AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sad news: ಶ್ರೀಲಂಕಾ ಟೆಸ್ಟ್​ ತಂಡದ ಮೊದಲ ನಾಯಕ ಬಂಡುಲ ವರ್ನಾಪುರ ನಿಧನ; ವಿಶ್ವ ಕ್ರಿಕೆಟ್ ಸಂತಾಪ

Bandula Warnapura: ಶ್ರೀಲಂಕಾದ ಮೊದಲ ಟೆಸ್ಟ್ ನಾಯಕನಾಗುವುದರ ಜೊತೆಗೆ, ಶ್ರೀಲಂಕಾ ಪರವಾಗಿ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಚೆಂಡನ್ನು ಆಡಿದ ಮೊದಲ ಬ್ಯಾಟ್ಸ್ ಮನ್ ಎನಿಸಿಕೊಂಡರು. ಟೆಸ್ಟ್ ಕ್ರಿಕೆಟ್​ನಲ್ಲಿ ಶ್ರೀಲಂಕಾಗೆ ಮೊದಲ ರನ್ ಕೂಡ ಬಂಡುಲ ವರ್ನಾಪುರ ಬ್ಯಾಟ್​ನಿಂದ ಹೊರಬಂದಿತು.

Sad news: ಶ್ರೀಲಂಕಾ ಟೆಸ್ಟ್​ ತಂಡದ ಮೊದಲ ನಾಯಕ ಬಂಡುಲ ವರ್ನಾಪುರ ನಿಧನ; ವಿಶ್ವ ಕ್ರಿಕೆಟ್ ಸಂತಾಪ
ಬಂಡುಲ ವರ್ನಾಪುರ
TV9 Web
| Edited By: |

Updated on:Oct 18, 2021 | 4:30 PM

Share

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂಡುಲ ವರ್ನಾಪುರ ಅಕ್ಟೋಬರ್ 18 ರಂದು ತಮ್ಮ 69 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಶ್ರೀಲಂಕಾ ಪರ ಒಟ್ಟು 16 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 4 ಟೆಸ್ಟ್‌ಗಳು ಮತ್ತು 12 ಏಕದಿನ ಪಂದ್ಯಗಳು ಸೇರಿವೆ. ಓಪನರ್ ಬ್ಯಾಟ್ಸ್​ಮನ್ ಆಗಿದ್ದ ಬಂಡುಲ ವರ್ಣಪುರ ವಿಶ್ವಕಪ್ ಹಾದಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟಿದ್ದರು. ಅವರು ತಮ್ಮ ಮೊದಲ ಅಂತರಾಷ್ಟ್ರೀಯ ಪಂದ್ಯವನ್ನು 1975 ರ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಓಲ್ಡ್ ಟ್ರಾಫೋರ್ಡ್‌ನಲ್ಲಿ ಆಡಿದರು. ಮುಂದಿನ ಪಂದ್ಯದಲ್ಲಿ, ಆಸ್ಟ್ರೇಲಿಯಾದ ಬಿರುಗಾಳಿಯ ಬೌಲಿಂಗ್ ಮುಂದೆ, ಅವರು 31 ಎಸೆತಗಳಲ್ಲಿ 39 ರನ್ ಗಳಿಸಿದರು. ಬಂಡುಲ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡದ ನಾಯಕತ್ವ ವಹಿಸಿ 1979 ರ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಅದ್ಭುತ ಜಯ ಗಳಿಸಿದರು. 1981 ರಲ್ಲಿ ಪಾಕಿಸ್ತಾನದ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಬಂಡುಲ ತಮ್ಮ ವೈಯಕ್ತಿಕ (77) ಅತ್ಯಧಿಕ ಸ್ಕೋರ್ ಗಳಿಸಿದರು.

ಬಂಡುಲ ವರ್ನಾಪುರ ಸಾವಿಗೆ ವಿಶ್ವ ಕ್ರಿಕೆಟ್​ ಸಂತಾಪದ ಸೂಚಿಸಿದೆ. ಶ್ರೀಲಂಕಾದ ಮಾಜಿ ಓಪನರ್ ಸನತ್ ಜಯಸೂರ್ಯ ಅವರು ಬಂಡುಲಾ ವೆರ್ನಾಪುರ ಸಾವಿಗೆ ಸಂತಾಪ ಸೂಚಿಸಿದ, ಇದು ತುಂಬಾ ದುಃಖದ ದಿನ. ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಇಂದು ತಮ್ಮ ಕೊನೆಯ ಇನ್ನಿಂಗ್ಸ್ ಆಡಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದಿದ್ದಾರೆ.

ಮೊದಲ ಟೆಸ್ಟ್ ನಾಯಕ 1982 ರಲ್ಲಿ ಶ್ರೀಲಂಕಾ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿದಾಗ, ಅದಕ್ಕೆ ವರ್ನಾಪುರ ನಾಯಕತ್ವ ವಹಿಸಿದ್ದರು. ಈ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಕೊಲಂಬೊದಲ್ಲಿ ಆಡಲಾಯಿತು. ಶ್ರೀಲಂಕಾದ ಮೊದಲ ಟೆಸ್ಟ್ ನಾಯಕನಾಗುವುದರ ಜೊತೆಗೆ, ಶ್ರೀಲಂಕಾ ಪರವಾಗಿ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಚೆಂಡನ್ನು ಆಡಿದ ಮೊದಲ ಬ್ಯಾಟ್ಸ್ ಮನ್ ಎನಿಸಿಕೊಂಡರು. ಟೆಸ್ಟ್ ಕ್ರಿಕೆಟ್​ನಲ್ಲಿ ಶ್ರೀಲಂಕಾಗೆ ಮೊದಲ ರನ್ ಕೂಡ ಬಂಡುಲ ವರ್ನಾಪುರ ಬ್ಯಾಟ್​ನಿಂದ ಹೊರಬಂದಿತು. ಈ ಟೆಸ್ಟ್​ನಲ್ಲಿ ವರ್ನಾಪುರ ಮತ್ತೊಂದು ದಾಖಲೆ ಮಾಡಿರು. ಅದೆನೆಂದರೆ ಅವರು ಬ್ಯಾಟಿಂಗ್ ಆರಂಭಿಸುವುದರ ಜೊತೆಗೆ ಲಂಕಾ ತಂಡದ ಪರ ಬೌಲಿಂಗ್‌ ಕೂಡ ಆರಂಭಿಸಿದರು.

Published On - 2:46 pm, Mon, 18 October 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ