AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Raina: ಪ್ಲೇ ಆಫ್​ಗೆ ಎಂಟ್ರಿ ಕೊಡಲಿರುವ 4 ತಂಡಗಳನ್ನು ಹೆಸರಿಸಿದ ಸುರೇಶ್ ರೈನಾ

IPL 2022: ಈ ಸಲ ಮೆಗಾ ಹರಾಜಿನಲ್ಲಿ ಸುರೇಶ್ ರೈನಾ ಅವರನ್ನು ಯಾವುದೇ ತಂಡ ಖರೀದಿಸಿಲ್ಲ. 2 ಕೋಟಿ ರೂ ಮೂಲ ಬೆಲೆ ಹೊಂದಿದ್ದ ರೈನಾ ಅವರ ಖರೀದಿಗೆ ಈ ಹಿಂದಿನ ಫ್ರಾಂಚೈಸಿ ಸಿಎಸ್​ಕೆ ಕೂಡ ಒಲವು ತೋರಲಿಲ್ಲ. ಹೀಗಾಗಿ ಈ ಬಾರಿ ರೈನಾ ಅನ್​ಸೋಲ್ಡ್​ ಪಟ್ಟಿಯಲ್ಲಿ ಉಳಿದುಕೊಂಡಿದ್ದರು.

Suresh Raina: ಪ್ಲೇ ಆಫ್​ಗೆ ಎಂಟ್ರಿ ಕೊಡಲಿರುವ 4 ತಂಡಗಳನ್ನು ಹೆಸರಿಸಿದ ಸುರೇಶ್ ರೈನಾ
IPL 2022
TV9 Web
| Edited By: |

Updated on: Apr 03, 2022 | 11:29 PM

Share

ರಂಗೀನ್ ಕ್ರಿಕೆಟ್ ಟೂರ್ನಿ ಐಪಿಎಲ್ ಸೀಸನ್ (IPL 2022) 15 ಶುರುವಾಗಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್​ ಸಿಎಸ್​ಕೆ (CSK) ತಂಡಕ್ಕೆ ಕೆಕೆಆರ್ ತಂಡ ಸೋಲಿನ ರುಚಿ ತೋರಿಸಿದೆ. ಹಾಗೆಯೇ 2ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ (MI vs DC) ಮಣಿಸಿದೆ. ಇನ್ನು 3ನೇ ಪಂದ್ಯದಲ್ಲಿ ಆರ್​ಸಿಬಿ (RCB) ಪಂಜಾಬ್ ಕಿಂಗ್ಸ್ (PBKS) ವಿರುದ್ದ ಸೋತರೂ, ಕೆಕೆಆರ್ ವಿರುದ್ದ ಗೆಲ್ಲುವ ಮೂಲಕ ಫಾಫ್ ಡುಪ್ಲೆಸಿಸ್ ಪಡೆ ಗೆಲುವಿನ ಖಾತೆ ತೆರೆದಿದೆ. ಮತ್ತೊಂದೆಡೆ ಸತತ ಎರಡು ಸೋಲುಗಳಿಂದ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಕಂಗೆಟ್ಟಿದೆ. ಒಟ್ಟಿನಲ್ಲಿ ಐಪಿಎಲ್​ನ ಆರಂಭದಲ್ಲೇ ಅನಿರೀಕ್ಷಿತ ಫಲಿತಾಂಶಗಳು ಮೂಡಿಬರುತ್ತಿರುವುದರಿಂದ ದಿನದಿಂದ ದಿನಕ್ಕೆ ಕುತೂಹಲ ಕೂಡ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಈ ಬಾರಿ ಅಂತಿಮವಾಗಿ 10 ರಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡ ಯಾವುದೆಂಬ ಲೆಕ್ಕಚಾರಗಳು ಆರಂಭದಲ್ಲೇ ಶುರುವಾಗಿದೆ. ಅದರಂತೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕೂಡ ಈ ಬಾರಿ ಪ್ಲೇ ಆಫ್ ಆಡಲಿರುವ ತಂಡಗಳಾವುವು ಎಂಬ ಭವಿಷ್ಯ ನುಡಿದಿದ್ದಾರೆ.

ಮೊದಲ ಎರಡು ಪಂದ್ಯಗಳ ಸೋಲಿನ ಹೊರತಾಗಿಯೂ ಈ ಬಾರಿ ಕೂಡ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಪ್ಲೇ ಆಫ್ ಪ್ರವೇಶಿಸಲಿದೆ ಎಂದಿದ್ದಾರೆ ಸುರೇಶ್ ರೈನಾ. ಇನ್ನು ಹೊಸ ತಂಡಗಳಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೂಡ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ತಿಳಿಸಿದ್ದಾರೆ.

ಇನ್ನು ರಿಷಭ್ ಪಂಡೆ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಈ ಸಲ ಪ್ಲೇ ಆಫ್ ಪ್ರವೇಶಿಸುವುದರಲ್ಲಿ ಅನುಮಾನವಿಲ್ಲ ಎಂದು ರೈನಾ ಹೇಳಿದ್ದಾರೆ. ಹಾಗೆಯೇ ಪ್ಲೇ ಆಫ್​ನಲ್ಲಿ ಸ್ಥಾನ ಪಡೆಯಲಿರುವ ನಾಲ್ಕನೇ ತಂಡವಾಗಿ ಆರ್​ಸಿಬಿಯನ್ನು ಆಯ್ಕೆ ಮಾಡಿದ್ದಾರೆ. ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ನನ್ನ ಪ್ರಕಾರ ಪ್ಲೇ ಆಫ್ ಆಡಲಿದೆ ಎಂದು ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.

ಇದಾಗ್ಯೂ ಸುರೇಶ್ ರೈನಾ ಈ ಬಾರಿ ಮುಂಬೈ ಇಂಡಿಯನ್ಸ್​ ಮುಂದಿನ ಹಂತಕ್ಕೇರುವ ಬಗ್ಗೆ ಯಾವುದೇ ವಿಶ್ವಾಸ ಹೊಂದಿಲ್ಲ. ನನ್ನ ಪ್ರಕಾರ CSK, LSG, DC ಮತ್ತು RCB ತಂಡಗಳು ಲೀಗ್ ಹಂತದಿಂದ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ ಎಂದು ಸುರೇಶ್ ರೈನಾ ತಿಳಿಸಿದ್ದಾರೆ.

ಸುರೇಶ್ ರೈನಾ ಹೊಸ ಇನಿಂಗ್ಸ್​:

ಈ ಸಲ ಮೆಗಾ ಹರಾಜಿನಲ್ಲಿ ಸುರೇಶ್ ರೈನಾ ಅವರನ್ನು ಯಾವುದೇ ತಂಡ ಖರೀದಿಸಿಲ್ಲ. 2 ಕೋಟಿ ರೂ ಮೂಲ ಬೆಲೆ ಹೊಂದಿದ್ದ ರೈನಾ ಅವರ ಖರೀದಿಗೆ ಈ ಹಿಂದಿನ ಫ್ರಾಂಚೈಸಿ ಸಿಎಸ್​ಕೆ ಕೂಡ ಒಲವು ತೋರಲಿಲ್ಲ. ಹೀಗಾಗಿ ಈ ಬಾರಿ ರೈನಾ ಅನ್​ಸೋಲ್ಡ್​ ಪಟ್ಟಿಯಲ್ಲಿ ಉಳಿದುಕೊಂಡಿದ್ದರು. ಇದಾಗ್ಯೂ ರೈನಾ ಬದಲಿ ಆಟಗಾರನಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಗುಜರಾತ್ ತಂಡದಿಂದ ಜೇಸನ್ ರಾಯ್ ಹೊರನಡೆದಾಗ ಬದಲಿ ಆಟಗಾರನಾಗಿ ಅಫ್ಘಾನ್ ಆಟಗಾರ ರಹಮನುಲ್ಲಾ ಗುರ್ಬಾಜ್ ಆಯ್ಕೆಯಾಗಿದ್ದರು.

ಇನ್ನು ಕೆಕೆಆರ್​ ತಂಡದಿಂದ ಹೊರನಡೆದ ಅಲೆಕ್ಸ್ ಹೇಲ್ಸ್ ಬದಲಿಗೆ ಆರೋನ್ ಫಿಂಚ್​ಗೆ ಆಯ್ಕೆಯಾಗಿದ್ದರು. ಇದಾಗ್ಯೂ ರೈನಾ ಅವರ ಆಯ್ಕೆಗೆ ಯಾವುದೇ ಫ್ರಾಂಚೈಸಿ ಮುಂದಾಗಿರಲಿಲ್ಲ. ಇದೀಗ ಸುರೇಶ್ ರೈನಾ ಐಪಿಎಲ್​ ಪಂದ್ಯಗಳ ವೀಕ್ಷಕ ವಿವರಣೆಗಾರನಾಗಿ ಕಾಣಿಸಿಕೊಂಡಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ಪಂದ್ಯದ ವೀಕ್ಷಕ ವಿವರಣೆಗಾರನಾಗಿ ರೈನಾ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು