AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL, ICC World Cup: ಗುರುತು ಮರೆಮಾಚಿ ಕ್ಯಾಮೆರಾ ಹಿಡಿದು ರಸ್ತೆಗೆ ಇಳಿದ ಸೂರ್ಯಕುಮಾರ್: ಏನೆಲ್ಲ ಆಯಿತು ನೋಡಿ

Suryakumar Yadav in a never seen before avatar: ಸೂರ್ಯಕುಮಾರ್ ಯಾದವ್ ಅವರು ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪ್ರದರ್ಶನದ ಬಗ್ಗೆ ಮುಂಬೈ ಜನರ ಮನಸ್ಥಿತಿಯನ್ನು ತಿಳಿದುಕೊಳ್ಳಲು ವಿಶೇಷ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಸಾಮಾಜಿಕ ತಾಣಗಳಲ್ಲಿ ಇದರ ವಿಡಿಯೋವನ್ನು ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ.

IND vs SL, ICC World Cup: ಗುರುತು ಮರೆಮಾಚಿ ಕ್ಯಾಮೆರಾ ಹಿಡಿದು ರಸ್ತೆಗೆ ಇಳಿದ ಸೂರ್ಯಕುಮಾರ್: ಏನೆಲ್ಲ ಆಯಿತು ನೋಡಿ
Suryakumar Yadav
Vinay Bhat
|

Updated on: Nov 02, 2023 | 10:09 AM

Share

ಭಾರತ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್‌ನಲ್ಲಿ ಇಂದು ಶ್ರೀಲಂಕಾ (India vs Sri Lanka) ವಿರುದ್ಧ ತನ್ನ ಏಳನೇ ಪಂದ್ಯವನ್ನು ಆಡಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲಾಗಿದೆ. ಈಗಾಗಲೇ ಈ ಮ್ಯಾಚ್​ಗಾಗಿ ಟೀಮ್ ಇಂಡಿಯಾ ಆಟಗಾರರು ಮುಂಬೈ ತಲುಪಿದ್ದು, ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ ವಿಭಿನ್ನ ರೂಪತಾಳಿ ಕ್ಯಾಮೆರಾ ಹಿಡಿದುಕೊಂಡು ಮುಂಬೈ ಜನರೊಂದಿಗೆ ಮಾತುಕತೆ ನಡೆಸಿದ್ದಾರೆ.

ಸೂರ್ಯಕುಮಾರ್ ಅವರು ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪ್ರದರ್ಶನದ ಬಗ್ಗೆ ಮುಂಬೈ ಜನರ ಮನಸ್ಥಿತಿಯನ್ನು ತಿಳಿದುಕೊಳ್ಳಲು ವಿಶೇಷ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಸಾಮಾಜಿಕ ತಾಣಗಳಲ್ಲಿ ಇದರ ವಿಡಿಯೋವನ್ನು ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ 2 ಬದಲಾವಣೆ: ಇಲ್ಲಿದೆ ಭಾರತದ ಪ್ಲೇಯಿಂಗ್ XI
Image
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ
Image
ಭಾರತದ ಪ್ಲೇಯಿಂಗ್ XI ಬಗ್ಗೆ ದೊಡ್ಡ ಹಿಂಟ್ ಕೊಟ್ಟ ರೋಹಿತ್: ಹೊಸ ಆಟಗಾರ?
Image
ವಿಶ್ವಕಪ್​ನಲ್ಲಿಂದು IND-SL ಮುಖಾಮುಖಿ: 7ನೇ ಜಯದ ಮೇಲೆ ರೋಹಿತ್ ಕಣ್ಣು

ಸೂರ್ಯಕುಮಾರ್ ವಿಶೇಷ ಗೆಟಪ್​ನಲ್ಲಿ ಕಾಣಿಸಿಕೊಂಡ ವಿಡಿಯೋ:

ಸೂರ್ಯಕುಮಾರ್ ಈ ಬಾರಿಯ ವಿಶ್ವಕಪ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಲಿಲ್ಲ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಕಣಕ್ಕಿಳಿದಿದ್ದಾರೆ. ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಪಂದ್ಯಗಳನ್ನು ಆಡಿದ್ದಾರೆ. ಇದರ ನಡುವೆ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಸೂರ್ಯ ಗುರುತು ಸಿಗದಂತೆ ಮುಂಬೈ ಬೀದಿಗೆ ಇಳಿದು ಕ್ರಿಕೆಟ್ ಅಭಿಮಾನಿಗಳನ್ನು ಸಂದರ್ಶಿಸಿದರು. ಮಾಸ್ಕ್ ಧರಿಸಿ, ತಲೆಯನ್ನು ಟೋಪಿಯಿಂದ ಮುಚ್ಚಿಕೊಂಡಿದ್ದರಿಂದ ಸೂರ್ಯ ಗುರುತು ಯಾರಿಗೂ ಸಿಗಲಿಲ್ಲ.

2 ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!

ಸೂರ್ಯ ನಡೆಸಿದ ಸಂದರ್ಶನದಲ್ಲಿ ಭಾರತದ ಪ್ರದರ್ಶನವನ್ನು ಅಭಿಮಾನಿಗಳು ಕೊಂಡಾಡಿದ್ದಾರೆ. ಜೊತೆಗೆ ಸೂರ್ಯಕುಮಾರ್ ಆಟದ ಬಗ್ಗೆಯೂ ಅಭಿಮಾನಿಗಳು ಮಾತನಾಡಿದ್ದಾರೆ. ಸಾಮಾನ್ಯವಾಗಿ ಫಿನಿಶರ್ ಪಾತ್ರವನ್ನು ನಿರ್ವಹಿಸುವ ಸೂರ್ಯಕುಮಾರ್, ಇನ್ನೂ ಬೇಗನೆ ಬ್ಯಾಟಿಂಗ್‌ಗೆ ಬರಬೇಕು ಎಂದು ಫ್ಯಾನ್ಸ್ ಹೇಳಿದ್ದಾರೆ. “ಸೂರ್ಯ ಇನ್ನೂ ಸ್ವಲ್ಪ ಬೇಗನೆ ಬ್ಯಾಟ್ ಮಾಡಲು ಬರಬೇಕು, ಅವರು ಈಗ ಐದು/6 ನೇ ಸ್ಥಾನದಲ್ಲಿ ಬರುತ್ತಿದ್ದಾರೆ. ಹೀಗಾಗಿ ಅವರಿಗೆ ಆಡಲು ಸಾಕಷ್ಟು ಚೆಂಡುಗಳು ಸಿಗುತ್ತಿಲ್ಲ. ಅವರು ತಮ್ಮ ಆಟವನ್ನು ಸುಧಾರಿಸಲು ಬೇಗನೆ ಬ್ಯಾಟ್ ಮಾಡಲು ಬರಬೇಕು,” ಎಂದಿದ್ದಾರೆ.

ಅಭಿಮಾನಿ ತಮ್ಮ ಅಭಿಪ್ರಾಯವನ್ನು ಹೇಳಿ ಮುಗಿಸಿದ ತಕ್ಷಣ, ಸೂರ್ಯ ತನ್ನ ಕ್ಯಾಪ್ ಮತ್ತು ಮಾಸ್ಕ್ ತೆಗೆದು, “ಧನ್ಯವಾದಗಳು, ನಾನು ಸೂರ್ಯಕುಮಾರ್ ಯಾದವ್” ಎಂದು ಹೇಳಿದ್ದಾರೆ. ಇದನ್ನು ಕಂಡು ಅಭಿಮಾನಿಗಳಿಗೆ ಖುಷಿಯಾಗಿದ್ದು, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ