AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯಲು ಸಲಹೆ ನೀಡಿದ ಗವಾಸ್ಕರ್

Sunil Gavaskar's India Playing XI: ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಇಶಾನ್ ಕಿಶನ್

T20 World Cup 2021: ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯಲು ಸಲಹೆ ನೀಡಿದ ಗವಾಸ್ಕರ್
Sunil Gavaskar
TV9 Web
| Edited By: |

Updated on: Oct 30, 2021 | 10:16 PM

Share

ಭಾನುವಾರ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಹಣಾಹಣಿಗಾಗಿ ಭಾರತದ ಪ್ಲೇಯಿಂಗ್ 11 ಬದಲಾವಣೆ ಮಾಡುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಲೆಜೆಂಡ್ ಸುನಿಲ್ ಗವಾಸ್ಕರ್. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ 10 ವಿಕೆಟ್​ಗಳಿಂದ ಹೀನಾಯವಾಗಿ ಸೋತಿರುವ ಭಾರತ ನ್ಯೂಜಿಲೆಂಡ್ ವಿರುದ್ದ 2 ಬದಲಾವಣೆಯೊಂದಿಗೆ ಕಣಕ್ಕಿಳಿಯಬೇಕು. ಈ ಮೂಲಕ ಕಿವೀಸ್ ವಿರುದ್ದ ಜಯ ಸಾಧಿಸಬಹುದು ಎಂದು ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.

ಗವಾಸ್ಕರ್ ಪ್ರಕಾರ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿದ್ದರೆ, ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಅವರನ್ನು ಆಡಿಸಬೇಕು. ಕಿಶನ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವುದು ಉತ್ತಮ ಎಂದಿದ್ದಾರೆ. ಇನ್ನು ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡದ ಭುವನೇಶ್ವರ್​ ಕುಮಾರ್ ಅವರನ್ನು ತಂಡದಿಂದ ಕೈಬಿಡಬೇಕು. ಅವರ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್​ಗೆ ಚಾನ್ಸ್​ ನೀಡಬೇಕು ಎಂದು ತಿಳಿಸಿದ್ದಾರೆ.

ಇದರ ಹೊರತಾಗಿ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಬಾರದು ಎಂದು ಅಭಿಪ್ರಾಯಪಟ್ಟಿರುವ ಗವಾಸ್ಕರ್, ತಂಡದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದರೆ, ನೀವು ಭಯಭೀತರಾಗಿದ್ದೀರಿ ಎಂಬುದು ಎದುರಾಳಿಗಳಿಗೆ ತಿಳಿಯುತ್ತದೆ. ಹೀಗಾಗಿ ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಉತ್ತಮ ಎಂದು ಸುನಿಲ್ ಗವಾಸ್ಕರ್ ಹೇಳಿದರು.

ಸುನಿಲ್ ಗವಾಸ್ಕರ್ ತಿಳಿಸಿರುವಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬೇಕು. ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಇಶಾನ್ ಕಿಶನ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಅಶ್ವಿನ್ , ಜಸ್​ಪ್ರೀತ್​ ಬುಮ್ರಾ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(Sunil Gavaskar Suggests Changes in India’s Playing XI)

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು