AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ಅಭ್ಯಾಸಕ್ಕೆ ಹೋಗಲೂ ಸಾಧ್ಯವಾಗುತ್ತಿಲ್ಲ: ಪೆಟ್ರೋಲ್​ಗಾಗಿ ಎರಡು ದಿನ ಕಾದು ಕುಳಿತ ಲಂಕಾ ಕ್ರಿಕೆಟಿಗ

Sri Lanka Crisis: ಲಂಕಾ ಕ್ರಿಕೆಟಿಗ ಚಮಿಕಾ ಕರುಣರತ್ನೆ (Chamika Karunaratne) ಈ ಬಗ್ಗೆ ಮಾತನಾಡಿದ್ದು ಅಭ್ಯಾಸ ನಡೆಸಲು ಕೂಡ ಸಾಧ್ಯವಾಗುತ್ತಿಲ್ಲ, ಪೆಟ್ರೋಲ್​ಗಾಗಿ (Petrol) ಎರಡು ದಿನಗಳಿಂದ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

Sri Lanka Crisis: ಅಭ್ಯಾಸಕ್ಕೆ ಹೋಗಲೂ ಸಾಧ್ಯವಾಗುತ್ತಿಲ್ಲ: ಪೆಟ್ರೋಲ್​ಗಾಗಿ ಎರಡು ದಿನ ಕಾದು ಕುಳಿತ ಲಂಕಾ ಕ್ರಿಕೆಟಿಗ
Chamika Karunaratne
TV9 Web
| Edited By: |

Updated on:Jul 16, 2022 | 12:43 PM

Share

ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka) ಕ್ರಿಕೆಟ್ ಆಟಗಾರರು ಕೂಡ ಪರದಾಡುವ ಸ್ಥಿತಿ ಉಂಟಾಗಿದೆ. ಲಂಕಾ ಕ್ರಿಕೆಟಿಗ ಚಮಿಕಾ ಕರುಣರತ್ನೆ (Chamika Karunaratne) ಈ ಬಗ್ಗೆ ಮಾತನಾಡಿದ್ದು ಅಭ್ಯಾಸ ನಡೆಸಲು ಕೂಡ ಸಾಧ್ಯವಾಗುತ್ತಿಲ್ಲ, ಪೆಟ್ರೋಲ್​ಗಾಗಿ (Petrol) ಎರಡು ದಿನಗಳಿಂದ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ಎಎನ್​ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಇವರು, “ಅದೃಷ್ಟದಿಂದ ಎರಡು ದಿನ ಕಾದು ಈಗ ನನಗೆ ಪೆಟ್ರೋಲ್ ಸಿಕ್ಕಿದೆ. ಕ್ರಿಕೆಟ್ ಪಂದ್ಯದ ಅಭ್ಯಾಸಕ್ಕೆ ತೆರಳು ಕೂಡ ನನಗೆ ಸಾಧ್ಯವಾಗುತ್ತಿಲ್ಲ,” ಎಂದು ಹೇಳಿದ್ದಾರೆ. ಚಮಿಕಾ 2019 ರಲ್ಲಿ ಶ್ರೀಲಂಕಾ ತಂಡದ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ಮುಂದಿನ ತಿಂಗಳು ಆಗಸ್ಟ್​​ನಲ್ಲಿ ಶ್ರೀಲಂಕಾದಲ್ಲಿ ಏಷ್ಯಾಕಪ್ 2022 ಆಯೋಜಿಸಲಾಗಿದೆ. ಆದರೆ, ಈಗಿನ ಪರಿಸ್ಥಿತಿ ನೋಡಿದರೆ ಪಂದ್ಯವಳಿ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಚಮಿಕಾ, “ಏಷ್ಯಾಕಪ್ ಬರುತ್ತಿದೆ ಹಾಗೂ ಲಂಕಾ ಪ್ರೀಮಿಯರ್ ಲೀಗ್ ಕೂಡ ಇದೇ ವರ್ಷ ನಡೆಯಲಿದೆ. ನನಗೆ ಏನು ಆಗಲಿದೆ ಎಂದು ಹೇಳಲು ಆಗುತ್ತಿಲ್ಲ. ನಾನು ಕೊಲಂಬೊಕ್ಕೆ ತೆರಳಿ ಅಲ್ಲಿ ಅಭ್ಯಾಸ ನಡೆಸಿ ಕ್ಲಬ್ ಸೀಸನ್​ಗಳಲ್ಲಿ ಆಡಬೇಕಷ್ಟೆ. ಪೆಟ್ರೋಲ್​ಗಾಗಿ ಎರಡು ದಿನ ಸಾಲಿನಲ್ಲಿ ನಿಂತಿದ್ದೇನೆ. ಅದೃಷ್ಟದಿಂದ ಇಂದು ಸಿಕ್ಕಿತು. ಆದರೆ, ಇದು ಎರಡು ಮೂರು ದಿನಕ್ಕಷ್ಟೆ ಬರಬಹುದು,” ಎಂದಿದ್ದಾರೆ.

“ನಾವು ಏಷ್ಯಾಕಪ್​ಗೆ ತಯಾರಾಗಿದ್ದೇವೆ. ನನಗನಿಸುವ ಪ್ರಕಾರ ಅದೊಂದು ದೊಡ್ಡ ಈವೆಂಟ್. ನಾವು ಆಸ್ಟ್ರೇಲಿಯಾ ಜೊತೆಗೆ ಇಲ್ಲಿ ಪಂದ್ಯವನ್ನು ಆಡಿದ್ದು ಉತ್ತಮವಾಗಿತ್ತು. ಏಷ್ಯಾಕಪ್​ಗೆ ತಯಾರಿ ಕೂಡ ನಡೆಯುತ್ತಿದೆ. ಶ್ರೀಲಂಕಾದಲ್ಲಿ ಎಲ್ಲವೂ ಸರಿಯಾಗಿ ಸಾಗುತ್ತಿಲ್ಲ. ಒಳ್ಳೆಯ ಜನರು ಬಂದರೆ ಒಳ್ಳೆಯದು ನಡೆಯುತ್ತದೆ ಎಂಬ ನಂಬಿಕೆಯಿದೆ,” ಎಂಬುದು ಚಮಿಕಾ ಮಾತು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Team India: ನಿವೃತ್ತಿಗೆ ಮುಂದಾದ ಟೀಮ್ ಇಂಡಿಯಾದ ಈ ಮೂರು ಸ್ಟಾರ್ ಆಟಗಾರರು: ಯಾರು ನೋಡಿ
Image
Virat Kohli: ಕೊಹ್ಲಿಯನ್ನು ಭಾರತ ತಂಡದಿಂದ ಕೈಬಿಡುವವರು ಇನ್ನೂ ಹುಟ್ಟಿಲ್ಲ ಎಂದ ಪಾಕ್ ಕ್ರಿಕೆಟಿಗ
Image
IRE vs NZ: ರಣ ರೋಚಕ ಪಂದ್ಯ: 361 ರನ್​​ಗಳ ಟಾರ್ಗೆಟ್ ಬೆನ್ನಟ್ಟಿ 1 ರನ್​ನಿಂದ ಸೋತ ಐರ್ಲೆಂಡ್

ಶ್ರೀಲಂಕಾ vs ಪಾಕಿಸ್ತಾನ:

ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾ ಕ್ರಿಕೆಟ್ ತಂಡ ಗಲ್ಲೆ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಾಕಿಸ್ತಾನ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಇಂದು ಆರಂಭವಾಗಿರುವ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದಿಮುತ್ ಕರುಣರತ್ನೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ, ಕೇವಲ 1 ರನ್ ಗಳಿಸಿ ಶಾಹಿನ್ ಅಫ್ರಿದಿ ಬೌಲಿಂಗ್​ನಲ್ಲಿ ಔಟಾಗಿದ್ದಾರೆ. ಸದ್ಯ ಕ್ರೀಸ್​ನಲ್ಲಿ ಓಶಾಡ ಫೆರ್ನಾಂಡೊ ಹಾಗೂ ಕುಸಲ್ ಮೆಂಡಿಸ್ ಇದ್ದು ಎಚ್ಚರಿಕೆಯ ಆಟ ಪ್ರದರ್ಶಿಸುತ್ತಿದ್ದಾರೆ.

Published On - 11:12 am, Sat, 16 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ