AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಬಾಲ್ ಹಾಕಲು ಬಂದಾಗ ಕ್ರೀಸ್ ಬಿಟ್ಟು ನಿಂತ ಸ್ಮಿತ್: ಕೋಪದಲ್ಲಿ ಸಿರಾಜ್ ಏನು ಮಾಡಿದ್ರು ನೋಡಿ

India vs Australia, WTC Final 2023: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯುತ್ತಿದೆ. ಮೊಹಮ್ಮದ್ ಸಿರಾಜ್ ಹಾಗೂ ಸ್ಟೀವ್ ಸ್ಮಿತ್ ನಡುವೆ ಚಿಕ್ಕ ಮಟ್ಟದ ಚಕಮಕಿ ನಡೆಯಿತು.

Mohammed Siraj: ಬಾಲ್ ಹಾಕಲು ಬಂದಾಗ ಕ್ರೀಸ್ ಬಿಟ್ಟು ನಿಂತ ಸ್ಮಿತ್: ಕೋಪದಲ್ಲಿ ಸಿರಾಜ್ ಏನು ಮಾಡಿದ್ರು ನೋಡಿ
Steve Smith and Mohammed Siraj
Vinay Bhat
|

Updated on: Jun 09, 2023 | 12:34 PM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಭಾರತ ವಿರುದ್ಧ ಆಸ್ಟ್ರೇಲಿಯಾ (India vs Australia) ತಂಡ ಬಿಗಿ ಹಿಡಿತ ಸಾಧಿಸಿದೆ. ಮೊದಲ ಎರಡೂ ದಿನ ಯಶಸ್ಸು ಸಾಧಿಸಿರುವ ಕಾಂಗರೂ ಪಡೆ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ತೋರಿದೆ. ಆಸೀಸ್ ಪಡೆಯನ್ನು 469 ರನ್​ಗಳಿಗೆ ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಶುರು ಮಾಡಿರುವ ಭಾರತ ದ್ವಿತೀಯ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆಯಷ್ಟೆ. 318 ರನ್​ಗಳ ಹಿನ್ನಡೆಯಲ್ಲಿದೆ. ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿರುವ ಟೀಮ್ ಇಂಡಿಯಾಕ್ಕೆ ಅಜಿಂಕ್ಯಾ ರಹಾನೆ (Ajinkya Rahane) ಆಸರೆಯಾಗಿ ನಿಂತಿದ್ದಾರೆ. ಡಬ್ಲ್ಯೂಟಿಸಿ ಫೈನಲ್​ನ ದ್ವಿತೀಯ ದಿನ ಕೂಡ ಕೆಲ ರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು.

ಮೊಹಮ್ಮದ್ ಸಿರಾಜ್ ಹಾಗೂ ಸ್ಟೀವ್ ಸ್ಮಿತ್ ನಡುವೆ ಚಿಕ್ಕ ಮಟ್ಟದ ಚಕಮಕಿ ನಡೆಯಿತು. 86ನೇ ಓವರ್​ನಲ್ಲಿ ಮೊಹಮ್ಮದ್ ಸಿರಾಜ್ 4ನೇ ಎಸೆತ ಹಾಕಲು ಓಡಿ ಬರುತ್ತಿದ್ದರು. ಇನ್ನೇನು ಚೆಂಡು ಎಸೆಯ ಬೇಕು ಎನ್ನುವಷ್ಟರಲ್ಲಿ ಸ್ಮಿತ್ ಸ್ಟ್ರೈಕ್​ನಿಂದ ಹಿಂದೆ ಸರಿದಿದ್ದಾರೆ. ಈರೀತಿ ಸ್ಮಿತ್ ಮಾಡಿದ್ದು ಇದೇ ಮೊದಲಲ್ಲ. ಈ ಪಂದ್ಯದಲ್ಲಿ ಅನೇಕ ಬಾರಿ ಚೆಂಡು ಎಸೆಯಲು ಬಂದಾಗ ಕ್ರೀಸ್​ ನಿಂದ ಹಿಂದಚೆ ಸರಿಯುತ್ತಿದ್ದರು. ಈ ಬಾರಿ ತಾಳ್ಮೆ ಕಳೆದುಕೊಂಡ ಸಿರಾಜ್, ವಿಕೆಟ್‌ಗೆ ಚೆಂಡೆಸೆದಿದ್ದಾರೆ.

ಇದನ್ನೂ ಓದಿ
Image
IND vs AUS, WTC Final: ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯದ ದ್ವಿತೀಯ ದಿನದಾಟ ಹೇಗಿತ್ತು?: ಇಲ್ಲಿದೆ ನೋಡಿ ಫೋಟೋ
Image
Rohit Sharma: ಅಂಪೈರ್​ಗೆ ಸಿಟ್ಟು ತರಿಸಿದ ರೋಹಿತ್ ಶರ್ಮಾ ನಡೆ: ಡಿಆರ್​ಎಸ್​ ವಿಚಾರದಲ್ಲಿ ತಮಾಷೆ ಮಾಡಿದ್ರಾ ಹಿಟ್​ಮ್ಯಾನ್?
Image
WTC Final, IND vs AUS: ಭಾರತಕ್ಕೆ ಕೈಕೊಟ್ಟ ಟಾಪ್ 4 ಬ್ಯಾಟರ್​ಗಳು: ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿರುವ ಭಾರತಕ್ಕೆ ಅಜಿಂಕ್ಯ ರಹಾನೆ ಆಸರೆ
Image
WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್

Rohit Sharma: ಮತ್ತೊಮ್ಮೆ ಕೈ ಕೊಟ್ಟ ರೋಹಿತ್ ಶರ್ಮಾ..!

View this post on Instagram

A post shared by ICC (@icc)

ಇಷ್ಟಕ್ಕೆ ಸುಮ್ಮನಾಗದ ಸಿರಾಜ್ ಅವರು ಸ್ಮಿತ್​ಗೆ ಖಡಕ್ ವಾರ್ನಿಂಗ್ ಕೂಡ ನೀಡಿದ್ದಾರೆ. ಗಮನ ವಿಕೆಟ್‌ನ ಮುಂದಿರಲಿ ಬೇರೆಡೆಗಲ್ಲ ಎಂದು ಸ್ಮಿತ್‌ಗೆ ಖಾರವಾಗಿ ಹೇಳಿದ ಘಟನೆ ಕೂಡ ನಡೆಯಿತು. ಸ್ಪೈಡರ್‌ ಕ್ಯಾಮೆರಾದಿಂದ ತಮ್ಮ ಏಕಾಗ್ರತೆಗೆ ತೊಂದರೆಯಾಗುತ್ತಿದೆ. ಹೀಗಾಗಿ ಈರೀತಿ ಮಾಡಬೇಕಾಗಿ ಬಂತು ಎಂಬುದು ಸ್ಮಿತ್‌ ದೂರಾಗಿತ್ತು.

ಸ್ಮಿತ್​ರಿಂದ ಶತಕದ ಸಾಧನೆ:

4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ 268 ಎಸೆತಗಳಲ್ಲಿ 121 ರನ್​ ಬಾರಿಸಿ ಶತಕ ಸಿಡಿಸುವುದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಅತೀ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್​ನ ಜೋ ರೂಟ್ ಭಾರತದ ವಿರುದ್ಧ 9 ಶತಕ ಬಾರಿಸಿದ್ದರು. ಇದೀಗ ಸ್ಮಿತ್ ಕೂಡ 9 ಶತಕ ಸಿಡಿಸಿ ರೂಟ್​ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಂತೆಯೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಸ್ಟ್ರೇಲಿಯಾ ಆಟಗಾರ ಎಂಬ ದಾಖಲೆ ಸ್ಮಿತ್ ಪಾಲಾಗಿದೆ. ಆಸ್ಟ್ರೇಲಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ (31) ಮೂರನೇ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಟೀವ್ ಸ್ಮಿತ್ 2000 ರನ್ ಕೂಡ ಪೂರೈಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ