AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs SRH, IPL 2025: ಟಾಸ್ ಗೆದ್ದ ಎಸ್​ಆರ್​ಹೆಚ್: ಧೋನಿ ತಂಡದಲ್ಲಿ ಮಹತ್ವದ ಬದಲಾವಣೆ

Chennai Super Kings vs Sunrisers Hyderabad: ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ತಂಡ ಇದುವರೆಗೆ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಮಾತ್ರ ಗೆದ್ದಿದ್ದು, ಪ್ಲೇಆಫ್‌ಗೆ ಪ್ರವೇಶ ಪಡೆಯುವ ಅವರ ಆಸೆ ಬಹುತೇಕ ಕಮರಿ ಹೋಗಿದೆ. ಸನ್‌ರೈಸರ್ಸ್ ಹೈದರಾಬಾದ್‌ನಲ್ಲೂ ಇದೇ ಪರಿಸ್ಥಿತಿ. ಈ ಋತುವಿನಲ್ಲಿ ಸನ್‌ರೈಸರ್ಸ್ ಕೂಡ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ.

CSK vs SRH, IPL 2025: ಟಾಸ್ ಗೆದ್ದ ಎಸ್​ಆರ್​ಹೆಚ್: ಧೋನಿ ತಂಡದಲ್ಲಿ ಮಹತ್ವದ ಬದಲಾವಣೆ
Csk Vs Srh
Vinay Bhat
|

Updated on: Apr 25, 2025 | 7:10 PM

Share

ಬೆಂಗಳೂರು (ಏ. 25): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 43 ನೇ ಪಂದ್ಯವು ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್  (Chennai Super Kings vs Sunrisers Hyderabad) ನಡುವೆ ನಡೆಯುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪಂದ್ಯ ಶುರುವಾಗಲಿದ್ದು, ಎರಡೂ ತಂಡಗಳು ಚೆನ್ನೈನ ತವರು ಮೈದಾನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ. ಈ ಋತುವಿನಲ್ಲಿ, ಸನ್‌ರೈಸರ್ಸ್ ಮತ್ತು ಚೆನ್ನೈ ಎರಡರ ಸ್ಥಿತಿಯೂ ಒಂದೇ ಆಗಿದೆ. ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ತಂಡ ಇದುವರೆಗೆ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಮಾತ್ರ ಗೆದ್ದಿದ್ದು, ಪ್ಲೇಆಫ್‌ಗೆ ಪ್ರವೇಶ ಪಡೆಯುವ ಅವರ ಆಸೆ ಬಹುತೇಕ ಕಮರಿ ಹೋಗಿದೆ.

ಸನ್‌ರೈಸರ್ಸ್ ಹೈದರಾಬಾದ್‌ನಲ್ಲೂ ಇದೇ ಪರಿಸ್ಥಿತಿ. ಈ ಋತುವಿನಲ್ಲಿ ಸ್ಫೋಟಕ ಆರಂಭ ಕಂಡಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಯ ಕಳೆದುಕೊಂಡ ನಂತರ ಮತ್ತೆ ಲಯಕ್ಕೆ ಮರಳಲು ಸಾಧ್ಯವಾಗಿಲ್ಲ. ಈ ಋತುವಿನಲ್ಲಿ ಸನ್‌ರೈಸರ್ಸ್ ಕೂಡ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇಲ್ಲಿಂದ, ಸನ್‌ರೈಸರ್ಸ್ ತಂಡವು ಉಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೂರ್ನಿಯನ್ನು ಕೊನೆಗೊಳಿಸಲು ಪ್ರಯತ್ನಿಸಬೇಕಿದೆ.

ಹೀಗಾಗಿ, ಈ ಎರಡೂ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈಗಾಗಲೇ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಸಿಎಸ್​ಕೆ ತಂಡದಲ್ಲಿ ಎರಡು ಮಹತ್ವದ ಬದಲಾವಣೆ ಮಾಡಲಾಗಿದೆ. ರಚಿನ್ ರವೀಂದ್ರ ಮತ್ತು ವಿಜಯ್ ಶಂಕರ್ ಅವರನ್ನು ಕೈಬಿಡಲಾಗಿದ್ದು, ಡೆವಾಲ್ಡ್ ಬ್ರೆವಿಸ್ ಮತ್ತು ದೀಪಕ್ ಹೂಡ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಕೆಕೆಆರ್ ತಂಡಕ್ಕೆ ಕಾಶ್ಮೀರಿ ಘಾತುಕ ವೇಗಿಯ ಆಗಮನ
Image
ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವ ನಿಮಗೆ ನಾಚಿಕೆಯಾಗಬೇಕು; ಕನೇರಿಯಾ
Image
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
Image
14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್​ಸಿಬಿ

IPL 2025: ಐಪಿಎಲ್ ದ್ವಿತೀಯಾರ್ಧಕ್ಕೆ ಕೆಕೆಆರ್ ತಂಡ ಸೇರಿಕೊಳ್ಳಲಿರುವ ಜಮ್ಮು ಕಾಶ್ಮೀರ ವೇಗಿ

ಉಭಯ ತಂಡಗಳ ಪ್ಲೇಯಿಂಗ್ XI:

ಚೆನ್ನೈ ಸೂಪರ್ ಕಿಂಗ್ಸ್: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕುರ್ರನ್, ರವೀಂದ್ರ ಜಡೇಜಾ, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್), ದೀಪಕ್ ಹೂಡ, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಷ ಪತಿರಾನ.

ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ಕೆಮಿಂದು ಮೆಂಡೀಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜಯದೇವ್ ಉನಾದ್ಕಟ್, ಜೀಶನ್ ಅನ್ಸಾರಿ, ಮೊಹಮ್ಮದ್ ಶಮಿ.

ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯಗಳ ಅಂಕಿಅಂಶಗಳನ್ನು ನೋಡಿದರೆ, ತುಂಬಾ ಆಸಕ್ತಿದಾಯಕವಾಗಿದೆ. ಈ ಮೈದಾನದಲ್ಲಿ ಇಲ್ಲಿಯವರೆಗೆ ಒಟ್ಟು 89 ಪಂದ್ಯಗಳು ನಡೆದಿವೆ. ಇದರಲ್ಲಿ 51 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಈ ಸಂಖ್ಯೆ 38. ಈ ಮೈದಾನದಲ್ಲಿ ದಾಖಲಾದ ಅತಿ ಹೆಚ್ಚು ಸ್ಕೋರ್ ಎಂದರೆ 5 ವಿಕೆಟ್‌ಗಳಿಗೆ 246 ರನ್‌ಗಳು, ಕನಿಷ್ಠ ಸ್ಕೋರ್ 70 ರನ್‌ಗಳು. ಸನ್‌ರೈಸರ್ಸ್ ಮತ್ತು ಸಿಎಸ್‌ಕೆ ನಡುವಿನ ಪಂದ್ಯದ ಬಗ್ಗೆ ಮಾತನಾಡಿದರೆ, ಎರಡೂ ತಂಡಗಳು ಒಟ್ಟು 21 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಸಿಎಸ್‌ಕೆ ಪ್ರಾಬಲ್ಯ ಸಾಧಿಸಿದೆ. ಸಿಎಸ್‌ಕೆ ತಂಡ ಸನ್‌ರೈಸರ್ಸ್ ವಿರುದ್ಧ 15 ಪಂದ್ಯಗಳನ್ನು ಗೆದ್ದಿದ್ದರೆ, ಸನ್‌ರೈಸರ್ಸ್ ಕೇವಲ 6 ಪಂದ್ಯಗಳನ್ನು ಗೆದ್ದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ