AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI T20: ಟಿ20ಯಲ್ಲೂ ಭಾರತ ಶುಭಾರಂಭ: ರೋಹಿತ್ ನಾಯಕತ್ವದ ಗೆಲುವಿನ ಓಟ ಮುಂದುವರಿಕೆ

India vs West Indies: ವೆಸ್ಟ್ ಇಂಡೀಸ್ ನೀಡಿದ್ದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ವಿಕೆಟ್ ಕೀಪರ್ ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಿದರು. ಇಬ್ಬರೂ 64 ರನ್‌ಗಳ ಜೊತೆಯಾಟ ಆಡಿದರು.

IND vs WI T20: ಟಿ20ಯಲ್ಲೂ ಭಾರತ ಶುಭಾರಂಭ: ರೋಹಿತ್ ನಾಯಕತ್ವದ ಗೆಲುವಿನ ಓಟ ಮುಂದುವರಿಕೆ
IND vs WI T20
TV9 Web
| Edited By: |

Updated on: Feb 17, 2022 | 7:34 AM

Share

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್​ಸ್ವೀಪ್ ಮಾಡಿ ಸಾಧನೆ ಗೈದಿದ್ದ ಭಾರತ (India vs West Indies) ಇದೀಗ ಟಿ20 ಸರಣಿಯಲ್ಲೂ ಭರ್ಜರಿ ಶುಭಾರಂಭ ಮಾಡಿದೆ. ಬುಧವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್​​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ವಿಕೆಟ್​​ಗಳ ಅಮೋಘ ಗೆಲುವು ಕಂಡಿತು. ಪದಾರ್ಪಣೆ ಪಂದ್ಯದಲ್ಲೇ ರವಿ ಬಿಷ್ಟೋಯ್ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿದರೆ, ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಇಶಾನ್ ಕಿಶನ್ ಅವರ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಪರಿಪೂರ್ಣ ನಾಯಕನಾಗಿ ರೋಹಿತ್ ಶರ್ಮಾ ತಮ್ಮ ಗೆಲುವಿನ ಓಟವನ್ನು ಮುಂದುವರೆಸಿದ್ದಾರೆ. ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಸತತವಾಗಿ ಸೋಲುಣ್ಣುತ್ತಿದ್ದು ಭಾರೀ ಮುಖಭಂಗಕ್ಕೆ ಒಳಗಾಗಿದೆ.

ವೆಸ್ಟ್ ಇಂಡೀಸ್ ನೀಡಿದ್ದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ವಿಕೆಟ್ ಕೀಪರ್ ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಿದರು. ಇಬ್ಬರೂ 64 ರನ್‌ಗಳ ಜೊತೆಯಾಟ ಆಡಿದರು. ರೋಹಿತ್ ಕೇವಲ 19 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ನೊಂದಿಗೆ 40 ರನ್ ಚಚ್ಚಿದರು. ಇಶಾನ್ ಕಿಶನ್ 42 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 35 ರನ್ ಗಳಿಸಿದರು. ಮಾಜಿ ನಾಯಕ ವಿರಾಟ್ ಕೊಹ್ಲಿ(17), ರಿಷಭ್ ಪಂತ್(8) ನಿರಾಶೆಗೊಳಿಸಿದರು. ರೋಹಿತ್ ಔಟಾದ ನಂತರ ಇಶಾನ್ ಮತ್ತು ವಿರಾಟ್ ಕೊಹ್ಲಿ ಕೂಡ ಉತ್ತಮ ಆಟ ಆಡಿದರು.

ಆದರೆ 21 ರನ್‌ಗಳ ಅಂತದಲ್ಲಿ ಇಶಾನ್‌, ಕೊಹ್ಲಿ ಮತ್ತು ರಿಷಭ್ ಪಂತ್ ಔಟಾದಾಗ ಆತಂಕ ಮೂಡಿತು. ಈ ಸಂದರ್ಭದಲ್ಲಿ ಮೇಲುಗೈ ಸಾಧಿಲು ವೆಸ್ಟ್ ಇಂಡೀಸ್ ಪ್ರಯತ್ನಿಸಿತು. ಆದರೆ 48 ರನ್‌ಗಳ ಜೊತೆಯಾಟವಾಡಿ ಸೂರ್ಯಕುಮಾರ್ ಮತ್ತು ವೆಂಕಟೇಶ್‌ ಅಯ್ಯರ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಸೂರ್ಯಕುಮಾರ್ 18 ಎಸೆಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಬಾರಿಸಿ ಅಜೇಯ 34 ರನ್ ಗಳಿಸಿದರೆ, ಅಯ್ಯರ್ 13 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಿಡಿಸಿ 24 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನೂ ಏಳು ಎಸೆತಗಳು ಬಾಕಿ ಇರುವಾಗ ಭಾರತ ಆರು ವಿಕೆಟ್‌ಗಳ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಅಗ್ರ ಕ್ರಮಾಂಕದ ಬ್ಯಾಟರ್ ನಿಕೊಲಸ್ ಪೂರನ್ (61 ರನ್, 43 ಎಸೆತ, 4 ಬೌಂಡರಿ, 5 ಸಿಕ್ಸರ್) ಏಕಾಂಗಿ ಹೋರಾಟ ನೀಡಿದ ಹೊರತಾಗಿಯೂ ಭಾರತವು ವೆಸ್ಟ್‌ಇಂಡೀಸ್ ತಂಡವನ್ನು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 157 ರನ್‌ಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು.

ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಯುವ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಪಂದ್ಯ ತನ್ಮೂಲಕ ಅಂತರರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಎರಡು ವಿಕೆಟ್ ಪಡೆದುಕೊಳ್ಳುವ ಮೂಲಕ ಬಿಷ್ಣೋಯ್ ಪದರ್ಪಣೆ ಮಾಡಿದ ಪಂದ್ಯದಲ್ಲೇ ಮಿಂಚಿದರು. ಅಲ್ಲದೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ತಮ್ಮದಾಗಿಸಿದರು.

IND vs WI: ಚೊಚ್ಚಲ ಪಂದ್ಯದಲ್ಲೇ ರವಿ ಬಿಷ್ಣೋಯ್ ಎಡವಟ್ಟು! ನಂತರ ಒಂದೇ ಓವರ್​ನಲ್ಲಿ 2 ವಿಕೆಟ್

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!