AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka vs Bangladesh: 4 ವರ್ಷಗಳ ಹಿಂದಿನ ಅವಮಾನಕ್ಕೆ ಪ್ರತೀಕಾರ: ಬಾಂಗ್ಲಾ ಆಟಗಾರರ ಹೊಟ್ಟೆ ಉರಿಸಿದ ಲಂಕಾ ಪ್ಲೇಯರ್ಸ್

Sri Lanka Players Nagin Dance: ಏಷ್ಯಾಕಪ್ 2022ರಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆ ಶ್ರೀಲಂಕಾ ಆಟಗಾರರು ಡಗೌಟ್​ನಲ್ಲಿ ನಾಗಿಣಿ ನೃತ್ಯ ಮಾಡುವ ಮೂಲಕ 4 ವರ್ಷಗಳ ಹಿಂದಿನ ಅವಮಾನಕ್ಕೆ ಸೇಡು ತೀರಿಸಿಕೊಂಡಿದ್ದಾರೆ.

Sri Lanka vs Bangladesh: 4 ವರ್ಷಗಳ ಹಿಂದಿನ ಅವಮಾನಕ್ಕೆ ಪ್ರತೀಕಾರ: ಬಾಂಗ್ಲಾ ಆಟಗಾರರ ಹೊಟ್ಟೆ ಉರಿಸಿದ ಲಂಕಾ ಪ್ಲೇಯರ್ಸ್
SL vs BAN Asia Cup 2022
TV9 Web
| Edited By: |

Updated on: Sep 02, 2022 | 9:56 AM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಏಷ್ಯಾಕಪ್​ನ (Asia Cup 2022) ಐದನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ (Sri Lanka vs Bangladesh) ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸಿಂಹಳೀಯರು ಗೆದ್ದು ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿರು. ಕೊನೆಯ ಓವರ್ ವರೆಗೂ ನಡೆದ ರೋಚಕ ಕಾದಾಟದಲ್ಲಿ ಸೋತ ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿದೆ. ಗೆಲುವು ಸಾಧಿದುತ್ತಿದ್ದಂತೆ ಶ್ರೀಲಂಕಾ ತಂಡದ ಆಟಗಾರರು ವಿಶೇಷವಾಗಿ ಸಂಭ್ರಮಾಚರಣೆ ಮಾಡಿ ಬಾಂಗ್ಲಾಕ್ಕೆ ತಿರುಗೇಟು ನೀಡಿದರು. ಡಗೌಟ್​ನಲ್ಲಿ ನಾಗಿಣಿ ನೃತ್ಯ (Nagin Dance) ಮಾಡುವ ಮೂಲಕ 2018ರ ನಿದಾಸ್ ಕ್ರಿಕೆಟ್ ಟ್ರೋಫಿಯಲ್ಲಾದ ಅವಮಾನಕ್ಕೆ ಸೇಡು ತೀರಿಸಿಕೊಂಡಿದ್ದಾರೆ.

2018ರಲ್ಲಿ ನಡೆದ ನಿದಾಸ್ ಟ್ರೋಫಿಯ ಅಂತಿಮ ಲೀಗ್​​ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಸೋಲು ಕಂಡಿತ್ತು. ಈ ಸಂದರ್ಭದಲ್ಲಿ ಗೆಲುವಿನ ಅತಿರೇಕದಲ್ಲಿ ಬಾಂಗ್ಲಾದೇಶ ತಂಡದ ಆಟಗಾರರು​​​ ನಾಗಿಣಿ ಡ್ಯಾನ್ಸ್​ ಮಾಡುವ ಮೂಲಕ ಸಿಂಹಳೀಯರನ್ನು ಅವಮಾನಿಸುವ ರೀತಿಯಲ್ಲಿ ಸಂಭ್ರಮಿಸಿದ್ದರು. ಇದೀಗ ಅದಕ್ಕೆ ಲಂಕಾ ಆಟಗಾರರು ಸೇಡು ತೀರಿಸಿಕೊಂಡಿದ್ದಾರೆ. ಚಮಿಕಾ ಕರುಣರತ್ನೆ ಸರಿದಂತೆ ಇತರೆ ಕೆಲ ಆಟಗಾರರು ಡಗೌಟ್​ನಲ್ಲಿ ನಾಗಿಣಿ ಡ್ಯಾನ್ಸ್​ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
PAK vs HK: ಏಷ್ಯಾಕಪ್​ನಲ್ಲಿಂದು ಪಾಕಿಸ್ತಾನ- ಹಾಂಗ್​ ಕಾಂಗ್ ಮುಖಾಮುಖಿ: ಗೆದ್ದ ತಂಡ ಭಾರತ ವಿರುದ್ಧ ಸೆಣೆಸಾಟ
Image
Asia Cup 2022: ಟೀಂ ಇಂಡಿಯಾ ನಾಯಕನಾಗಿ ರೋಹಿತ್​ಗೆ ಹೆಚ್ಚು ದಿನ ಉಳಿಗಾಲವಿಲ್ಲ; ಪಾಕ್ ಕ್ರಿಕೆಟಿಗನ ವಿಶ್ಲೇಷಣೆ
Image
ಏಕಾಏಕಿ ಹೊಸ ಪ್ರಾಜೆಕ್ಟ್​ ಘೋಷಿಸಿ, ಸೆ.4ಕ್ಕೆ ಟ್ರೇಲರ್ ರಿಲೀಸ್ ಎಂದ ರಶ್ಮಿಕಾ; ರೋಹಿತ್, ಗಂಗೂಲಿಗೇನು ಕೆಲಸ?
Image
SL vs BAN: ರಣ ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿ ಸೂಪರ್- 4 ಹಂತಕ್ಕೆ ಎಂಟ್ರಿಕೊಟ್ಟ ಶ್ರೀಲಂಕಾ

ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್​​​ಗಳಲ್ಲಿ 7 ವಿಕೆಟ್ ​​ನಷ್ಟಕ್ಕೆ 183 ರನ್​​​​ಗಳಿಕೆ ಮಾಡಿತು. ತಂಡದ ಪರ ಬ್ಯಾಟಿಂಗ್​​​ನಲ್ಲಿ ಅಬ್ಬರಿಸಿದ ಆರಂಭಿಕ ಆಟಗಾರ ಮೆಹ್ದಿ ಹಸನ್ ಮಿರ್ಜಾ(38), ನಾಯಕ ಶಕೀಬ್​ ಅಲ್ ಹಸನ್(24), ಅಫಿಫ್ ಹುಸೈನ್​​​​(39), ಮೊಹಮ್ಮದುಲ್ಲಾ (27) ಹಾಗೂ ಮೊಸಡಕ್ ಹುಸೈ್​​ ​(24) ರನ್​ಗಳ ಕೊಡುಗೆ ನೀಡಿದರು.

184ರನ್​ಗಳ ಟಾರ್ಗೆಟ್ ಬೆನ್ನತ್ತಿದ ಶ್ರೀಲಂಕಾ ಉತ್ತಮ ಆರಂಭ ಪಡೆದುಕೊಂಡಿತು. ನಿಸಂಕಾ ಮತ್ತು ಕುಸಾಲ್ ಮೆಂಡಿಸ್ ತಂಡಕ್ಕೆ 45 ರನ್​ಗಳ ಕಾಣಿಕೆ ನೀಡಿದರು. 20 ರನ್​​​​ಗಳಿಸಿ ನಿಸಾಂಕ್ ಔಟಾದರರು. ಇದರ ಬೆನ್ನಲ್ಲೇ ದಿಢೀರ್ ಮತ್ತೆ 3 ವಿಕೆಟ್ ಉರುಳಿದವು. ಈ ಸಂದರ್ಭ ತಂಡಕ್ಕೆ ಮೆಂಡಿಸ್​ ಹಾಗೂ ನಾಯಕ ದಸನ್ ಶನಕ ಆಸರೆಯಾದರು.

ಮೆಂಡಿಸ್ 37 ಎಸೆತಗಳಲ್ಲಿ 4 ಫೋರ್, 3 ಸಿಕ್ಸರ್ ಸಿಡಿಸಿ 60 ರನ್ ಗಳಿಸಿದರೆ, 33 ಎಸೆತಗಳಲ್ಲಿ ಶನಕ 45ರನ್ ಚಚ್ಚಿ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿ ನಿರ್ಗಮಿಸಿದರು. ಶ್ರೀಲಂಕಾ ತಂಡಕ್ಕೆ ಗೆಲಲ್ಲು ಕೊನೆಯ 12 ಎಸೆತಗಳಲ್ಲಿ 25 ರನ್​​ಗಳ ಅವಶ್ಯಕತೆ ಇತ್ತು. ಈ ವೇಳೆ ಉತ್ತಮವಾಗಿ ಆಡ್ತಿದ್ದ ಕರುಣರತ್ನೆ (16) ರನೌಟ್​ ಬಲೆಗೆ ಬಿದ್ದರು. ಆದರೆ, ಅಸಿತಾ ಫೆರ್ನಾಂಡೋ ಕೊನೆಯ ಓವರ್​​ನಲ್ಲಿ ಎರಡು ಬೌಂಡರಿ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಈ ಮೂಲಕ ಶ್ರೀಲಂಕಾ ಸೂಪರ್ 4 ಹಂತಕ್ಕೆ ಪ್ರವೇಶ ಪಡೆದಿದೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ