Sri Lanka Squad: ಭಾರತದ ವಿರುದ್ಧದ ಸರಣಿಗೆ ಶ್ರೀಲಂಕಾ ತಂಡ ಪ್ರಕಟ

India vs Sri Lanka: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 3 ರಂದು ಆರಂಭವಾಗಲಿದೆ. ಹಾಗೆಯೇ ಏಕದಿನ ಸರಣಿಯು ಜನವರಿ 10 ರಿಂದ ಶುರುವಾಗಲಿದೆ.

Sri Lanka Squad: ಭಾರತದ ವಿರುದ್ಧದ ಸರಣಿಗೆ ಶ್ರೀಲಂಕಾ ತಂಡ ಪ್ರಕಟ
Sri Lanka Squad
Follow us
| Updated By: ಝಾಹಿರ್ ಯೂಸುಫ್

Updated on: Dec 28, 2022 | 10:24 PM

ಜನವರಿ 3 ರಿಂದ ಶುರುವಾಗಲಿರುವ ಭಾರತದ ವಿರುದ್ಧದ ಸರಣಿಗಾಗಿ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. 20 ಸದಸ್ಯರನ್ನು ಒಳಗೊಂಡಿರುವ ಈ ತಂಡವನ್ನು ದಸುನ್ ಶನಕ ಮುನ್ನಡೆಸಲಿದ್ದು, ಉಪನಾಯಕರಾಗಿ ಕುಸಾಲ್ ಮೆಂಡಿಸ್ (ಏಕದಿನ) ಹಾಗೂ ವನಿಂದು ಹಸರಂಗ (ಟಿ20) ಕಾಣಿಸಿಕೊಳ್ಳಲಿದ್ದಾರೆ. ಏಷ್ಯಾಕಪ್​ ಹಾಗೂ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಬಹುತೇಕ ಆಟಗಾರರನ್ನು ತಂಡದಲ್ಲೇ ಮುಂದುವರೆಸಲಾಗಿದೆ. ಇದಾಗ್ಯೂ ಏಕದಿನ ತಂಡದಲ್ಲಿ ಭಾನುಕಾ ರಾಜಪಕ್ಸೆ ಮತ್ತು ನುವಾನ್ ಕುರಶೇಖರ ಅವರನ್ನು ಆಯ್ಕೆ ಮಾಡಲಾಗಿಲ್ಲ. ಹಾಗೆಯೇ ಜೆಫ್ರಿ ವಾಂಡರ್ಸೆ ಮತ್ತು ನುವಾನಿಡು ಫೆರ್ನಾಂಡೋಗೆ ಟಿ20 ತಂಡದಲ್ಲಿ ಸ್ಥಾನ ಪಡೆದಿಲ್ಲ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 3 ರಂದು ಆರಂಭವಾಗಲಿದೆ. ಹಾಗೆಯೇ ಏಕದಿನ ಸರಣಿಯು ಜನವರಿ 10 ರಿಂದ ಶುರುವಾಗಲಿದೆ. ಈ ಟಿ20 ಸರಣಿಯು ಮುಂಬೈ, ಪುಣೆ ಮತ್ತು ರಾಜ್‌ಕೋಟ್‌ನಲ್ಲಿ ಜನವರಿ 3 ರಿಂದ 7 ರವರೆಗೆ ನಡೆಯಲಿದ್ದು, ಇದಾದ ಬಳಿಕ ಜನವರಿ 10 ರಿಂದ 15ರವರೆಗೆ ಗುವಾಹಟಿ, ಕೋಲ್ಕತ್ತಾ ಮತ್ತು ತಿರುವನಂತಪುರಂನಲ್ಲಿ ಏಕದಿನ ಸರಣಿ ನಡೆಯಲಿದೆ.

ಭಾರತದ ವಿರುದ್ಧದ ಸರಣಿಗೆ ಶ್ರೀಲಂಕಾ ತಂಡ ಹೀಗಿದೆ:

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಟಿ20 ತಂಡದಿಂದ 9 ಆಟಗಾರರು ಔಟ್..!
Image
IPL 2023: ಐಪಿಎಲ್​ಗೆ ಆಯ್ಕೆಯಾಗಿರುವ ಪಾಕ್ ಮೂಲದ 3 ಕ್ರಿಕೆಟಿಗರು ಯಾರು ಗೊತ್ತಾ?
Image
IPL ಆಡಿದ್ದ 11 ಪಾಕ್ ಆಟಗಾರರು ಯಾರು ಗೊತ್ತಾ?
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ-ಏಕದಿನ ತಂಡ), ಭಾನುಕಾ ರಾಜಪಕ್ಸೆ (ಟಿ20), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹರರಂಗ (ಉಪನಾಯಕ-ಟಿ20 ತಂಡ), ಮಹೀಶ್ ತಿಕ್ಷಣ , ಜೆಫ್ರಿ ವಾಂಡರ್ಸೆ (ಏಕದಿನ), ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ (ಏಕದಿನ), ದುನಿತ್ ವೆಲಾಲಗೆ, ಪ್ರಮೋದ್ ಮದುಶನ್, ಲಹಿರು ಕುಮಾರ (ಟಿ20), ನುವನ್ ಕುರಶೇಖರ (ಟಿ20)

ಈ ಸರಣಿಗೆ ಭಾರತ ತಂಡ ಹೀಗಿದೆ:

ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

ಟೀಮ್ ಇಂಡಿಯಾ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

ಭಾರತ-ಶ್ರೀಲಂಕಾ ಸರಣಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ:

ಟಿ20 ಸರಣಿ ವೇಳಾಪಟ್ಟಿ:-

  • ಜನವರಿ 3: ಮೊದಲ ಟಿ20 ಪಂದ್ಯ (ಸ್ಥಳ-ವಾಂಖೆಡೆ ಸ್ಟೇಡಿಯಂ)
  • ಜನವರಿ 5: ಎರಡನೇ ಟಿ20 ಪಂದ್ಯ (ಸ್ಥಳ- ಪುಣೆ ಕ್ರಿಕೆಟ್ ಸ್ಟೇಡಿಯಂ)
  • ಜನವರಿ 7: ಮೂರನೇ ಟಿ20 ಪಂದ್ಯ (ಸ್ಥಳ- ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ- ರಾಜ್​ಕೋಟ್)

ಇದನ್ನೂ ಓದಿ: IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…

ಏಕದಿನ ಸರಣಿ ವೇಳಾಪಟ್ಟಿ:-

  • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗೌಹಾಟಿ)
  • ಜನವರಿ 12: ಎರಡನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಜನವರಿ 15: ಮೂರನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ