AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಮುಗಿಯೋವರೆಗೂ ನೀ ನನ್ನ ಮಗನೇ ಅಲ್ಲ: ಸುನಿಲ್ ಶೆಟ್ಟಿ-ಕೆಎಲ್ ರಾಹುಲ್ ವಿಡಿಯೋ ವೈರಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್​ ತಂಡ ಶುಭಾರಂಭ ಮಾಡಿದೆ. ಈ ಟೂರ್ನಿಯ ಆರಂಭದ ಬೆನ್ನಲ್ಲೇ ಡ್ರೀಮ್ 11 ಆ್ಯಪ್​ ಹಲವು ಜಾಹೀರಾತುಗಳನ್ನು ಬಿಡುಗಡೆ ಮಾಡಿದ್ದು, ಇದೀಗ ಅವುಗಳಲ್ಲಿ ಕೆಎಲ್ ರಾಹುಲ್, ಸುನಿಲ್ ಶೆಟ್ಟಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಂಡಿರುವ ಆ್ಯಡ್ ಸಿಕ್ಕಾಪಟ್ಟೆ ವೈರಲ್ ಆಗಿದೆ.

IPL ಮುಗಿಯೋವರೆಗೂ ನೀ ನನ್ನ ಮಗನೇ ಅಲ್ಲ: ಸುನಿಲ್ ಶೆಟ್ಟಿ-ಕೆಎಲ್ ರಾಹುಲ್ ವಿಡಿಯೋ ವೈರಲ್
Sunil Shetty-KL Rahul-Rohit
TV9 Web
| Updated By: ಝಾಹಿರ್ ಯೂಸುಫ್|

Updated on: Mar 23, 2024 | 12:29 PM

Share

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದ ಮೂಲಕ ಐಪಿಎಲ್ ಸೀಸನ್​-17 ಗೆ ಅದ್ಧೂರಿ ಚಾಲನೆ ನೀಡಲಾಗಿದೆ. ಅತ್ತ ಐಪಿಎಲ್​ ಪಂದ್ಯಗಳು ಕಿಕ್ಕೇರಿಸುತ್ತಿದ್ದರೆ, ಇತ್ತ ಐಪಿಎಲ್ ಜಾಹೀರಾತುಗಳು ಕೂಡ ಅಭಿಮಾನಿಗಳಿಗೆ ಕಚಗುಳಿಯಿಡುತ್ತಿದೆ.

ಅದರಲ್ಲೂ ಬೆಟ್ಟಿಂಗ್ ಆ್ಯಪ್ ಡ್ರೀಮ್ 11 ಬಿಡುಗಡೆ ಮಾಡಿರುವ ಜಾಹೀರಾತೊಂದು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದೆ. ಈ ಜಾಹೀರಾತಿನಲ್ಲಿ  ಬಾಲಿವುಡ್ ನಟ ಸುನಿಲ್ ಶೆಟ್ಟಿ ಹಾಗೂ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ.

ಇಲ್ಲಿ ಸುನಿಲ್ ಶೆಟ್ಟಿ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಯಾಗಿ ಹಾಗೂ ರೋಹಿತ್ ಶರ್ಮಾ ಮುಂಬೈ ತಂಡದ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡವ​ನ್ನು ಪ್ರತಿನಿಧಿಸಿದ್ದಾರೆ.

ರೆಸ್ಟೋರೆಂಟ್​ನಲ್ಲಿ ಚಿತ್ರೀಕರಿಸಲಾಗಿರುವ ಈ ಜಾಹೀರಾತಿನಲ್ಲಿ ಸುನಿಲ್ ಶೆಟ್ಟಿ ಹಾಗೂ ರೋಹಿತ್ ಶರ್ಮಾ ಊಟಕ್ಕೆ ಕೂತಿರುತ್ತಾರೆ. ಇದೇ ವೇಳೆ ಕೆಎಲ್ ರಾಹುಲ್ ಕೂಡ ಜೊತೆಗೂಡಲು ಬುರತ್ತಾರೆ. ಈ ವೇಳೆ ರೋಹಿತ್ ಶರ್ಮಾ, ನಾವು ಫ್ಯಾಮಿಲಿ ಡಿನ್ನರ್ ಮಾಡ್ತಿದ್ದೇವೆ ಎನ್ನುತ್ತಾರೆ.

ಈ ವೇಳೆ ಆಶ್ಚರ್ಯದಿಂದ ಸುನಿಲ್ ಶೆಟ್ಟಿಯನ್ನು ನೋಡುವ ಕೆಎಲ್ ರಾಹುಲ್, ಪಪ್ಪಾ ಎಂದು ಅಚ್ಚರಿ ವ್ಯಕ್ತಪಡಿಸುತ್ತಾರೆ. ಈ ವೇಳೆ ಸುನಿಲ್ ಶೆಟ್ಟಿ, ನೋ ಪಪ್ಪಾ… ಐಪಿಎಲ್ ಮುಗಿಯುವರೆಗೆ ಶರ್ಮಾ ಅವರ ಮಗ ನನ್ನ ಮಗ ಎಂದು ರೋಹಿತ್ ಶರ್ಮಾ ಅವರನ್ನು ತೋರಿಸುತ್ತಾರೆ. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಂದಹಾಗೆ ಕೆಎಲ್ ರಾಹುಲ್ ನಿಜ ಜೀವನದಲ್ಲಿ ಸುನಿಲ್ ಶೆಟ್ಟಿ ಅವರ ಅಳಿಯ. ಮಗಳು ಅಥಿಯಾ ಶೆಟ್ಟಿಯನ್ನು ವಿವಾಹವಾಗಿರುವ ರಾಹುಲ್ ನನ್ನ ಇನ್ನೊಬ್ಬ ಮಗ ಎಂದೇ ಸುನಿಲ್ ಶೆಟ್ಟಿ ಹಲವು ಕಡೆ ಹೇಳಿಕೊಂಡಿದ್ದಾರೆ. ಇದೀಗ ಇದೇ ಬಾಂಧವ್ಯವನ್ನು ವಿಭಿನ್ನ ರೀತಿಯಲ್ಲಿ ಜಾಹೀರಾತಿನಲ್ಲಿ ಬಳಸಿಕೊಂಡು ಎಲ್ಲರ ಗಮನ ಸೆಳೆಯುವಲ್ಲಿ ಡ್ರೀಮ್ 11 ಯಶಸ್ವಿಯಾಗಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ