AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದೊಂದಿಗಿನ ‘ಅಂತರ’ ಬೆಳೀತಾ ಹೋಗ್ತಿದೆ!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಭಾರತ ತಂಡದೊಂದಿಗಿನ 'ಅಂತರ' ಬೆಳೀತಾ ಹೋಗ್ತಿದೆ!
Team India- Stuart Broad
ಝಾಹಿರ್ ಯೂಸುಫ್
|

Updated on: Mar 11, 2026 | 9:28 AM

Share

ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. 2024 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಭಾರತ ತಂಡವು ಇದೀಗ 2026 ರಲ್ಲೂ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸತತವಾಗಿ ಟಿ20 ವಿಶ್ವಕಪ್​ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ. ಈ ಅಮೋಘ ಸಾಧನೆಯನ್ನು ಇಂಗ್ಲೆಂಡ್​ನ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್ ವಿಶ್ಲೇಷಿಸಿದ್ದು, ಈ ವೇಳೆ ನೀಡಿದ ಹೇಳಿಕೆಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.

ಭಾರತ ತಂಡ ಮತ್ತು ಪ್ರಪಂಚದ ಉಳಿದ ಭಾಗಗಳ ತಂಡಗಳ ನಡುವಿನ ಅಂತರವು ದೊಡ್ಡದಾಗುತ್ತಲೇ ಇದೆ. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್​ನಲ್ಲಿ ಛಾಪು ಹೊತ್ತಿದ್ದಾರೆ. ಈ ಅಂತರ ಬೆಳೆಯುತ್ತಾ ಹೋಗುತ್ತಿರಲು ಸ್ಟುವರ್ಟ್ ಬ್ರಾಡ್ ಕೆಲ ಕಾರಣಗಳನ್ನು ಮುಂದಿಟ್ಟಿದ್ದಾರೆ.

  • ತಂಡದ ಆಳ: ಭಾರತದ ಬೆಂಚ್ ಸ್ಟ್ರೆಂತ್ ಎಷ್ಟು ಪ್ರಬಲವಾಗಿದೆಯೆಂದರೆ, ಭಾರತದ ಯಾವುದೇ ಆಟಗಾರ ವಿಶ್ವದ ಇತರ ಯಾವುದೇ ತಂಡದಲ್ಲಿ ನೇರವಾಗಿ ಸ್ಥಾನ ಪಡೆಯಬಲ್ಲರು ಎಂದು ಸ್ಟುವರ್ಟ್ ಬ್ರಾಡ್ ಅಭಿಪ್ರಾಯಪಟ್ಟಿದ್ದಾರೆ.
  • ಐಪಿಎಲ್ ಪ್ರಭಾವ: ಯುವ ಆಟಗಾರರು ಪದಾರ್ಪಣೆ ಮಾಡುವ ಮೊದಲೇ ವಿಶ್ವದ ಶ್ರೇಷ್ಠ ಆಟಗಾರರ ವಿರುದ್ಧ ಆಡಿ ಒತ್ತಡವನ್ನು ನಿಭಾಯಿಸುವುದನ್ನು ಕಲಿಯುತ್ತಿದ್ದಾರೆ. ಇದು ಭಾರತ ಮತ್ತು ಉಳಿದ ದೇಶಗಳ ನಡುವಿನ ವ್ಯತ್ಯಾಸವನ್ನು ಹೆಚ್ಚಿಸುತ್ತಿದೆ.
  • ಜಸ್​ಪ್ರೀತ್ ಬುಮ್ರಾ: ಜಸ್​ಪ್ರೀತ್ ಬುಮ್ರಾ ಅವರಂತಹ ಬೌಲರ್‌ಗಳು ಕ್ರಿಕೆಟ್ ಇತಿಹಾಸದಲ್ಲೇ ಶ್ರೇಷ್ಠರು ಎಂದು ಬಣ್ಣಿಸಿದ ಬ್ರಾಡ್, ಭಾರತದ ಬೌಲಿಂಗ್ ವಿಭಾಗವು ಈಗ ಅಭೇದ್ಯವಾಗಿದೆ ಎಂದಿದ್ದಾರೆ.

ಇನ್ನು ಟೀಮ್ ಇಂಡಿಯಾ ಬಲಿಷ್ಠವಾಗಲು ಐಪಿಎಲ್ ಪ್ರಮುಖ ಕಾರಣ ಎಂದಿರುವ ಸ್ಟುವರ್ಟ್ ಬ್ರಾಡ್, ಒಂದೆರಡು ಪಂದ್ಯಗಳಲ್ಲಿ ಸರಿಯಾಗಿ ಆಡದಿದ್ದರೆ ನಿಮ್ಮ ಮೇಲೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ನೀವು ಅಂತರಾಷ್ಟ್ರೀಯ ಕ್ರಿಕೆಟ್ ಆಡುವ ಮೊದಲೇ ಅಂತರಾಷ್ಟ್ರೀಯ ಮಟ್ಟದ ಒತ್ತಡಕ್ಕೆ ಒಗ್ಗಿಕೊಂಡಿರುತ್ತೀರಿ. ಇದಕ್ಕೆಲ್ಲಾ ಮುಖ್ಯ ಕಾರಣ ಐಪಿಎಲ್ ಎಂದು ಭಾವಿಸುತ್ತೇನೆ.

ಬೃಹತ್ ಪ್ರೇಕ್ಷಕರ ಮುಂದೆ ಮತ್ತು ಹೆಚ್ಚಿನ ನಿರೀಕ್ಷೆಗಳ ನಡುವೆ ಆಡುವ ಈ ಅನುಭವವು ಭಾರತೀಯ ಆಟಗಾರರಿಗೆ ದೊಡ್ಡ ಬಲವಾಗಿದೆ. ಈ ಎಲ್ಲಾ ಅನುಭವಗಳೊಂದಿಗೆ ಯುವ ಆಟಗಾರರು ಟೀಮ್ ಇಂಡಿಯಾಗೆ ಪಾದರ್ಪಣೆ ಮಾಡುತ್ತಿದ್ದಾರೆ. ಇದುವೇ ಇತರೆ ತಂಡಗಳಿಂದ ಟೀಮ್ ಇಂಡಿಯಾವನ್ನು ಭಿನ್ನವಾಗಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನೇ ನೋಡಿ, ಆ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಮತ್ತು ರಿಷಭ್ ಪಂತ್ ಅವರಂತಹ ಶ್ರೇಷ್ಠ ಆಟಗಾರರು ಇಲ್ಲ. ಇದು ಟೀಮ್ ಇಂಡಿಯಾದ ಸ್ಟ್ರೆಂತ್ ಅನ್ನು ಎತ್ತಿ ತೋರಿಸುತ್ತದೆ.

ಯಶಸ್ವಿ ಜೈಸ್ವಾಲ್ ಟೆಸ್ಟ್ ಮತ್ತು ಟಿ20 ಎರಡರಲ್ಲೂ ಅದ್ಭುತ ದಾಖಲೆ ಹೊಂದಿದ್ದರೂ ಸಹ ಅವರಿಗೆ ಭಾರತದ ಈ ತಂಡದಲ್ಲಿ ಸ್ಥಾನ ಸಿಗುತ್ತಿಲ್ಲ ಎನ್ನುವುದು ಭಾರತದ ಪ್ರತಿಭೆಯ ಅಗಾಧತೆಗೆ ಸಾಕ್ಷಿ ಎಂದು ಸ್ಟುವರ್ಟ್ ಬ್ರಾಡ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಅನುಭವಿ ಆಟಗಾರನಾಗಿ ಭಾರತ ತಂಡದಲ್ಲಿರುವ ಹಾರ್ದಿಕ್ ಪಾಂಡ್ಯ “ಅತ್ಯಂತ ಅಪಾಯಕಾರಿ ಆಟಗಾರ” ಎಂದು ಬಣ್ಣಿಸಿದ್ದಾರೆ. ಪಾಂಡ್ಯ ಅವರಲ್ಲಿರುವ  ಆತ್ಮವಿಶ್ವಾಸ ಮತ್ತು ಅತಿ ಸುಲಭವಾಗಿ ಸಿಕ್ಸರ್ ಹೊಡೆಯುವ ಸಾಮರ್ಥ್ಯವು ಯಾವುದೇ ತಂಡಕ್ಕೆ ಕಂಟಕವಾಗಬಲ್ಲದು ಎಂದು ಹೇಳಿದ್ದಾರೆ.

ಹಾಗೆಯೇ ಮೊದಲೇ ಹೇಳಿದಂತೆ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪಾಲಿನ ಗೇಮ್ ಚೇಂಜರ್. ಅವರಂತಹ ಬೌಲರ್‌ ತಂಡದಲ್ಲಿರುವುದು ಟೀಮ್ ಇಂಡಿಯಾದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

ಈ ಕಾರಣಗಳಿಂದಾಗಿ ಭಾರತ ಮತ್ತು ಪ್ರಪಂಚದ ಇತರ ದೇಶಗಳ ನಡುವಿನ ಅಂತರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಅದನ್ನು ತಡೆಯುವುದು ಇತರ ತಂಡಗಳಿಗೆ ಕಷ್ಟವಾಗಬಹುದು ಎಂಬುದು ಸ್ಟುವರ್ಟ್ ಬ್ರಾಡ್ ಅಭಿಪ್ರಾಯಪಟ್ಟಿದ್ದಾರೆ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು