AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 7 ಸಿಕ್ಸರ್, 31 ಎಸೆತಗಳಲ್ಲಿ 65 ರನ್! ವಿಂಡೀಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

Suryakumar Yadav: ಈ ಪಂದ್ಯದಲ್ಲಿ ಸೂರ್ಯಕುಮಾರ್ 31 ಎಸೆತಗಳಲ್ಲಿ 65 ರನ್ ಗಳಿಸಿದರು. ಇದು ಟಿ20ಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮುನ್ನ ಅವರ ಉತ್ತಮ ಸ್ಕೋರ್ 62 ರನ್ ಆಗಿತ್ತು.

IND vs WI: 7 ಸಿಕ್ಸರ್, 31 ಎಸೆತಗಳಲ್ಲಿ 65 ರನ್! ವಿಂಡೀಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್
ಸೂರ್ಯ ಕುಮಾರ್
TV9 Web
| Updated By: ಪೃಥ್ವಿಶಂಕರ|

Updated on: Feb 20, 2022 | 9:12 PM

Share

ಭಾರತ ಕ್ರಿಕೆಟ್ ತಂಡ (Indian cricket team)ದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ (Suryakumar Yadav)ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ತೋರಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ (Eden Gardens Stadium)ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್ ಉತ್ತಮ ಅರ್ಧಶತಕ ಗಳಿಸಿದ್ದಾರೆ. ಸೂರ್ಯಕುಮಾರ್ 20ನೇ ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು. ಇದು ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ 31 ಎಸೆತಗಳಲ್ಲಿ 65 ರನ್ ಗಳಿಸಿದರು. ಇದು ಟಿ20ಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮುನ್ನ ಅವರ ಉತ್ತಮ ಸ್ಕೋರ್ 62 ರನ್ ಆಗಿತ್ತು.

ಸೂರ್ಯಕುಮಾರ್ ಅವರ ಈ ಇನ್ನಿಂಗ್ಸ್‌ನಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಬಲಿಷ್ಠ ಸ್ಕೋರ್ ಮಾಡಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಭಾರತ ತಂಡ ಈಗಾಗಲೇ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ವೆಸ್ಟ್ ಇಂಡೀಸ್ ಅನ್ನು ಕ್ಲೀನ್ ಸ್ವೀಪ್ ಮಾಡುವುದು ಅದರ ಪ್ರಯತ್ನವಾಗಿದೆ.

ಸಂಕಷ್ಟದಲ್ಲಿ ತಂಡಕ್ಕೆ ನೆರವು

ಭಾರತ ತಂಡ ಸಂಕಷ್ಟದಲ್ಲಿದ್ದಾಗ ಸೂರ್ಯಕುಮಾರ್ ಬ್ಯಾಟಿಂಗ್​ಗೆ ಇಳಿದಿದ್ದರು. ಇಶಾನ್ ಕಿಶನ್ ಔಟಾದಾಗ ಅವರು ಬ್ಯಾಟಿಂಗ್ ಮಾಡಲು ಬಂದಿದ್ದರು. ಇಶಾನ್ ನಿರ್ಗಮನದ ನಂತರ ರೋಹಿತ್ ಶರ್ಮಾ ಕೂಡ ಬೇಗನೆ ಪೆವಿಲಿಯನ್‌ಗೆ ಮರಳಿದರು. ಭಾರತದ ಸ್ಕೋರ್ 13.5 ಓವರ್​ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 93 ರನ್ ಆಗಿತ್ತು. ಇಲ್ಲಿಂದ ಸೂರ್ಯಕುಮಾರ್ ಎಕ್ಸಲೇಟರ್ ಒತ್ತಿ ವೇಗವಾಗಿ ರನ್ ಗಳಿಸಿದರು. ಅವರು ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಔಟಾದರು. ರೊಮಾರಿಯಾ ಶೆಫರ್ಡ್ ಎಸೆತದಲ್ಲಿ ರೋವ್‌ಮನ್ ಪೊವೆಲ್ ಕ್ಯಾಚ್ ಹಿಡಿದರು. ಕೊನೆಯ ಓವರ್‌ನ ಮೊದಲ, ನಾಲ್ಕು ಮತ್ತು ಐದನೇ ಎಸೆತಗಳಲ್ಲಿ ಸೂರ್ಯಕುಮಾರ್ ಸಿಕ್ಸರ್ ಬಾರಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಏಳು ಸಿಕ್ಸರ್‌ಗಳು ಮತ್ತು ಒಂದು ಬೌಂಡರಿಗಳನ್ನು ಹೊಡೆದರು.

ವೆಂಕಟೇಶ್ ಅಯ್ಯರ್ ಸಾಥ್ ಮತ್ತೊಮ್ಮೆ ಈ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಉತ್ತಮ ಬ್ಯಾಟಿಂಗ್ ಮಾಡಿ ಸೂರ್ಯಕುಮಾರ್​ಗೆ ಬೆಂಬಲ ನೀಡಿದರು. ಇವರಿಬ್ಬರು 37 ಎಸೆತಗಳಲ್ಲಿ 91 ರನ್ ಗಳಿಸಿದರು. ಅಯ್ಯರ್ 19 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 35 ರನ್ ಗಳಿಸಿದರು. ಕೊನೆಯ ಐದು ಓವರ್‌ಗಳಲ್ಲಿ ಈ ಜೋಡಿ ಬಿರುಸಿನ ರೀತಿಯಲ್ಲಿ ರನ್ ಗಳಿಸಿ ಒಟ್ಟು 86 ರನ್ ಗಳಿಸಿತು.

ಇದನ್ನೂ ಓದಿ:AUS vs SL: ಆಸೀಸ್ ವಿರುದ್ಧ ಕೊನೆಗೂ ಗೆದ್ದ ಲಂಕಾ; 1 ವರ್ಷ ನಿಷೇಧಕ್ಕೊಳಗಾಗಿದ್ದವ ಪಂದ್ಯ ಗೆಲ್ಲಿಸಿದ

ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್