AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಔಟ್ ಆಗುವುದನ್ನು ತಡೆಯಲು ಹೋಗಿ ಔಟ್ ಆದ ಶ್ರೀಲಂಕಾ ಬ್ಯಾಟರ್

ಈ ಪಂದ್ಯದಲ್ಲಿ ನಾಯಕ ದಿಮುತ್ ಕರುಣಾರತ್ನೆ 132 ಮತ್ತು ಧನಂಜಯ್ ಡಿಸಿಲ್ವಾ 56 ರನ್ ಗಳಿಸಿ ಶ್ರೀಲಂಕಾ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಹಾಗೆಯೇ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಚಂಡಿಮಲ್ 83 ಎಸೆತಗಳಲ್ಲಿ 45 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ.

Viral Video: ಔಟ್ ಆಗುವುದನ್ನು ತಡೆಯಲು ಹೋಗಿ ಔಟ್ ಆದ ಶ್ರೀಲಂಕಾ ಬ್ಯಾಟರ್
Dhananjaya de Silva
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 22, 2021 | 6:30 PM

ಕ್ರಿಕೆಟ್ ಮೈದಾನದಲ್ಲಿ ಆಗಾಗ ವಿಚಿತ್ರ ಘಟನೆಗಳು ಕಾಣ ಸಿಗುತ್ತವೆ. ಗಾಲೆ ಟೆಸ್ಟ್‌ನ ಎರಡನೇ ದಿನವೂ ಅಂತಹ ಒಂದು ದೃಶ್ಯಕ್ಕೆ ಸಾಕ್ಷಿಯಾಯಿತು. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಶ್ರೀಲಂಕಾ ಬ್ಯಾಟ್ಸ್‌ಮನ್ ಧನಂಜಯ ಡಿ ಸಿಲ್ವಾ ಔಟಾದ ರೀತಿ ನೋಡಿ ಎಲ್ಲರೂ ನಗುತ್ತಿದ್ದಾರೆ. ಇದಕ್ಕೆ ಕಾರಣ ಧನಂಜಯ್ ಡಿ ಸಿಲ್ವಾ ಹಿಟ್ ವಿಕೇಟ್ ಆಗಿರುವುದು. ಆದರೆ ಈ ರೀತಿ ಔಟ್ ಆಗಲು ಕಾರಣ ಔಟ್ ಆಗದಿರಲು ಪ್ರಯತ್ನಿಸಿರುವುದು.

95ನೇ ಓವರ್​ನ ಶಾನನ್ ಗೇಬ್ರಿಯಲ್ ಅವರ ಶಾರ್ಟ್ ಬಾಲ್ ಅನ್ನು ಧನಂಜಯ ಡಿ ಸಿಲ್ವಾ ಬ್ಯಾಕ್ ಫೂಟ್ ನಲ್ಲಿ ನಿಲ್ಲಿಸಿದರು. ಆದರೆ ಆ ಚೆಂಡು ಸ್ಟಂಪ್ ಕಡೆಗೆ ಸಾಗಿತ್ತು. ತಕ್ಷಣವೇ ಧನಂಜಯ ಚೆಂಡನ್ನು ಬ್ಯಾಟ್‌ನಿಂದ ತಡೆಯಲು ಪ್ರಯತ್ನಿಸಿದರು. ಆದರೆ ಬಾಲ್​ ಬ್ಯಾಟ್​ಗೆ ತಾಗಿ ಸ್ಟಂಪ್‌ನತ್ತ ಚಿಮ್ಮಿತು. ಕೂಡಲೇ ಧನಂಜಯ ಮೂರನೇ ಬಾರಿಗೆ ಚೆಂಡನ್ನು ತಡೆಯಲು ಯತ್ನಿಸಿದರು. ಅದರಂತೆ ಚೆಂಡು ಸ್ಟಂಪ್​ಗೆ ತಾಗುವುದು ತಪ್ಪಿತು. ಆದರೆ ಧನಂಜಯ ಅವರ ಬ್ಯಾಟ್​ ಸ್ಟಂಪ್​ಗೆ ತಾಗಿ ಹಿಟ್​ ವಿಕೆಟ್ ಆದರು. ಇದೀಗ ಧನಂಜಯ ಡಿಸಿಲ್ವಾ ಹಿಟ್​ ವಿಕೆಟ್​ನ ಫನ್ನಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ನಾಯಕ ದಿಮುತ್ ಕರುಣಾರತ್ನೆ 132 ಮತ್ತು ಧನಂಜಯ್ ಡಿಸಿಲ್ವಾ 56 ರನ್ ಗಳಿಸಿ ಶ್ರೀಲಂಕಾ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಹಾಗೆಯೇ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಚಂಡಿಮಲ್ 83 ಎಸೆತಗಳಲ್ಲಿ 45 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ. ಈ ಮೂವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 386 ರನ್ ಗಳಿಸಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್