AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಗೆದ್ದೆತ್ತಿನ ಬಾಲ ಹಿಡಿ! ಆಶಸ್ ಸರಣಿ ಗೆದ್ದ ಡೇವಿಡ್ ವಾರ್ನರ್‌ ನೆನೆದ ಸನ್‌ರೈಸರ್ಸ್ ಹೈದರಾಬಾದ್

David Warner: ಟ್ವೀಟ್ ಮಾಡಿದ ಹೈದರಾಬಾದ್ ಫ್ರಾಂಚೈಸ್, ಆಶಸ್ ಸರಣಿ ಗೆಲುವಿಗಾಗಿ ವಾರ್ನರ್ ಅವರನ್ನು ಅಭಿನಂದಿಸಿತು ಮತ್ತು ಟ್ವೀಟ್​ನಲ್ಲಿ ಹರಾಜಿನ ಬಗ್ಗೆಯೂ ಪ್ರಸ್ತಾಪಿಸಿದೆ.

David Warner: ಗೆದ್ದೆತ್ತಿನ ಬಾಲ ಹಿಡಿ! ಆಶಸ್ ಸರಣಿ ಗೆದ್ದ ಡೇವಿಡ್ ವಾರ್ನರ್‌ ನೆನೆದ ಸನ್‌ರೈಸರ್ಸ್ ಹೈದರಾಬಾದ್
ಡೇವಿಡ್ ವಾರ್ನರ್‌
TV9 Web
| Edited By: |

Updated on: Dec 29, 2021 | 2:34 PM

Share

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಐಪಿಎಲ್ ತಂಡದ ಸನ್‌ರೈಸರ್ಸ್ ಹೈದರಾಬಾದ್‌ನ ಪ್ರಮುಖ ಭಾಗವಾಗಿದ್ದ ಸಮಯವಿತ್ತು. ಅವರ ನಾಯಕತ್ವದಲ್ಲಿ ತಂಡವು 2016 ರಲ್ಲಿ IPL ಪ್ರಶಸ್ತಿಯನ್ನು ಗೆದ್ದುಕೊಂಡಿತು. ತಂಡವು ವಾರ್ನರ್ ನಾಯಕತ್ವದಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಿತು, ಆದರೆ ಕಳೆದ IPL ನಲ್ಲಿ, ಈ ತಂಡವು ವಾರ್ನರ್ ಅವರನ್ನು ಪಂದ್ಯಾವಳಿಯ ಮಧ್ಯದಲ್ಲಿಯೇ ನಾಯಕತ್ವದಿಂದ ತೆಗೆದುಹಾಕಿತು. ಇದಾದ ಬಳಿಕ ಫ್ರಾಂಚೈಸಿ ಅವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲೂ ಉಳಿಸಿಕೊಳ್ಳಲಿಲ್ಲ. ನಂತರ ಮೆಗಾ ಹರಾಜಿಗೂ ಮುನ್ನ ವಾರ್ನರ್​ ಅವರನ್ನು ತಂಡದಿಂದ ಕೈಬಿಟ್ಟಿತು. ಹೀಗಾಗಿ ವಾರ್ನರ್ ಈ ಬಾರಿ ಮೆಗಾ ಹರಾಜಿನಲ್ಲಿರಲಿದ್ದಾರೆ. ವಾರ್ನರ್ ಫಾರ್ಮ್​ನಲ್ಲಿಲ್ಲದ ಕಾರಣ ತಂಡ ಅವರನ್ನು ಕೈ ಬಿಟ್ಟಿತ್ತು. ಇದೀಗ ಈ ಬ್ಯಾಟ್ಸ್‌ಮನ್ ಫಾರ್ಮ್‌ಗೆ ಮರಳಿದ್ದಾರೆ.

ಈಗ ನಡೆಯುತ್ತಿರುವ ಆಶಸ್ ಸರಣಿಯಲ್ಲಿ ವಾರ್ನರ್ ಬಲಿಷ್ಠ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ 3-0 ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಸರಣಿಯನ್ನು ವಶಪಡಿಸಿಕೊಂಡಿದೆ. ಇದಾದ ಬಳಿಕ ಸನ್ ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಟಾಮ್ ಮೂಡಿ ಆಸ್ಟ್ರೇಲಿಯ ತಂಡವನ್ನು ಅಭಿನಂದಿಸಿದ್ದಾರೆ.

ಟ್ವೀಟ್ ಮಾಡಿದ ಫ್ರಾಂಚೈಸ್ ಟ್ವೀಟ್ ಮಾಡಿದ ಹೈದರಾಬಾದ್ ಫ್ರಾಂಚೈಸ್, ಆಶಸ್ ಸರಣಿ ಗೆಲುವಿಗಾಗಿ ವಾರ್ನರ್ ಅವರನ್ನು ಅಭಿನಂದಿಸಿತು ಮತ್ತು ಟ್ವೀಟ್​ನಲ್ಲಿ ಹರಾಜಿನ ಬಗ್ಗೆಯೂ ಪ್ರಸ್ತಾಪಿಸಿದೆ. ಆಶಸ್ ಸರಣಿಯನ್ನು ಗೆದ್ದಿದ್ದಕ್ಕಾಗಿ ಡೇವಿಗೆ ಅಭಿನಂದನೆಗಳು. ನೀವು ಫಾರ್ಮ್‌ನಲ್ಲಿರುವಂತೆ ತೋರುತ್ತಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ನಿಮಗೆ ಅದೃಷ್ಟ ಖುಲಾಯಿಸಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಬರೆದುಕೊಂಡಿದೆ.

ಟಿ20 ವಿಶ್ವಕಪ್‌ನಲ್ಲಿ ರಾಕೆಟ್ IPL-2021 ರ ಕೊನೆಯ ಕೆಲವು ಪಂದ್ಯಗಳಲ್ಲಿ, ಸನ್‌ರೈಸರ್ಸ್ ಹೈದರಾಬಾದ್‌ನಿಂದ ಕೊನೆಯ 11 ರಲ್ಲಿ ವಾರ್ನರ್‌ಗೆ ಸ್ಥಾನ ನೀಡಲಿಲ್ಲ. ಐಪಿಎಲ್ ನಂತರವೇ ಐಸಿಸಿ ಟಿ20 ವಿಶ್ವಕಪ್ ಆಯೋಜಿಸಲಾಗಿತ್ತು. ಈ ವಿಶ್ವಕಪ್‌ನಲ್ಲಿ, ವಾರ್ನರ್ ಫಾರ್ಮ್‌ಗೆ ಮರಳಿದರು ಮತ್ತು ಆಸ್ಟ್ರೇಲಿಯಾದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಪಂದ್ಯಾವಳಿಯಲ್ಲಿ ಅವರು ಏಳು ಪಂದ್ಯಗಳಲ್ಲಿ 289 ರನ್ ಗಳಿಸಿದರು. ಈ ಕಾರಣದಿಂದಾಗಿ, ಅವರು ಪಂದ್ಯಾವಳಿಯ ಆಟಗಾರರಾಗಿ ಆಯ್ಕೆಯಾದರು.

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ