Suryakumar Yadav: ವಾಟ್ ಎ ಶಾಟ್: ಸೂರ್ಯನ ಸೂಪರ್ ಶಾಟ್​ಗೆ ಕ್ರಿಕೆಟ್ ಪ್ರೇಮಿಗಳು ಫಿದಾ

Suryakumar Yadav: ಬಿರುಸಿನ ಇನಿಂಗ್ಸ್ ಆಡಿದ ಸೂರ್ಯಕುಮಾರ್ ಯಾದವ್ ಸಿಕ್ಸ್​-ಫೋರ್​ಗಳ ಸುರಿಮಳೆಯೊಂದಿಗೆ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ರನ್​ ವೇಗವನ್ನು ಹೆಚ್ಚಿಸಿ ಸೂರ್ಯ 4 ಸಿಕ್ಸ್ ಹಾಗೂ 8 ಫೋರ್​ಗಳನ್ನು ಬಾರಿಸಿದರು.

Suryakumar Yadav: ವಾಟ್ ಎ ಶಾಟ್: ಸೂರ್ಯನ ಸೂಪರ್ ಶಾಟ್​ಗೆ ಕ್ರಿಕೆಟ್ ಪ್ರೇಮಿಗಳು ಫಿದಾ
Suryakumar Yadav
Follow us
| Updated By: ಝಾಹಿರ್ ಯೂಸುಫ್

Updated on: Aug 03, 2022 | 12:31 PM

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಸ್ಪೋಟಕ ಇನಿಂಗ್ಸ್ ಆಡುವ ಮೂಲಕ ಸೂರ್ಯಕುಮಾರ್ ಯಾದವ್ (Suryakumar Yadav) ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಅದರಲ್ಲೂ ವೇಗಿ ಅಲ್ಝಾರಿ ಜೋಸೆಫ್ ಎಸೆದ ಬೌನ್ಸರ್​ಗೆ ಭರ್ಜರಿ ಪ್ರತ್ಯುತ್ತರ ನೀಡುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದರು. 10ನೇ ಓವರ್ ಬೌಲಿಂಗ್ ಮಾಡಿದ್ದ ಅಲ್ಝಾರಿ ಜೋಸೆಫ್ ಸೂರ್ಯಕುಮಾರ್ ಅವರನ್ನು ಟಾರ್ಗೆಟ್ ಮಾಡಿದ್ದರು. ಏಕೆಂದರೆ ಟೀಮ್ ಇಂಡಿಯಾ ಪರ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ಸೂರ್ಯನ ವಿಕೆಟ್​ ವಿಂಡೀಸ್​ಗೆ ಅತ್ಯಗತ್ಯವಾಗಿತ್ತು. ಅತ್ತ 360 ಡಿಗ್ರಿಯಲ್ಲಿ  ಬ್ಯಾಟ್ ಬೀಸುತ್ತಿದ್ದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ನನ್ನು ಔಟ್ ಮಾಡುವುದು ಸುಲಭವಾಗಿರಲಿಲ್ಲ.

ಮೊದಲ ಐದು ಎಸೆತಗಳನ್ನು ನಿರಾಯಾಸವಾಗಿ ಎದುರಿಸಿದ ಸೂರ್ಯಕುಮಾರ್ ಯಾದವ್​ಗೆ ಅಲ್ಝಾರಿ ಜೋಸೆಫ್ ಕೊನೆಯ ಎಸೆತದಲ್ಲಿ ಬೌನ್ಸರ್ ಎಸೆದರು. ಅತ್ತ ಮುಖದತ್ತ ನೇರವಾಗಿ ಬಂದ ಚೆಂಡನ್ನು ಅದ್ಭುತವಾಗಿ ಎದುರಿಸುವ ಮೂಲಕ ಬೌಂಡರಿ ಬಾರಿಸಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ಅದ್ಭುತ ಶಾಟ್ ನೋಡಿ ಕಾಮೆಂಟ್ರಿ ಪ್ಯಾನೆಲ್​ನಿಂದ ಕೇಳಿಬಂದಿದ್ದು ಒಂದೇ ಉತ್ತರ..ವಾಟ್ ಎ ಶಾಟ್. ಅಷ್ಟೇ ಅಲ್ಲದೆ ಈ ಅದ್ಭುತ ಹೊಡೆತಕ್ಕೆ ಕ್ರಿಕೆಟ್ ಪ್ರೇಮಿಗಳು ಕೂಡ ಫಿದಾ ಆಗಿದ್ದಾರೆ. ಇದೀಗ ಈ ಭರ್ಜರಿ ಹೊಡೆತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 165 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಇನಿಂಗ್ಸ್ ಆರಂಭಿಸಿದ್ದರು. ಆದರೆ 11 ರನ್​ಗಳಿಸಿದ್ದ ವೇಳೆ ಗಾಯಗೊಂಡ ರೋಹಿತ್ ಶರ್ಮಾ ಅರ್ಧದಲ್ಲೇ ಮೈದಾನ ತೊರೆದರು. ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ವಿಂಡೀಸ್ ವೇಗಿಗಳ ಬೆಂಡೆತ್ತಿದ್ದರು. ಮತ್ತೊಂದೆಡೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ (24) ಉತ್ತಮ ಸಾಥ್ ನೀಡಿದರು.

ಬಿರುಸಿನ ಇನಿಂಗ್ಸ್ ಆಡಿದ ಸೂರ್ಯಕುಮಾರ್ ಯಾದವ್ ಸಿಕ್ಸ್​-ಫೋರ್​ಗಳ ಸುರಿಮಳೆಯೊಂದಿಗೆ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ರನ್​ ವೇಗವನ್ನು ಹೆಚ್ಚಿಸಿ ಸೂರ್ಯ 4 ಸಿಕ್ಸ್ ಹಾಗೂ 8 ಫೋರ್​ಗಳನ್ನು ಬಾರಿಸಿದರು. ಅಲ್ಲದೆ ಕೇವಲ 50 ಎಸೆತಗಳಲ್ಲಿ 76 ರನ್​ ಸಿಡಿಸುವ ಮೂಲಕ ತಂಡವನ್ನು ಗುರಿಯತ್ತ ಕೊಂಡೊಯ್ದರು.

14.3 ಓವರ್​ಗಳಲ್ಲಿ ತಂಡದ ಮೊತ್ತ 135 ರನ್ ಆಗಿದ್ದ ವೇಳೆ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಒಪ್ಪಿಸಿ ಹೊರನಡೆದರು. ಆದರೆ ಅದಾಗಲೇ ಟೀಮ್ ಇಂಡಿಯಾ ಒಂಪೂರ್ಣ ಒತ್ತಡದಿಂದ ಪಾರಾಗಿತ್ತು. ಹೀಗಾಗಿ ಅಂತಿಮ ಹಂತದಲ್ಲಿ ರಿಷಭ್ ಪಂತ್ (33) ಹಾಗೂ ದೀಪಕ್ ಹೂಡಾ (10) ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿ 19 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 165 ರನ್​ಗಳ ಗುರಿ ತಲುಪಿಸಿದರು. ಇದರೊಂದಿಗೆ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು. ಇನ್ನು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ