AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯ ಜತೆ ಯಾವುದೇ ಮುನಿಸಿಲ್ಲ: ಸೂರ್ಯಕುಮಾರ್ ಯಾದವ್

Suryakumar Yadav vs Hardik Pandya: ಭಾರತ ಟಿ20 ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯರನ್ನು ಕೆಳಗಿಳಿಸಿ ಸೂರ್ಯಕುಮಾರ್ ಯಾದವ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು. ಇದರ ಹೊರತಾಗಿಯೂ ಉಪನಾಯಕತ್ವದ ನಿರೀಕ್ಷೆಯಲ್ಲಿದ್ದ ಹಾರ್ದಿಕ್ ಪಾಂಡ್ಯಗೆ ಇಂಗ್ಲೆಂಡ್ ಸರಣಿಗೂ ಮುನ್ನ ಬಿಸಿಸಿಐ ಬಿಗ್ ಶಾಕ್ ನೀಡಿದೆ. ಭಾರತ ಟಿ20 ತಂಡದ ನೂತನ ಉಪನಾಯಕನಾಗಿ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಸೂರ್ಯ-ಹಾರ್ದಿಕ್ ನಡುವೆ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಹಾರ್ದಿಕ್ ಪಾಂಡ್ಯ ಜತೆ ಯಾವುದೇ ಮುನಿಸಿಲ್ಲ: ಸೂರ್ಯಕುಮಾರ್ ಯಾದವ್
Suryakumar Yadav - Hardik Pandya
TV9 Web
| Edited By: |

Updated on: Jan 22, 2025 | 2:33 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಮುನ್ನಡೆಸಲಿದ್ದಾರೆ. ಆದರೆ ಈ ಸರಣಿಯಲ್ಲಿ ಉಪನಾಯಕರಾಗಿ ಕಾಣಿಸಿಕೊಳ್ಳುತ್ತಿರುವುದು ಅಕ್ಷರ್ ಪಟೇಲ್. ಈ ಹಿಂದೆ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿ ಎಂದು ಬಿಂಬಿತರಾಗಿದ್ದ ಹಾರ್ದಿಕ್ ಪಾಂಡ್ಯರನ್ನು ಎಲ್ಲಾ ರೀತಿಯ ನಾಯಕತ್ವದಿಂದಲೂ ಕಡೆಗಣಿಸಲಾಗಿದೆ.

ಇತ್ತ ಅಕ್ಷರ್ ಪಟೇಲ್ ಉಪನಾಯಕರಾಗಿ ಆಯ್ಕೆಯಾಗುತ್ತಿದ್ದಂತೆ, ಈ ಬದಲಾವಣೆಗೆ ಏನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದರ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಈ ಎಲ್ಲಾ ವದಂತಿಗಳಿಗೆ ಟೀಮ್ ಇಂಡಿಯಾ ನಾಯಕ ತೆರೆ ಎಳೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್ ಯಾದವ್​ಗೆ ಹಾರ್ದಿಕ್ ಪಾಂಡ್ಯ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಇದೇ ವೇಳೆ ಮಾತನಾಡಿದ ಸೂರ್ಯ, ಅದೆಲ್ಲವೂ ಊಹಾಪೋಹ ಅಷ್ಟೇ. ನಾವಿಬ್ಬರೂ ಉತ್ತಮ ಗೆಳೆಯರು ಎಂದು ತಿಳಿಸಿದ್ದಾರೆ.

ನನ್ನ ಹಾಗೂ ಅವರ (ಹಾರ್ದಿಕ್ ಪಾಂಡ್ಯ) ಸಂಬಂಧ ನಿಜವಾಗಿಯೂ ಉತ್ತಮವಾಗಿದೆ. ನಾವು ಬಹಳ ಸಮಯದಿಂದ ಒಟ್ಟಿಗೆ ಆಡುತ್ತಿದ್ದೇವೆ. 2018 ರಿಂದ ನಾನು ಮುಂಬೈ ಇಂಡಿಯನ್ಸ್‌ಗೆ ಹಿಂತಿರುಗಿದಾಗ ಮತ್ತು ಇಂದಿನವರೆಗೂ ನಾವಿಬ್ಬರೂ ಫ್ರೆಂಡ್ಸ್ ರೀತಿಯಲ್ಲಿಯೇ ಇದ್ದೀವಿ. ಹೀಗಾಗಿ ಇದೀಗ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಕೇವಲ ವದಂತಿ ಎಂದು ತಿಳಿಸಿದ್ದಾರೆ.

ನಾವು ಮೈದಾನದಲ್ಲಿ ಉತ್ತಮ ಸ್ನೇಹಿತರಾಗಿದ್ದೇವೆ ಮತ್ತು ಭಾರತ ತಂಡದೊಂದಿಗೆ ಇದೇ ರೀತಿ ಮುಂದುವರೆಯಲು ಬಯಸುತ್ತೇವೆ. ಇಲ್ಲಿ ಅಕ್ಷರ್ ಪಟೇಲ್​ಗೆ ಹೆಚ್ಚುವರಿ ಜವಾಬ್ದಾರಿ ನೀಡಿರುವುದು ಅವರ ಆಲ್​ರೌಂಡರ್​ ಪ್ರದರ್ಶನವನ್ನು ಪರಿಗಣಿಸಿ. ಅವರು 2024ರ ಟಿ20 ವಿಶ್ವಕಪ್​ನಲ್ಲಿ ಏನು ಮಾಡಿದ್ದರು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ. ಅಲ್ಲದೆ ಅಕ್ಷರ್ ಬಹಳ ಸಮಯದಿಂದ ತಂಡದಲ್ಲಿದ್ದಾರೆ. ಹೀಗಾಗಿ ವೈಸ್ ಕ್ಯಾಪ್ಟನ್ ಪಟ್ಟ ನೀಡಲಾಗಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದರು.

ಇದೇ ವೇಳೆ ಗೌತಮ್ ಗಂಭೀರ್ ಅವರ ಕೋಚಿಂಗ್​ನಲ್ಲಿ ಆಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ನಾನು ನಾಲ್ಕು ವರ್ಷಗಳಿಂದ ಗಂಭೀರ್ ನಾಯಕತ್ವದಲ್ಲಿ ಆಡಿದ್ದೇನೆ. ಆದ್ದರಿಂದ ಅವರು ಹೇಗೆ ಕೆಲಸ ಮಾಡುತ್ತಾರೆಂದು ನನಗೆ ತಿಳಿದಿದೆ.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಗಂಭೀರ್ ಅವರೊಂದಿಗೆ ಮಾತನಾಡದೆಯೇ, ನಾವು ಏನು ಮಾಡಬೇಕೆಂದು ನಮಗೆ ತಿಳಿದಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿ ವೇಳೆ ಅವರು ತಂಡದ ಜೊತೆ ಇರಲಿಲ್ಲ. ಇದಾಗ್ಯೂ ನಾವು ಉತ್ತಮ ಪ್ರದರ್ಶನ ನೀಡಿರುವುದು ಇದಕ್ಕೆ ಸಾಕ್ಷಿ. ಹೀಗಾಗಿ ಗೌತಮ್ ಗಂಭೀರ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್