಾಗಿ, ಅವರು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಅಲ್ಲದೇ, ಇತ್ತೀಚೆಗೆ ಭಾರತ ವಿರುದ್ಧದ ಸ್ವದೇಶಿ ಏಕದಿನ ಮತ್ತು ಟಿ 20 ಸರಣಿಗೆ ಅವರನ್ನು ಆಯ್ಕೆ ಮಾಡಿಲ್ಲ.

1 ವರ್ಷ ಅಮಾನತು, 1 ಕೋಟಿ ರೂ. ದಂಡ ವಿಧಿಸಲಾಗಿದೆ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಶುಕ್ರವಾರ 30 ಜುಲೈ ಮೂರು ಆಟಗಾರರ ಮೇಲೆ ನಿಷೇಧ ಮತ್ತು ದಂಡವನ್ನು ಘೋಷಿಸಿತು. ಆಟಗಾರರನ್ನು ಎಸ್‌ಎಲ್‌ಸಿ ನೇಮಿಸಿದ ನಿವೃತ್ತ ನ್ಯಾಯಾಧೀಶರ ನೇತೃತ್ವದ ಶಿಸ್ತಿನ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ನಂತರ ಸಮಿತಿಯು ಡಿಕ್ವೆಲ್ಲಾಗೆ 18 ತಿಂಗಳ ನಿಷೇಧವನ್ನು ಶಿಫಾರಸು ಮಾಡಿತು. ಆದರೆ ಮೆಂಡಿಸ್ ಮತ್ತು ಗುಣತಿಲಕ ಅವರನ್ನು ಎರಡು ವರ್ಷಗಳ ಕಾಲ ನಿಷೇಧಿಸಲಾಯಿತು.

ಆದರೆ, ಎಸ್‌ಎಲ್‌ಸಿ ನಿರ್ಬಂಧಗಳನ್ನು ಸಡಿಲಿಸಿ ಮೂವರು ಆಟಗಾರರನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡುವುದನ್ನು ಒಂದು ವರ್ಷ ನಿಷೇಧಿಸಿತು. ಅವರ ಉಳಿದ ಒಂದು ವರ್ಷದ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ. ಈ ಅಮಾನತುಗೊಂಡ ಶಿಕ್ಷೆಯು ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಈ ಸಮಯದಲ್ಲಿ ಈ ಆಟಗಾರರು ಮತ್ತೆ ನಿಯಮಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಬೇಕಾಗುತ್ತದೆ. ಆದರೆ, ಈ ಮೂವರು ಕ್ರಿಕೆಟಿಗರು 6 ತಿಂಗಳ ನಂತರ ದೇಶೀಯ ಕ್ರಿಕೆಟ್‌ಗೆ ಮರಳಲು ಸಾಧ್ಯವಾಗುತ್ತದೆ. ಇದಲ್ಲದೆ ಮೂವರು ಆಟಗಾರರಿಗೆ ಒಂದು ಕೋಟಿ ಶ್ರೀಲಂಕಾ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಇದನ್ನೂ ಓದಿ: ರಾಹುಲ್- ಅಥಿಯಾ, ಕೊಹ್ಲಿ- ಅನುಷ್ಕಾ; ಇಂಗ್ಲೆಂಡ್​ ಬೀದಿಗಳಲ್ಲಿ ಮಾಡೆಲ್​ಗಳಂತೆ ಫೋಟೋಗಳಿಗೆ ಪೋಸ್ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗರು

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ