AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನನಗೆ ಕೊಹ್ಲಿ ಜೊತೆ 20 ನಿಮಿಷ ಸಮಯ ಕೊಟ್ಟರೆ…: ಶಾಕಿಂಗ್ ಹೇಳಿಕೆ ನೀಡಿದ ಸುನಿಲ್ ಗವಾಸ್ಕರ್

Sunil Gavaskar: ಕೆಲವರು ವಿರಾಟ್ ಕೊಹ್ಲಿ ಫಾರ್ಮ್​ಗೆ ಮರಳು ಸಲಹೆ ನೀಡುತ್ತಿದ್ದಾರೆ. ಇದೀಗ ಟೀಮ್ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಕೊಹ್ಲಿಗೆ ಕಿವಿ ಮಾತೊಂದನ್ನು ಹೇಳಿದ್ದಾರೆ.

Virat Kohli: ನನಗೆ ಕೊಹ್ಲಿ ಜೊತೆ 20 ನಿಮಿಷ ಸಮಯ ಕೊಟ್ಟರೆ...: ಶಾಕಿಂಗ್ ಹೇಳಿಕೆ ನೀಡಿದ ಸುನಿಲ್ ಗವಾಸ್ಕರ್
Sunil Gavaskar and Virat Kohli
TV9 Web
| Edited By: |

Updated on:Jul 19, 2022 | 10:07 AM

Share

ವಿರಾಟ್ ಕೊಹ್ಲಿ (Virat Kohli) ಅವರ ಕಳಪೆ ಫಾರ್ಮ್ ಇಂಗ್ಲೆಂಡ್ ಪ್ರವಾಸದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತು. ಕೇವಲ ಭಾರತದ ಮಾಜಿ ಆಟಗಾರರು ಮಾತ್ರವಲ್ಲದೆ ವಿದೇಶಿ ದಿಗ್ಗಜ ಪ್ಲೇಯರ್ಸ್ ಕೂಡ ಕೊಹ್ಲಿ ಕಳಪೆ ಆಟದ ಬಗ್ಗೆ ಹೇಳಿಕೆ ನೀಡಿದರು. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ (Babar Azam) ಕೂಡ ಕೊಹ್ಲಿ ಆದಷ್ಟು ಬೇಗ ಲಯ ಕಂಡುಕೊಳ್ಳಲಿ ಎಂದು ಹೇಳಿದರು. ಇಂಗ್ಲೆಂಡ್ ವಿರದ್ಧದ ಟೆಸ್ಟ್​ನ ಎರಡು ಇನ್ನಿಂಗ್ಸ್​ನಲ್ಲಿ 11 ಮತ್ತು 10 ರನ್ ಗಳಿಸಿ ಔಟಾಗಿದ್ದ ಕೊಹ್ಲಿ ಆಡಿದ ಎರಡು ಟಿ20 ಪಂದ್ಯಗಳಲ್ಲೂ 1 ಮತ್ತು 11 ರನ್​ಗೆ ನಿರ್ಗಮಿಸಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ 25 ಎಸೆತಗಳಲ್ಲಿ 16 ರನ್​ಗೆ ಔಟಾದರೆ ಮೂರನೇ ಏಕದಿನದಲ್ಲಿ 17 ರನ್​ಗೆ ಬ್ಯಾಟ್ ಕೆಳಗಿಟ್ಟರು. ಸದ್ಯ ಕೊಹ್ಲಿ ವೆಸ್ಟ್ ಇಂಡೀಸ್ (West Indies) ಪ್ರವಾಸಕ್ಕೆ ಆಯ್ಕೆಯಾಗದೆ ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಈ ಬಗ್ಗೆ ಕೂಡ ಅನೇಕ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿವೆ.

ಹೀಗಿರುವಾಗ ಕೆಲವರು ವಿರಾಟ್ ಕೊಹ್ಲಿ ಫಾರ್ಮ್​ಗೆ ಮರಳು ಸಲಹೆ ನೀಡುತ್ತಿದ್ದಾರೆ. ಇದೀಗ ಟೀಮ್ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಕೊಹ್ಲಿಗೆ ಕಿವಿ ಮಾತೊಂದನ್ನು ಹೇಳಿದ್ದಾರೆ. “ನನಗೆ ಕೊಹ್ಲಿ ಜೊತೆ ಸುಮಾರು 20 ನಿಮಿಷ ಸಮಯ ಕೊಡಿ. ಅವರು ಏನು ಬದಲಾವಣೆ ಮಾಡಬೇಕು ಎಂಬ ವಿಷಯಗಳನ್ನು ನಾನು ಹೇಳಬಲ್ಲೆ. ಇದು ಅವರಿಗೆ ಸಹಾಯ ಮಾಡಬಹುದು. ಹಾಗಂತ ಇದು ಅವರಿಗೆ ಸಹಾಯ ಮಾಡುತ್ತದೆ ಎಂದು ನಾನು ಹೇಳುತ್ತಿಲ್ಲ, ಆದರೆ ಇದು ವಿಶೇಷವಾಗಿ ಆಫ್ಸ್ಟಂಪ್ ಲೈನ್‌ಗೆ ಸಂಬಂಧಿಸಿದ್ದಾಗಿದೆ,” ಎಂದು ಗವಾಸ್ಕರ್ ಇಂಡಿಯಾ ಟುಡೆಗೆ ಹೇಳಿದ್ದಾರೆ.

ಕೊಹ್ಲಿ ಯಾವಾಗ ಕಮ್​ಬ್ಯಾಕ್ ಮಾಡುತ್ತಾರೆ ಎಂಬುದನ್ನು ನಾವು ಕಾಯಬೇಕು. ಅದು ಅವರಿಗೆ ಸಹಾಯ ಮಾಡುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕು ಎಂದು ನಾನು ಭಾವಿಸುತ್ತೇನೆ. ಭಾರತಕ್ಕಾಗಿ ಅವರ ದಾಖಲೆ ನೋಡಿದರೆ ಅದ್ಭುತ, 70 ಅಂತರರಾಷ್ಟ್ರೀಯ ಶತಕಗಳನ್ನು ನೋಡಿ. ನನ್ನ ಪ್ರಕಾರ, ಅವರು ಆಟದ ಎಲ್ಲಾ ಸ್ವರೂಪಗಳಲ್ಲಿ ಎಲ್ಲಾ ಪರಿಸ್ಥಿತಿಗಳಲ್ಲಿ ರನ್ ಗಳಿಸಿದ್ದಾರೆ,” ಎಂದು ಗವಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ
Image
Yasir Shah: ಅಬ್ಬಾ ಎಂಥಾ ಸ್ಪಿನ್, ಎಷ್ಟೊಂದು ಟರ್ನ್: ಪಾಕ್ ಬೌಲರ್​​ನಿಂದ ಶೇನ್ ವಾರ್ನ್​ ರೀತಿಯ ಬೌಲಿಂಗ್
Image
Ben Stokes: ಕುಡಿದು ಹಲ್ಲೆ, ಪೊಲೀಸರ ಜೊತೆ ಗಲಾಟೆ, ಜೈಲು ವಾಸ; ಇವು ಬೆನ್ ಸ್ಟೋಕ್ಸ್ ಮಾಡಿಕೊಂಡ ಪ್ರಮುಖ 5 ವಿವಾದಗಳು
Image
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪಾಲ್ಗೊಳ್ಳುವ ಭಾರತದ ಕ್ರೀಡಾಪಟುಗಳೊಂದಿಗೆ ಜು.20 ರಂದು ಪ್ರಧಾನಿ ಮೋದಿ ಸಂವಾದ
Image
Ben Stokes: ದುಬಾರಿ ಕಾರು, ಐಷಾರಾಮಿ ಬಂಗಲೆ; ಇಂಗ್ಲೆಂಡ್​ನ ಶ್ರೀಮಂತ ಕ್ರಿಕೆಟಿಗ ಸ್ಟೋಕ್ಸ್ ಆದಾಯ ಎಷ್ಟು ಗೊತ್ತಾ?

ಕೊಹ್ಲಿ ಟ್ವಿಟರ್ ಪೋಸ್ಟ್:

ಇನ್ನು ಇದೆಲ್ಲ ಟೀಕೆಗಳ ನಡುವೆ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೆ ತಮ್ಮ ಟ್ವಿಟರ್ ಖಾತೆಯಲ್ಲಿ ವಿಶೇಷ ಫೋಟೋವೊಂದನ್ನು ಹಂಚಿಕೊಂಡಿದ್ದರು. ಯಾವುದೇ ರೀತಿಯಲ್ಲಿ ಬಿಟ್ಟುಕೊಡುವುದಿಲ್ಲ ಎಂದು ಕೊಹ್ಲಿ ತಮ್ಮ ಪೋಸ್ಟ್‌ವೊಂದರಲ್ಲಿ ಹೇಳಿಕೊಂಡಿದ್ದರು. ಕೊಹ್ಲಿ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗೆ ‘ಪರ್ಸ್ಪೆಕ್ಟಿವ್’ ಎಂಬ ಶಿರ್ಷಿಕೆ ನೀಡಿದ್ದಾರೆ. ಜೊತೆಗೆ ಕೊಹ್ಲಿ ಹಂಚಿಕೊಂಡಿರುವ ಫೋಟೋದಲ್ಲಿ, ವಾಟ್ ಇಫ್ ಐ ಫಾಲ್? , ಬಟ್ ಡಾರ್ಲಿಂಗ್, ವಾಟ್ ಇಫ್ ಯು ಫ್ಲೈ (What if I fall? Oh, but darling, what if you fly?”) ಎಂಬ ಅದ್ಭುತ ಅರ್ಥ ನೀಡುವ ಹೇಳಿಕೆ ಕೂಡ ಇದೆ. ಇದರರ್ಥ ಯಾರು ಸೋಲಿನಿಂದ ಹತಾಷರಾಗಿದ್ದಾರೋ ಅಥವಾ ತಾವು ಮಾಡುತ್ತಿರುವ ನಿರ್ದಿಷ್ಟ ಕೆಲಸ ನನ್ನಿಂದ ಸಾಧ್ಯವಾಗುತ್ತಾ ಎಂಬ ಅನುಮಾನದಿಂದ ಚಿಂತಿಸುತ್ತಿರುತ್ತಾರೋ ಅಂತಹವರಿಗೆ ಪ್ರೋತ್ಸಾಹಿಸುವಂತ್ತಾದಾಗಿದೆ.

Published On - 10:06 am, Tue, 19 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ