AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Protests: ಪ್ರತಿಭಟನೆಗೆ ಧುಮುಕಿದ ಲಂಕಾ ಕ್ರಿಕೆಟಿಗ ಜಯಸೂರ್ಯ; ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

Sri Lanka Protests: ಪ್ರತಿಭಟನಾಕಾರರು ರಾಷ್ಟ್ರಪತಿ ಭವನವನ್ನು ಆಕ್ರಮಿಸಿಕೊಂಡ ನಂತರ, ಜಯಸೂರ್ಯ ಮತ್ತೊಂದು ಟ್ವೀಟ್ ಮಾಡಿದ್ದು, ಜನರು ನಿಮ್ಮನ್ನು ಗೆಲ್ಲಿಸಿದ್ದಾರೆ. ಆದ್ದರಿಂದ ರಾಷ್ಟ್ರಪತಿಗಳು ಈಗ ತಮ್ಮ ಗೌರವವನ್ನು ಕಾಪಾಡಿಕೊಂಡು ತಕ್ಷಣ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

Sri Lanka Protests: ಪ್ರತಿಭಟನೆಗೆ ಧುಮುಕಿದ ಲಂಕಾ ಕ್ರಿಕೆಟಿಗ ಜಯಸೂರ್ಯ; ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ
ಪ್ರತಿಭಟನಕಾರರೊಂದಿಗೆ ಜಯಸೂರ್ಯ
TV9 Web
| Updated By: ಪೃಥ್ವಿಶಂಕರ|

Updated on:Jul 09, 2022 | 5:21 PM

Share

ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನಿಂದ ಉಂಟಾದ ರಾಜಕೀಯ ಬಿಕ್ಕಟ್ಟು ಇದೀಗ ಉತ್ತುಂಗಕ್ಕೇರಿದೆ. ರಾಜಧಾನಿ ಕೊಲಂಬೊದಲ್ಲಿ ದೇಶದ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆ ಉಗ್ರರೂಪ ತಾಳಿದೆ. ಶನಿವಾರ ಜುಲೈ 9 ರಂದು, ಪ್ರತಿಭಟನಾಕಾರರು ರಾಜಧಾನಿಯ ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸಿ, ರಾಷ್ಟ್ರಪತಿ ಭವನಕ್ಕೆ ಮುತ್ತಿಗೆ ಹಾಕಿದ್ದಾರೆ. ಇದರಿಂದ ಅಧ್ಯಕ್ಷರು ತಮ್ಮ ನಿವಾಸ ಬಿಟ್ಟು ಓಡಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಶ್ರೀಲಂಕಾದಲ್ಲಿ ಹಲವು ತಿಂಗಳುಗಳಿಂದ ಈ ಪ್ರತಿಭಟನೆ ನಡೆಯುತ್ತಿದ್ದು, ಇದೀಗ ದೇಶದ ಕೆಲ ಮಾಜಿ ಆಟಗಾರರು ಕೂಡ ಇದರಲ್ಲಿ ಪಾಲ್ಗೊಳ್ಳಲು ಆರಂಭಿಸಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಅನುಭವಿ ಬ್ಯಾಟ್ಸ್‌ಮನ್ ಸನತ್ ಜಯಸೂರ್ಯ ಕೂಡ ಶನಿವಾರ ರಾಜಧಾನಿಯಲ್ಲಿ ಪ್ರತಿಭಟನಾಕಾರರೊಂದಿಗೆ ಕಾಣಿಸಿಕೊಂಡು ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು.

ತಮ್ಮ ಅಬ್ಬರದ ಬ್ಯಾಟಿಂಗ್ ಮೂಲಕ ಬೌಲರ್​ಗಳಿಗೆ ಸಿಂಹಸ್ವಪ್ನರಾಗಿದ್ದ ಜಯಸೂರ್ಯ, ಸರ್ಕಾರಿ ವಿರೋಧಿ ಹೋರಾಟಗಾರರ ಜತೆಗೂಡಿ ಅವರನ್ನು ಹುರಿದುಂಬಿಸಿದರು. ಈ ಸಮಯದಲ್ಲಿ, ಅನೇಕ ಪ್ರತಿಭಟನಾಕಾರರು ಶ್ರೀಲಂಕಾದ ದಂತಕಥೆಯೊಂದಿಗೆ ಸೆಲ್ಫಿಗೆ ಪೋಸ್ ನೀಡುತ್ತಿರುವುದು ಕಂಡುಬಂತು. ಈಗ ಜಯಸೂರ್ಯ, ಪ್ರತಿಭಟನಾಕಾರರೊಂದಿಗಿನ ಫೋಟೋಗಳನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಧ್ಯಕ್ಷರ ರಾಜೀನಾಮೆ

ಪ್ರತಿಭಟನಾಕಾರರು ರಾಷ್ಟ್ರಪತಿ ಭವನವನ್ನು ಆಕ್ರಮಿಸಿಕೊಂಡ ನಂತರ, ಜಯಸೂರ್ಯ ಮತ್ತೊಂದು ಟ್ವೀಟ್ ಮಾಡಿದ್ದು, ಜನರು ನಿಮ್ಮನ್ನು ಗೆಲ್ಲಿಸಿದ್ದಾರೆ. ಆದ್ದರಿಂದ ರಾಷ್ಟ್ರಪತಿಗಳು ಈಗ ತಮ್ಮ ಗೌರವವನ್ನು ಕಾಪಾಡಿಕೊಂಡು ತಕ್ಷಣ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ, ಮುತ್ತಿಗೆ ಮುಗಿದಿದೆ. ನಿಮ್ಮ ಕೋಟೆ ಕುಸಿದಿದೆ. ಜನರ ಹೋರಾಟ ಮತ್ತು ಜನ ಶಕ್ತಿ ಗೆದ್ದಿದೆ. ದಯವಿಟ್ಟು ಸ್ವಲ್ಪ ಗೌರವ ನೀಡಿ ರಾಜೀನಾಮೆ ನೀಡಿ ಎಂದು ಬರೆದುಕೊಂಡಿದ್ದಾರೆ

ಗಾಲೆ ಟೆಸ್ಟ್​ನಲ್ಲೂ ಪ್ರತಿಭಟನೆಯ ಬಿಸಿ

ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ-ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್‌ ಮೇಲ್ಲೂ ಪ್ರತಿಭಟನೆಯ ಕಾವು ತಟ್ಟಿದೆ. ಶನಿವಾರವೇ ನೂರಾರು ಪ್ರತಿಭಟನಾಕಾರರು ತಮ್ಮ ಕೈಯಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳೊಂದಿಗೆ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತ, ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ಗಾಲೆ ಕೋಟೆಯನ್ನು ತಲುಪಿದ್ದರು.

ಮಾಜಿ ಪ್ರಧಾನಿ ವಿರುದ್ಧವೂ ಪ್ರತಿಭಟನೆ

ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹಲವಾರು ತಿಂಗಳುಗಳಿಂದ ಈ ಜನಾಂದೋಲನ ನಡೆಯುತ್ತಿದೆ. ಕೆಲವು ವಾರಗಳ ಹಿಂದೆ, ಪ್ರತಿಭಟನಾಕಾರರು ದೇಶದ ಮಾಜಿ ಪ್ರಧಾನಿ ಮತ್ತು ಗೋತಬಯ ಅವರ ಸಹೋದರ ಮಹಿದ್ರಾ ರಾಜಪಕ್ಸೆ ಅವರ ವಿರುದ್ಧ ಮೆರವಣಿಗೆ ನಡೆಸಿದರು. ಆದರೆ ನಂತರ ಭದ್ರತಾ ಸಿಬ್ಬಂದಿ, ರಾಜಪಕ್ಸೆ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಘರ್ಷಣೆ ನಡೆಯಿತು, ಅದು ಹಿಂಸಾಚಾರಕ್ಕೆ ತಿರುಗಿತು. ಅದರಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದರು.

Published On - 5:20 pm, Sat, 9 July 22

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ