ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?

Sri Lanka Cricket: ಶ್ರೀಲಂಕಾದ ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ ನನ್ನನ್ನು ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?
ರೋಷನ್ ರಣಸಿಂಘೆ, ರನಿಲ್ ವಿಕ್ರಮಸಿಂಘೆ
Follow us
|

Updated on:Nov 27, 2023 | 6:26 PM

ಶ್ರೀಲಂಕಾದ ಕ್ರಿಕೆಟ್ ಮಂಡಳಿಯಲ್ಲಿನ (Sri Lanka Cricket Board) ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ ನನ್ನನ್ನು ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ (Roshan Ranasinghe) ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ರೋಷನ್ ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ವಾರದ ಕ್ಯಾಬಿನೆಟ್ ಸಭೆಗೂ ಮುನ್ನ ರೋಷನ್ ರಣಸಿಂಘೆ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನನಗೆ ಜೀವಭಯವಿದೆ; ಕ್ರೀಡಾ ಸಚಿವ

ಸಚಿವ ಸ್ಥಾನದಿಂದ ವಜಾಗೊಳ್ಳುವ ಮೊದಲು ಅಧ್ಯಕ್ಷರಿಂದ ಇರುವ ಜೀವ ಬೆದರಿಕೆಯ ಬಗ್ಗೆ ಮಾತನಾಡಿದ್ದ ರೋಷನ್ ರಣಸಿಂಘೆ, ‘‘ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸಿದ್ದ ನನ್ನನ್ನು ಹತ್ಯೆ ಮಾಡುವ ಸಂಚು ನಡೆಯುತ್ತಿದೆ. ಇದರಿಂದ ನಾನು ತುಂಬ ಭಯಭೀತನಾಗಿದ್ದೇನೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಧ್ಯಕ್ಷ ವಿಕ್ರಮಸಿಂಘೆ ಹಾಗೂ ನನ್ನ ನಡುವೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದೆ. ಒಂದು ವೇಳೆ ನಾನು ರಸ್ತೆಯಲ್ಲಿ ಹತನಾದರೆ ಅದಕ್ಕೆ ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಮತ್ತು ಮುಖ್ಯಾಧಿಕಾರಿಗಳೇ ಹೊಣೆಯಾಗುತ್ತಾರೆ’’ ಎಂದು ಆರೋಪಿಸಿದ್ದರು. ಆದರೆ ಈ ಬಗ್ಗೆ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಅವರಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದರೂ, ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ.

Breaking: ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವ ರದ್ದುಗೊಳಿಸಿದ ಐಸಿಸಿ! ಕಾರಣವೇನು ಗೊತ್ತಾ?

ಕ್ರಿಕೆಟ್​ನಲ್ಲಿ ಸರ್ಕಾರದ ಹಸ್ತಕ್ಷೇಪ

ವಿಶ್ವ ಕ್ರಿಕೆಟ್​ನಲ್ಲಿ ತನ್ನದೇ ಛಾಪು ಮೂಡಿಸಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಇತ್ತೀಚಿನ ದಿನಗಳಲ್ಲಿ ದಿವಾಳಿಯತ್ತ ಸಾಗಿದೆ. ಅದಕ್ಕೆ ಕಾರಣ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪ. ವಾಸ್ತವವಾಗಿ ಏಕದಿನ ವಿಶ್ವಕಪ್‌ನಲ್ಲಿ ಲಂಕಾ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡಿದ್ದ ಬಳಿಕ ಕ್ರೀಡಾ ಸಚಿವ ರೋಷನ್ ರಣಸಿಂಘೆ ಇಡೀ ಮಂಡಳಿಯನ್ನೇ ವಿಸರ್ಜನೆಗೊಳಿಸಿದ್ದರು. ಆ ಬಳಿಕ ಕ್ರಿಕೆಟ್​ನಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಗಮನಿಸಿದ ಐಸಿಸಿ ತಕ್ಷಣವೇ ಶ್ರೀಲಂಕಾ ಕ್ರಿಕೆಟ್ ಅನ್ನು ನಿಷೇಧಿಸಿತ್ತು.

ಏತನ್ಮಧ್ಯೆ, ಕ್ರಿಕೆಟ್ ಮಂಡಳಿಯ ವಜಾ ಕ್ರಮವನ್ನು ಹಿಂಪಡೆಯುವಂತೆ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಸೂಚನೆ ನೀಡಿದ್ದರು. ಆದರೆ ಕ್ರೀಡಾ ಸಚಿವ ರೋಷನ್ ರಣಸಿಂಗ್ ಅಧ್ಯಕ್ಷರ ಸೂಚನೆಯನ್ನು ತಿರಸ್ಕರಿಸಿದ್ದರು. ಶ್ರೀಲಂಕಾ ಸಂಸತ್ತು ಕೂಡ ಕ್ರೀಡಾ ಸಚಿವರ ನಿರ್ಧಾರವನ್ನು ಬೆಂಬಲಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಆ ಬಳಿಕ ಕ್ರೀಡಾ ಸಚಿವರು ಹಾಗೂ ಅಧ್ಯಕ್ಷರ ನಡುವೆ ವೈಮನಸ್ಸು ಏರ್ಪಟ್ಟಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:23 pm, Mon, 27 November 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು