AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka vs Namibia T20 World Cup 2022: ಐಸಿಸಿ ಟಿ20 ವಿಶ್ವಕಪ್​ಗೆ ಇಂದು ಚಾಲನೆ: ಶ್ರೀಲಂಕಾ- ನಮೀಬಿಯಾ ಪಂದ್ಯ ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?

T20 World Cup 2022: ಐಸಿಸಿ ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ದಸುನ್ ಶನಕಾ (Dasun Shanaka) ನಾಯಕತ್ವದ ಶ್ರೀಲಂಕಾ ಹಾಗೂ ಗೆರ್ಹಾರ್ಡ್ ಎರಾಸ್ಮಸ್ ನೇತೃತ್ವದ ನಮೀಬಿಯಾ ತಂಡ (Sri Lanka vs Namibia) ಮುಖಾಮುಖಿ ಆಗಲಿದೆ.

Sri Lanka vs Namibia T20 World Cup 2022: ಐಸಿಸಿ ಟಿ20 ವಿಶ್ವಕಪ್​ಗೆ ಇಂದು ಚಾಲನೆ: ಶ್ರೀಲಂಕಾ- ನಮೀಬಿಯಾ ಪಂದ್ಯ ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?
SL vs NAM T20 World Cup
Follow us
TV9 Web
| Updated By: Vinay Bhat

Updated on:Oct 16, 2022 | 8:04 AM

ಕ್ರಿಕೆಟ್ ಪ್ರೇಮಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (T20 World Cup 2022) ಮಹಾ ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ದಸುನ್ ಶನಕಾ (Dasun Shanaka) ನಾಯಕತ್ವದ ಶ್ರೀಲಂಕಾ ಹಾಗೂ ಗೆರ್ಹಾರ್ಡ್ ಎರಾಸ್ಮಸ್ ನೇತೃತ್ವದ ನಮೀಬಿಯಾ ತಂಡ (Sri Lanka vs Namibia) ಮುಖಾಮುಖಿ ಆಗಲಿದೆ. ಗೀಲಾಂಗ್​ನ ಸೈಮಂಡ್ಸ್ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ. ಅರ್ಹತಾ ಸುತ್ತಿನಲ್ಲಿ ಒಟ್ಟು ಎರಡು ಗುಂಪುಗಳಿವೆ. ಎ ಗುಂಪಿನಲ್ಲಿರುವ ನಮೀಬಿಯಾ, ನೆದರ್ಲೆಂಡ್ಸ್, ಶ್ರೀಲಂಕಾ, ಯುಎಇ ತಂಡಗಳು ಮತ್ತು ಬಿ ಗುಂಪಿನಲ್ಲಿರುವ ಐರ್ಲೆಂಡ್, ಸ್ಕಾಟ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳು ಸೆಣಸಾಡಿ, ಇದರಲ್ಲಿ ಅಗ್ರ ನಾಲ್ಕು ತಂಡಗಳು ಸೂಪರ್​ 12 ಪ್ರವೇಶಿಸಲಿವೆ. ಪ್ರತಿ ತಂಡ ಗುಂಪಿನಲ್ಲಿರುವ ಉಳಿದ ಮೂರು ತಂಡಗಳ ವಿರುದ್ಧ ಒಂದು ಪಂದ್ಯ ಆಡಲಿವೆ. ಕೊನೆಯಲ್ಲಿ ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೂಪರ್-12 ನಲ್ಲಿ ಆಡಲಿದ್ದಾರೆ.

ನಮೀಬಿಯಾಕ್ಕೆ ಹೋಲಿಸಿದರೆ ಶ್ರೀಲಂಕಾ ತಂಡವೇ ಬಲಿಷ್ಠವಾಗಿದೆ. ಈ ಬಾರಿಯ ಪುರುಷರ ಏಷ್ಯಾಕಪ್​ನ ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಪಥುಮ್ ನಿಸ್ಸಂಕಾ, ಕುಸಲ್ ಮೆಂಡಿಸ್, ದಸುನ್ ಶನಕಾ, ಧನಂಜಯ್ ಡಿ ಸಿಲ್ವ, ಭನುಕಾ ರಾಜಪಕ್ಸ ಸ್ಟಾರ್ ಬ್ಯಾಟರ್​ಗಳಾಗಿದ್ದಾರೆ. ವನಿಂದು ಹಸರಂಗ, ಚರಿತಾ ಅಲಸಂಕ, ಮಹೀಶಾ ತೀಕ್ಷಣ, ದುಶ್ಮಂತಾ ಚಮೀರಾ ಸ್ಟಾರ್ ಬೌಲರ್​ಗಳಿದ್ದಾರೆ. ಇತ್ತ ನಮೀಬಿಯಾ ತಂಡದಲ್ಲಿ ಕೂಡ ಜಾನ್ ಫ್ರಿಲಿಂಕ್, ಡೇವಿಡ್ ವೈಸ್, ರೂಬೆನ್ ಟ್ರಂಪೆಲ್ಮನ್, ಝೇನ್ ಗ್ರೀನ್ ಮತ್ತು ಬರ್ನಾರ್ಡ್ ಸ್ಕೋಲ್ಟ್ಜ್ ಅವರಂತಹ ಅನುಭವಿ ಆಟಗಾರರನ್ನು ಹೊಂದಿದೆ.

ಪಂದ್ಯದ ಬಗ್ಗೆ ಮಾಹಿತಿ:

ಇದನ್ನೂ ಓದಿ
Image
T20 World Cup 2022: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡುತ್ತಿರುವ ಅತ್ಯಂತ ಕಿರಿಯ ಕ್ರಿಕೆಟಿಗರಿವರು..
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Sourav Ganguly: CAB ಅಧ್ಯಕ್ಷ ಸ್ಥಾನದತ್ತ ಮುಖ ಮಾಡಿದ ಸೌರವ್ ಗಂಗೂಲಿ
Image
Virat Kohli: ವಿರಾಟ್ ಕೊಹ್ಲಿಯ ಬಂಧನಕ್ಕೆ ಟ್ವಿಟರ್​ನಲ್ಲಿ ಆಗ್ರಹ..!

ಶ್ರೀಲಂಕಾ ಮತ್ತು ನಮೀಬಿಯಾ ನಡುವಿನ ಅರ್ಹತಾ ಸುತ್ತಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಶ್ರೀಲಂಕಾ ಮತ್ತು ನಮೀಬಿಯಾ ನಡುವಿನ ಪಂದ್ಯ ನಾಳೆ ಭಾರತೀಯ ಕಾಳಮಾನದ ಪ್ರಕಾರ ಬೆಳಗ್ಗೆ 9:30ಕ್ಕೆ ಶುರುವಾಗಲಿದೆ. 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಶ್ರೀಲಂಕಾ ಮತ್ತು ನಮೀಬಿಯಾ ಪಂದ್ಯ ಎಲ್ಲಿ ನಡೆಯುತ್ತದೆ?

ಶ್ರೀಲಂಕಾ ಮತ್ತು ನಮೀಬಿಯಾ ನಡುವಿನ ಪಂದ್ಯ ಗೀಲಾಂಗ್​ನ ಸೈಮಂಡ್ಸ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಶ್ರೀಲಂಕಾ ಮತ್ತು ನಮೀಬಿಯಾ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ಶ್ರೀಲಂಕಾ ಮತ್ತು ನಮೀಬಿಯಾ ಪಂದ್ಯದ ಲೈವ್ ಸ್ಟ್ರೀಮಿಂಗ್ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರುತ್ತದೆ. ಡಿಸ್ನಿ+ ಹಾಟ್​​ಸ್ಟಾರ್​ನಲ್ಲಿ ಲೈವ್​ಸ್ಟ್ರೀಮ್ ವೀಕ್ಷಿಸಬಹುದು.

ಪಿಚ್-ಹವಾಮಾನ ವರದಿ:

ಗೀಲಾಂಗ್​ನಲ್ಲಿ ಮಧ್ಯಾಹ್ನದ ತಾಪಮಾನವು ಸುಮಾರು 16 ಡಿಗ್ರಿಗಳಷ್ಟಿರುತ್ತದೆ ಮತ್ತು ಮಳೆ ಪಂದ್ಯಕ್ಕೆ ಅಡ್ಡಿಯುಂಟು ಮಾಡುವ ಅಪಾಯವಿದೆ. ಸೈಮಂಡ್ಸ್ ಅಂಗಳದಲ್ಲಿ ಈವರೆಗೆ ಕೇವಲ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯ ನಡೆದಿದೆಯಷ್ಟೆ. ಈ ಪಂದ್ಯದಲ್ಲಿ 174 ರನ್ ಗಳನ್ನು ಯಶಸ್ವಿಯಾಗಿ ಚೇಸ್ ಮಾಡಲಾಗಿದೆ. ಈ ಪಿಚ್‌ ಬ್ಯಾಟರ್ ಗಳಿಗೆ ಹೆಚ್ಚು ಅನುಕೂಲಕರವಾಗಿದ್ದು, ರನ್ ಮಳೆ ಹರಿಯುವ ನಿರೀಕ್ಷಿಯಿದೆ. ಅಲ್ಲದೆ ಶ್ರೀಲಂಕಾ ತಂಡ ಬಲಿಷ್ಠವಾಗಿದ್ದು, ಸುಲಭವಾಗಿ ಗೆಲುವು ಸಾಧಿಸಲು ನೋಡುತ್ತದೆ.

ಉಭಯ ತಂಡಗಳು:

ಶ್ರೀಲಂಕಾ: ಪಥುಮ್ ನಿಸ್ಸಾಂಕಾ, ಕುಸಾಲ್ ಮೆಂಡಿಸ್, ಧನಂಜಯ್ ಡಿ ಸಿಲ್ವ, ದನುಷ್ಕ ಗುಣತಿಲಕ, ಭನುಕಾ ರಾಜಪಕ್ಸ, ದಸುನ್ ಶನಕಾ (ನಾಯಕ), ವನಿಂದು ಹಸರಂಗ, ಚಾಮಿಕಾ ಕರುಣಾರತ್ನೆ, ಪ್ರಮೋದ್ ಮದುಶನ್, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ, ದುಷ್ಮಂತ ಚಮೀರ, ಜೆಫನ್ ವಂದರ್, ಲಾಹಿರು ಕುಮಾರ, ಚರಿತ್ ಅಸಲಂಕ.

ನಮೀಬಿಯಾ: ಸ್ಟೀಫನ್ ಬಾರ್ಡ್, ಡೇವಿಡ್ ವೈಸ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜಾನ್ ನಿಕೋಲ್ ಲಾಫ್ಟಿ-ಈಟನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಪಿಕ್ಕಿ ಯಾ ಫ್ರಾನ್ಸ್, ಝೇನ್ ಗ್ರೀನ್, ರೂಬೆನ್ ಟ್ರಂಪೆಲ್ಮನ್, ಬರ್ನಾರ್ಡ್ ಸ್ಕೋಲ್ಟ್ಜ್, ತಂಗೇನಿ ಲುಂಗಮೆನಿ, ಬೆನ್ ಶಿಕೊಂಗೊ, ಮೈಕೆಲ್ ವ್ಯಾನ್ ಲಿಂಗೆನ್, ಲೋಹಾಂಡ್ರೆ ಲೌರೆನ್ಸ್, ಕಾರ್ಲ್ ಬಿರ್ಕೆನ್‌ಸ್ಟಾಕ್, ದಿವಾನ್ ಲಾ ಕಾಕ್.

Published On - 8:04 am, Sun, 16 October 22

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ