AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯಕ್ಕೂ ಮುನ್ನ ಬಾಂಗ್ಲಾ- ಲಂಕಾ ತಂಡಗಳ ನಡುವೆ ವಾಕ್ಸಮರ; ಉರಿವ ಬೆಂಕಿಗೆ ತುಪ್ಪ ಸುರಿದ ಜಯವರ್ಧನೆ!

Asia Cup 2022: ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಕಂಡು ಬಂದ ಈ ಉದ್ವಿಗ್ನತೆಯ ನಡುವೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಹೇಳಿಕೆ ನೀಡಿ, ಬೌಲರ್‌ಗಳು ತಮ್ಮ ಕ್ಲಾಸ್ ತೋರಿಸಬೇಕಾದ ಸಮಯ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಂದ್ಯಕ್ಕೂ ಮುನ್ನ ಬಾಂಗ್ಲಾ- ಲಂಕಾ ತಂಡಗಳ ನಡುವೆ ವಾಕ್ಸಮರ; ಉರಿವ ಬೆಂಕಿಗೆ ತುಪ್ಪ ಸುರಿದ ಜಯವರ್ಧನೆ!
Mahela Jayawardene, Dasun Shanaka and Khaled Mahmud
TV9 Web
| Edited By: |

Updated on:Sep 01, 2022 | 4:20 PM

Share

ಶ್ರೀಲಂಕಾ ಮತ್ತು ಬಾಂಗ್ಲಾದೇಶ (Sri Lanka and Bangladesh) ತಂಡಗಳು ಇಂದು ಏಷ್ಯಾಕಪ್‌ನಲ್ಲಿ (Asia Cup 2022) ಮುಖಾಮುಖಿಯಾಗಲಿವೆ. ಉಭಯ ತಂಡಗಳಿಗೂ ಇಂದು ನಡೆಯಲಿರುವ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಈಗಾಗಲೇ ಆಡಿರುವ ಒಂದೊಂದು ಪಮದ್ಯದಲ್ಲಿ ಉಭಯ ತಂಡಗಳು ಸೋಲುಂಡಿವೆ. ಹೀಗಾಘಿ ಇಂದು ಸೋತ ತಂಡದ ಪಯಣ ಇಲ್ಲಿಗೇ ಕೊನೆಗೊಳ್ಳಲಿದೆ. ಈ ಪಂದ್ಯದಲ್ಲಿ ಗೆದ್ದವರು ಪಂದ್ಯಾವಳಿಯ ಮುಂದಿನ ಸುತ್ತು ಅಂದರೆ ಸೂಪರ್ ಫೋರ್ ತಲುಪುತ್ತಾರೆ. ಆದರೆ ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಪರಸ್ಪರ ಕಾಲೆಳೆದುಕೊಂಡಿವೆ.

ಅಖಾಡಕ್ಕಿಳಿಯುವ ಮುನ್ನವೇ ಎರಡು ತಂಡಗಳ ನಡುವಿನ ವಾಕ್ಸಮರ ಪತ್ರಿಕಾಗೋಷ್ಠಿಯಲ್ಲಿ ನಡೆದುಹೋಗಿದೆ. ಮೊದಲು ಪತ್ರಿಕಾಗೋಷ್ಠಿಯಲ್ಲಿ ಶ್ರೀಲಂಕಾ ನಾಯಕ ದಸುನ್ ಶನಕಾ ಬಾಂಗ್ಲಾದೇಶ ತಂಡವನ್ನು ಕಡೆಗಣಿಸಿ ಮಾತನಾಡಿದ್ದಾರೆ. ಬಳಿಕ ಲಂಕಾ ತಂಡದ ನಾಯಕನ ಈ ಮಾತುಗಳನ್ನು ಕೇಳಿದ ಬಾಂಗ್ಲಾದೇಶ ತಂಡದ ನಿರ್ದೇಶಕ ಪ್ರತ್ಯುತ್ತರ ನೀಡಿ ಸೇಡು ತೀರಿಸಿಕೊಂಡಿದ್ದಾರೆ. ಆದರೆ ಈ ವಾಕ್ಸಮರ ಇಷ್ಟಕ್ಕೆ ನಿಂತಿಲ್ಲ ಈ ಇಬ್ಬರ ಹೇಳಿಕೆಗಳ ನಡುವೆ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಮತ್ತೊಂದು ಹೇಳಿಕೆ ನೀಡಿ, ವಾಕ್ಸಮರಕ್ಕೆ ಟ್ವಿಸ್ಟ್ ನೀಡಿದ್ದಾರೆ.

ಶ್ರೀಲಂಕಾ ದಾಳಿ, ಬಾಂಗ್ಲಾದೇಶ ಪ್ರತಿದಾಳಿ

ಅಷ್ಟಕ್ಕೂ ಈ ಯುದ್ಧ ಆರಂಭವಾಗಿದ್ದು, ಶ್ರೀಲಂಕಾ ತಂಡದ ನಾಯಕರಾಗಿರುವ ದಸುನ್ ಶನಕಾ ಅವರ ಪತ್ರಿಕಾಗೋಷ್ಠಿಯಿಂದ. ಪಂದ್ಯಕ್ಕೂ ಮುಂಚಿನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶನಕಾ, ಅಫ್ಘಾನಿಸ್ತಾನ ತಂಡಕ್ಕೆ ಹೋಲಿಸಿದರೆ ಬಾಂಗ್ಲಾದೇಶ ತಂಡ ದುರ್ಬಲವಾಗಿದೆ. ಬಾಂಗ್ಲಾ ಬೌಲಿಂಗ್‌ ವಿಭಾಗದಲ್ಲಿ ಮುಸ್ತಾಫಿಜುರ್ ಮತ್ತು ಶಕೀಬ್ ಅಲ್ ಹಸನ್ ಮಾತ್ರ ವಿಶ್ವ ದರ್ಜೆಯ ಬೌಲರ್‌ಗಳಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ.

ಲಂಕಾ ನಾಯಕನ ಉದ್ದಟತನದ ಹೇಳಿಕೆಯನ್ನು ಆಲಿಸಿದ ಬಾಂಗ್ಲಾದೇಶ ತಂಡದ ನಿರ್ದೇಶಕರು, ದಸುನ್ ಶನಕಾ ಅವರ ಈ ಹೇಳಿಕೆಗೆ ಪ್ರತೀಕಾರ ತೀರಿಸಿಕೊಂಡಿದ್ದಾರೆ. ಬಾಂಗ್ಲಾ ತಂಡದ ತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತಂಡದ ನಿರ್ದೇಶಕರು, ನಮ್ಮಲ್ಲಿ ಇಬ್ಬರು ವಿಶ್ವ ದರ್ಜೆಯ ಬೌಲರ್‌ಗಳು ಇದ್ದಾರೆ ಎಂದು ಅವರು ಅರ್ಥಮಾಡಿಕೊಳ್ಳುತ್ತಿದ್ದಾರೆ. ಆದರೆ ಶ್ರೀಲಂಕಾ ತಂಡದಲ್ಲಿ ಒಬ್ಬನೇ ಒಬ್ಬ ಬೌಲರ್ ಕೂಡ ವಿಶ್ವ ದರ್ಜೆಯವನಲ್ಲ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

ಕಿಡಿಯನ್ನು ಮತ್ತಷ್ಟು ಹೊತ್ತಿಸಿದ ಜಯವರ್ಧನೆ

ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಕಂಡು ಬಂದ ಈ ಉದ್ವಿಗ್ನತೆಯ ನಡುವೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಹೇಳಿಕೆ ನೀಡಿ, ಬೌಲರ್‌ಗಳು ತಮ್ಮ ಕ್ಲಾಸ್ ತೋರಿಸಬೇಕಾದ ಸಮಯ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಉಭಯ ತಂಡಗಳ ನಡುವೆ ಹೊತ್ತಿದ್ದ ಬೆಂಕಿಗೆ ತುಪ್ಪ ಸುರಿದಿದ್ದಾರೆ.

Published On - 4:19 pm, Thu, 1 September 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ