AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka vs Namibia: ಶ್ರೀಲಂಕಾ ಬೌಲರ್​ಗಳ ದಾಳಿಗೆ ನಲುಗಿದ ನಮೀಬಿಯಾ: ಸಿಂಹಳೀಯರಿಂದ ಭರ್ಜರಿ ಆರಂಭ

T20 World Cup: ಮೊದಲು ಲಂಕಾ ಬೌಲರ್‌ಗಳ ಪ್ರಭಾವಿ ದಾಳಿಗೆ ಕುಸಿತ ಕಂಡ ನಮೀಬಿಯಾ 19.3 ಓವರ್‌ಗಳಲ್ಲಿ ಕೇವಲ 96 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

Sri Lanka vs Namibia: ಶ್ರೀಲಂಕಾ ಬೌಲರ್​ಗಳ ದಾಳಿಗೆ ನಲುಗಿದ ನಮೀಬಿಯಾ: ಸಿಂಹಳೀಯರಿಂದ ಭರ್ಜರಿ ಆರಂಭ
Sri Lanka vs Namibia
Follow us
TV9 Web
| Updated By: Vinay Bhat

Updated on: Oct 19, 2021 | 8:06 AM

ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಶ್ರೀಲಂಕಾ ತಂಡ (Sri Lanka Cricket Team) ಭರ್ಜರಿ ಆಗಿ ಆರಂಭಿಸಿದೆ. ಅಬುಧಾಬಿಯ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ‘ಎ’ ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ನಮೀಬಿಯಾ (Namibia) ವಿರುದ್ಧದ ಪಂದ್ಯದಲ್ಲಿ ಲಂಕಾನ್ನರು 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಪರಾಕ್ರಮ ಮೆರೆದಿದೆ.

ಮೊದಲು ಲಂಕಾ ಬೌಲರ್‌ಗಳ ಪ್ರಭಾವಿ ದಾಳಿಗೆ ಕುಸಿತ ಕಂಡ ನಮೀಬಿಯಾ 19.3 ಓವರ್‌ಗಳಲ್ಲಿ ಕೇವಲ 96 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಕ್ರೇಗ್ ವಿಲಿಯಮ್ಸ್ 29, ನಾಯಕ ಗೆರಾರ್ಡ್ ಎರಾಸ್ಮಸ್ (20) ಹಾಗೂ ಜೆಜೆ ಸ್ಮಿಟ್ 12* ರನ್ ಗಳಿಸಿರುವುದನ್ನು ಹೊರತುಪಡಿಸಿದರೆ ಇತರೆ ಯಾವ ಬ್ಯಾಟರ್‌ಗಳಿಗೆ ಮಿಂಚಲು ಸಾಧ್ಯವಾಗಲಿಲ್ಲ. ಲಂಕಾ ಪರ ಮಹೀಶ್‌ ತೀಕ್ಷನ 3 ವಿಕೆಟ್ ಮತ್ತು ಲಹಿರು ಕುಮಾರ ಹಾಗೂ ವನಿಂದು ಹಸರಂಗ ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು.

ಬಳಿಕ ಗುರಿ ಬೆನ್ನತ್ತಿದ ಲಂಕಾ ಒಂದು ಹಂತದಲ್ಲಿ 5.1 ಓವರ್‌ಗಳಲ್ಲಿ 26 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಗೂಡಿದ ಆವಿಷ್ಕಾ ಫರ್ನಾಂಡೊ (30*) ಹಾಗೂ ಭಾನುಕಾ ರಾಜಪಕ್ಷ (42*) ಮುರಿಯದ ನಾಲ್ಕನೇ ವಿಕೆಟ್‌ಗೆ 74 ರನ್‌ಗಳ ಜೊತೆಯಾಟ ಕಟ್ಟಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಈ ಮೂಲಕ 13.3 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಪಾಯಿಂಟ್ ಪಟ್ಟಿ:

ಗ್ರೂಪ್ ಎ:

1) ಶ್ರೀಲಂಕಾ: 1 ಪಂದ್ಯ 2 ಅಂಕ

2) ಐರ್ಲೆಂಡ್: 1 ಪಂದ್ಯ 2 ಅಂಕ

3) ನೆದರ್​ಲೆಂಡ್ಸ್: 1 ಪಂದ್ಯ 0 ಅಂಕ

4) ನಮೀಬಿಯಾ: 1 ಪಂದ್ಯ 0 ಅಂಕ

ಗ್ರೂಪ್ ಬಿ:

1) ಓಮನ್: 1 ಪಂದ್ಯ 2 ಅಂಕ

2) ಸ್ಕಾಟ್ಲೆಂಡ್: 1 ಪಂದ್ಯ 2 ಅಂಕ

3) ಬಾಂಗ್ಲಾದೇಶ: 1 ಪಂದ್ಯ 0 ಅಂಕ

4) ಪಪುವಾ ನ್ಯೂಗಿನಿಯಾ: 1 ಪಂದ್ಯ 0 ಅಂಕ

Curtis Campher: 4 ಬಾಲ್-4 ವಿಕೆಟ್: ಟಿ20 ವಿಶ್ವಕಪ್​ನ ಎರಡನೇ ದಿನವೇ ಸೃಷ್ಟಿಯಾಯಿತು ಐತಿಹಾಸಿಕ ದಾಖಲೆ

(Sri Lankan bowlers dominated the inexperienced Namibia and won by seven wickets in T20 World Cup)

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ