AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಮ್ಯಾಚ್ ವಿನ್ನರ್ ಯಾರು? ಗವಾಸ್ಕರ್ ನೀಡಿದ ಉತ್ತರವೇನು ಗೊತ್ತಾ?

T20 World Cup 2022: 1985 ರಲ್ಲಿ, ವಿಶ್ವ ಚಾಂಪಿಯನ್‌ಶಿಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಆಗ ರವಿಶಾಸ್ತ್ರಿ ಅಮೋಘ ಪ್ರದರ್ಶನ ನೀಡಿದ್ದರು. ಈ ಬಾರಿಯ ವಿಶ್ವಕಪ್‌ನಲ್ಲಿ ಪಾಂಡ್ಯ ಅದೇ ರೀತಿ ಪ್ರದರ್ಶನ ನೀಡಲಿದ್ದಾರೆ ಎಂದು ಗವಾಸ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಮ್ಯಾಚ್ ವಿನ್ನರ್ ಯಾರು? ಗವಾಸ್ಕರ್ ನೀಡಿದ ಉತ್ತರವೇನು ಗೊತ್ತಾ?
Sunil Gavaskar
TV9 Web
| Updated By: ಪೃಥ್ವಿಶಂಕರ|

Updated on:Sep 15, 2022 | 4:58 PM

Share

ಟೀಮ್ ಇಂಡಿಯಾದ (Team India) ಟಿ20 ವಿಶ್ವಕಪ್ (T20 World Cup) ತಂಡದಲ್ಲಿ ಯಾರೆಲ್ಲಾ ಇರುತ್ತಾರೆ? ಈ ಪ್ರಶ್ನೆಗೆ ಸೋಮವಾರ ಉತ್ತರ ಸಿಕ್ಕಿದೆ. ಬಿಸಿಸಿಐ (BCCI) ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಟೀಂ ಇಂಡಿಯಾ ಕೂಡ ಸಕಲ ಸಿದ್ದತೆಯಲ್ಲಿ ತೊಡಗಿದೆ. ಸ್ಥಿರ ಪ್ರದರ್ಶನ ನೀಡುವವರು ಮತ್ತು ಪಂದ್ಯ ವಿಜೇತರು ಟಿ20 ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಪ್ರಸ್ತುತ ತಂಡ ವಿಶ್ವಕಪ್ ಗೆಲ್ಲಬಹುದು

ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ತಂಡದ ಆಯ್ಕೆಗೆ ತೃಪ್ತಿಪಟ್ಟಿದ್ದು, ಪ್ರಸ್ತುತ ತಂಡ ವಿಶ್ವಕಪ್ ಗೆಲ್ಲುತ್ತದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಹಾರ್ದಿಕ್ ಪಾಂಡ್ಯ ಆಯ್ಕೆಗೆ ಸುನೀಲ ಗವಾಸ್ಕರ್ ವಿಶೇಷವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಹಾರ್ದಿಕ್ ಪಾಂಡ್ಯ ಅವರನ್ನು ರವಿಶಾಸ್ತ್ರಿ ಜೊತೆ ಹೋಲಿಸಿರುವ ಲಿಟಲ್ ಮಾಸ್ಟರ್, ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಲ್ಲಿ ವಿಶೇಷವಾಗಿ ಪರಿಣಾಮಕಾರಿಯಾಗಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲೂ ಪಾಂಡ್ಯ ಉತ್ತಮ ಪ್ರದರ್ಶನ

1985 ರಲ್ಲಿ, ವಿಶ್ವ ಚಾಂಪಿಯನ್‌ಶಿಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಆಗ ರವಿಶಾಸ್ತ್ರಿ ಅಮೋಘ ಪ್ರದರ್ಶನ ನೀಡಿದ್ದರು. ಈ ಬಾರಿಯ ವಿಶ್ವಕಪ್‌ನಲ್ಲಿ ಪಾಂಡ್ಯ ಅದೇ ರೀತಿ ಪ್ರದರ್ಶನ ನೀಡಲಿದ್ದಾರೆ ಎಂದು ಗವಾಸ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ಹಾರ್ದಿಕ್ ಪಾಂಡ್ಯ ಆ ಸಾಮರ್ಥ್ಯ ಹೊಂದಿದ್ದಾರೆ

“1985 ರಲ್ಲಿ ರವಿಶಾಸ್ತ್ರಿ ಮಾಡಿದ್ದನ್ನು ಈ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ರವಿ ಪಂದ್ಯಾವಳಿಯುದ್ದಕ್ಕೂ ಬ್ಯಾಟ್ ಮತ್ತು ಬಾಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಕೆಲವು ಉತ್ತಮ ಕ್ಯಾಚ್‌ಗಳನ್ನು ಸಹ ಹಿಡಿದಿದ್ದರು. ಹಾರ್ದಿಕ್ ಪಾಂಡ್ಯ ಈ ರೀತಿಯ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಗವಾಸ್ಕರ್ ಹೇಳಿದ್ದಾರೆ.

1985ರಲ್ಲಿ ರವಿಶಾಸ್ತ್ರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆಲ್‌ರೌಂಡರ್ ಪ್ರದರ್ಶನ ನೀಡಿದ್ದರು. ಅದಕ್ಕಾಗಿ ಅವರು ಸೀರಿಯಲ್ ವೀರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ರವಿ ಐದು ಪಂದ್ಯಗಳಲ್ಲಿ 182 ರನ್ ಗಳಿಸಿದಲ್ಲದೆ, ಮೂರು ಅರ್ಧಶತಕಗಳನ್ನು ಬಾರಿಸಿದರು. ಜೊತೆಗೆ ಬೌಲಿಂಗ್​ನಲ್ಲಿ ಎಂಟು ವಿಕೆಟ್‌ಗಳನ್ನು ಉರುಳಿಸುವಲ್ಲು ಯಶಸ್ವಿಯಾಗಿದ್ದರು. ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಅವರು 63 ರನ್ ಗಳಿಸಿ ಒಂದು ವಿಕೆಟ್ ಪಡೆದಿದ್ದರು. ಹೀಗಾಗಿ ಗವಾಸ್ಕರ್ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿತು.

ಎಚ್ಚರಿಕೆಯಿಂದ ಬಳಸಬೇಕು

ಹಾರ್ದಿಕ್ ಪಾಂಡ್ಯ ಕೆಲವು ತಿಂಗಳ ಹಿಂದೆ ಬೆನ್ನು ನೋವಿನಿಂದ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಪಾಂಡ್ಯ ತಂಡದ ಮ್ಯಾಚ್ ವಿನ್ನರ್ ಆಗಿದ್ದು, ನಾವು ಅವರನ್ನು ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು. ಕೇವಲ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾತ್ರವಲ್ಲದೆ, ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ನಲ್ಲೂ ಪಂದ್ಯವನ್ನು ಭಾರತದ ಪರವಾಗಿ ತಿರುಗಿಸಬಲ್ಲರು. 1985ರಲ್ಲಿ ರವಿಶಾಸ್ತ್ರಿ ಅವರಂತೆ ಅವರು ಪ್ರದರ್ಶನ ನೀಡಿದರೆ ಆಶ್ಚರ್ಯವಿಲ್ಲ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

Published On - 4:58 pm, Thu, 15 September 22

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?