AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka vs Pakistan: ಪಾಕ್​ಗೆ 131 ರನ್​ಗಳ ಗುರಿ ನೀಡಿದ ಶ್ರೀಲಂಕಾ: ಕುತೂಹಲಘಟ್ಟದಲ್ಲಿ ಪಂದ್ಯ

Sri Lanka vs Pakistan, 1st Test: ಶ್ರೀಲಂಕಾ ತಂಡವು 7 ವಿಕೆಟ್ ಕಬಳಿಸಿದರೆ ಪಂದ್ಯವನ್ನು ಜಯಿಸಬಹುದು. ಹೀಗಾಗಿಯೇ ಅಂತಿಮ ದಿನದಾಟದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

Sri Lanka vs Pakistan: ಪಾಕ್​ಗೆ 131 ರನ್​ಗಳ ಗುರಿ ನೀಡಿದ ಶ್ರೀಲಂಕಾ: ಕುತೂಹಲಘಟ್ಟದಲ್ಲಿ ಪಂದ್ಯ
PAK vs SL
TV9 Web
| Edited By: |

Updated on: Jul 19, 2023 | 6:41 PM

Share

Sri Lanka vs Pakistan: ಗಾಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ್ ನಡುವಣ ಮೊದಲ ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಧನಂಜಯ ಡಿಸಿಲ್ವಾ (122) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 312 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಪಾಕಿಸ್ತಾನ್ ಪರ ಮೊದಲ ಇನಿಂಗ್ಸ್​ನಲ್ಲಿ ಸೌದ್ ಶಕೀಲ್ (208) ಅಜೇಯ ದ್ವಿಶತಕ ಸಿಡಿಸಿದ್ದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಪಾಕ್ ತಂಡವು 461 ರನ್​ ಕಲೆಹಾಕಿತು.

149 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು ಮತ್ತೊಮ್ಮೆ ಬ್ಯಾಟಿಂಗ್ ಕುಸಿತಕ್ಕೊಳಗಾಯಿತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ 82 ರನ್ ಬಾರಿಸಿ ಧನಂಜಯ ಡಿಸಿಲ್ವಾ ಮತ್ತೊಮ್ಮೆ ಆಸರೆಯಾದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಶ್ರೀಲಂಕಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 279 ರನ್​ಗಳಿಗೆ ಆಲೌಟ್ ಆಯಿತು.

ಅತ್ತ ಮೊದಲ ಇನಿಂಗ್ಸ್​ನಲ್ಲಿ 149 ರನ್​ಗಳ ಮುನ್ನಡೆದಿದ್ದ ಪಾಕಿಸ್ತಾನ್ ತಂಡಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 131 ರನ್​ಗಳ ಗುರಿ ಪಡೆಯಿತು. ಆದರೆ ಈ ಮೊತ್ತವನ್ನು ಬೆನ್ನತ್ತಿದ ಪಾಕ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಶ್ರೀಲಂಕಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ನಾಲ್ಕನೇ ದಿನದಾಟದ ಅಂತ್ಯಕ್ಕೆ ಪಾಕಿಸ್ತಾನ್ ತಂಡವು 48 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ಸದ್ಯ ಕ್ರೀಸ್​ನಲ್ಲಿ ಬಾಬರ್ ಆಝಂ (6) ಹಾಗೂ ಇಮಾಮ್ ಉಲ್ ಹಕ್ (25) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಲ್ಲದೆ 5ನೇ ದಿನದಾಟದಲ್ಲಿ 83 ರನ್​ ಕಲೆಹಾಕಬೇಕಿದೆ.

ಅತ್ತ ಶ್ರೀಲಂಕಾ ತಂಡವು 7 ವಿಕೆಟ್ ಕಬಳಿಸಿದರೆ ಪಂದ್ಯವನ್ನು ಜಯಿಸಬಹುದು. ಹೀಗಾಗಿಯೇ ಅಂತಿಮ ದಿನದಾಟದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಶ್ರೀಲಂಕಾ ಪ್ಲೇಯಿಂಗ್ 11: ದಿಮುತ್ ಕರುಣಾರತ್ನೆ (ನಾಯಕ) , ನಿಶಾನ್ ಮದುಷ್ಕ , ಕುಸಲ್ ಮೆಂಡಿಸ್ , ಏಂಜೆಲೊ ಮ್ಯಾಥ್ಯೂಸ್ , ಧನಂಜಯ ಡಿ ಸಿಲ್ವಾ , ದಿನೇಶ್ ಚಂಡಿಮಲ್ , ಸದೀರ ಸಮರವಿಕ್ರಮ (ವಿಕೆಟ್ ಕೀಪರ್) , ರಮೇಶ್ ಮೆಂಡಿಸ್ , ಪ್ರಭಾತ್ ಜಯಸೂರ್ಯ , ವಿಶ್ವ ಫೆರ್ನಾಂಡೋ , ಕಸುನ್ ರಜಿತ.

ಇದನ್ನೂ ಓದಿ: Saud Shakeel: ಸಚಿನ್, ಸೆಹ್ವಾಗ್ ದಾಖಲೆ ಸರಿಗಟ್ಟಿದ ಸೌದ್ ಶಕೀಲ್

ಪಾಕಿಸ್ತಾನ್ ಪ್ಲೇಯಿಂಗ್ 11: ಅಬ್ದುಲ್ಲಾ ಶಫೀಖ್, ಇಮಾಮ್-ಉಲ್-ಹಕ್ , ಶಾನ್ ಮಸೂದ್ , ಬಾಬರ್ ಆಝಂ (ನಾಯಕ) , ಸೌದ್ ಶಕೀಲ್ , ಸರ್ಫರಾಜ್ ಅಹ್ಮದ್ (ವಿಕೆಟ್ ಕೀಪರ್) , ಅಘ ಸಲ್ಮಾನ್ , ನೌಮಾನ್ ಅಲಿ , ಅಬ್ರಾರ್ ಅಹ್ಮದ್ , ಶಾಹೀನ್ ಅಫ್ರಿದಿ , ನಸೀಮ್ ಶಾ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು