AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?

Sri Lanka Cricket: ಶ್ರೀಲಂಕಾದ ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ ನನ್ನನ್ನು ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?
ರೋಷನ್ ರಣಸಿಂಘೆ, ರನಿಲ್ ವಿಕ್ರಮಸಿಂಘೆ
ಪೃಥ್ವಿಶಂಕರ
|

Updated on:Nov 27, 2023 | 6:26 PM

Share

ಶ್ರೀಲಂಕಾದ ಕ್ರಿಕೆಟ್ ಮಂಡಳಿಯಲ್ಲಿನ (Sri Lanka Cricket Board) ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ ನನ್ನನ್ನು ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ (Roshan Ranasinghe) ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ರೋಷನ್ ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ವಾರದ ಕ್ಯಾಬಿನೆಟ್ ಸಭೆಗೂ ಮುನ್ನ ರೋಷನ್ ರಣಸಿಂಘೆ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನನಗೆ ಜೀವಭಯವಿದೆ; ಕ್ರೀಡಾ ಸಚಿವ

ಸಚಿವ ಸ್ಥಾನದಿಂದ ವಜಾಗೊಳ್ಳುವ ಮೊದಲು ಅಧ್ಯಕ್ಷರಿಂದ ಇರುವ ಜೀವ ಬೆದರಿಕೆಯ ಬಗ್ಗೆ ಮಾತನಾಡಿದ್ದ ರೋಷನ್ ರಣಸಿಂಘೆ, ‘‘ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸಿದ್ದ ನನ್ನನ್ನು ಹತ್ಯೆ ಮಾಡುವ ಸಂಚು ನಡೆಯುತ್ತಿದೆ. ಇದರಿಂದ ನಾನು ತುಂಬ ಭಯಭೀತನಾಗಿದ್ದೇನೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಧ್ಯಕ್ಷ ವಿಕ್ರಮಸಿಂಘೆ ಹಾಗೂ ನನ್ನ ನಡುವೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದೆ. ಒಂದು ವೇಳೆ ನಾನು ರಸ್ತೆಯಲ್ಲಿ ಹತನಾದರೆ ಅದಕ್ಕೆ ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಮತ್ತು ಮುಖ್ಯಾಧಿಕಾರಿಗಳೇ ಹೊಣೆಯಾಗುತ್ತಾರೆ’’ ಎಂದು ಆರೋಪಿಸಿದ್ದರು. ಆದರೆ ಈ ಬಗ್ಗೆ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಅವರಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದರೂ, ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ.

Breaking: ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವ ರದ್ದುಗೊಳಿಸಿದ ಐಸಿಸಿ! ಕಾರಣವೇನು ಗೊತ್ತಾ?

ಕ್ರಿಕೆಟ್​ನಲ್ಲಿ ಸರ್ಕಾರದ ಹಸ್ತಕ್ಷೇಪ

ವಿಶ್ವ ಕ್ರಿಕೆಟ್​ನಲ್ಲಿ ತನ್ನದೇ ಛಾಪು ಮೂಡಿಸಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಇತ್ತೀಚಿನ ದಿನಗಳಲ್ಲಿ ದಿವಾಳಿಯತ್ತ ಸಾಗಿದೆ. ಅದಕ್ಕೆ ಕಾರಣ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪ. ವಾಸ್ತವವಾಗಿ ಏಕದಿನ ವಿಶ್ವಕಪ್‌ನಲ್ಲಿ ಲಂಕಾ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡಿದ್ದ ಬಳಿಕ ಕ್ರೀಡಾ ಸಚಿವ ರೋಷನ್ ರಣಸಿಂಘೆ ಇಡೀ ಮಂಡಳಿಯನ್ನೇ ವಿಸರ್ಜನೆಗೊಳಿಸಿದ್ದರು. ಆ ಬಳಿಕ ಕ್ರಿಕೆಟ್​ನಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಗಮನಿಸಿದ ಐಸಿಸಿ ತಕ್ಷಣವೇ ಶ್ರೀಲಂಕಾ ಕ್ರಿಕೆಟ್ ಅನ್ನು ನಿಷೇಧಿಸಿತ್ತು.

ಏತನ್ಮಧ್ಯೆ, ಕ್ರಿಕೆಟ್ ಮಂಡಳಿಯ ವಜಾ ಕ್ರಮವನ್ನು ಹಿಂಪಡೆಯುವಂತೆ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಸೂಚನೆ ನೀಡಿದ್ದರು. ಆದರೆ ಕ್ರೀಡಾ ಸಚಿವ ರೋಷನ್ ರಣಸಿಂಗ್ ಅಧ್ಯಕ್ಷರ ಸೂಚನೆಯನ್ನು ತಿರಸ್ಕರಿಸಿದ್ದರು. ಶ್ರೀಲಂಕಾ ಸಂಸತ್ತು ಕೂಡ ಕ್ರೀಡಾ ಸಚಿವರ ನಿರ್ಧಾರವನ್ನು ಬೆಂಬಲಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಆ ಬಳಿಕ ಕ್ರೀಡಾ ಸಚಿವರು ಹಾಗೂ ಅಧ್ಯಕ್ಷರ ನಡುವೆ ವೈಮನಸ್ಸು ಏರ್ಪಟ್ಟಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:23 pm, Mon, 27 November 23

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ