Sign In

By signing in or creating an account, you agree with Associated Broadcasting Company's Terms & Conditions and Privacy Policy.

SuryaKumar Yadav: ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿಯ ನಡುವೆ ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅನುಮಾನ?

Warm-up Match India vs England: ಐಪಿಎಲ್​ನಿಂದಲೂ ಸೂರ್ಯಕುಮಾರ್ ಬ್ಯಾಡ್ ಫಾರ್ಮ್​ನಿಂದ ಟೀಕೆಗಳಿಗೆ ಗುರಿಯಾಗಿದ್ದರು. ಇದನ್ನು ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯದಲ್ಲೂ ಮುಂದುವರೆಸಿದ್ದಾರೆ. ಭಾರತ vs ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತಗಳಲ್ಲಿ 8 ರನ್​ಗೆ ಔಟ್ ಆದರು.

SuryaKumar Yadav: ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿಯ ನಡುವೆ ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅನುಮಾನ?
IND vs ENG T20 World Cup
Follow us
TV9 Web
| Updated By: Vinay Bhat

Updated on: Oct 19, 2021 | 9:29 AM

ಟಿ20 ವಿಶ್ವಕಪ್ 2021 (ICC T20 World Cup) ಅನ್ನು ಭಾರತ ಕ್ರಿಕೆಟ್ ತಂಡ (Inddian Cricket Team) ಅಭ್ಯಾಸ ಪಂದ್ಯವನ್ನಾಡುವ ಮೂಲಕ ಶುರುಮಾಡಿದೆ. ಇಂಗ್ಲೆಂಡ್ (India vs England) ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ಕಂಡಿದ್ದು, ಅಧಿಕೃತ ಆಟಕ್ಕೂ ಮುನ್ನ ಎದುರಾಳಿಗೆ ದೊಡ್ಡ ಸಂದೇಶ ರವಾನಿಸಿದೆ. ಇಶಾನ್ ಕಿಶನ್ (Ishan Kishan) ಹಾಗೂ ಕೆ. ಎಲ್ ರಾಹುಲ್ (KL Rahul)ಸ್ಫೋಟಕ ಬ್ಯಾಟಿಂಗ್​ಗೆ ಕಂಗಾಲಾದ ಆಂಗ್ಲರು ಸೋಲೊಪ್ಪಿಗೊಂಡರು. ಟೀಮ್ ಇಂಡಿಯಾಕ್ಕೆ (Team India) ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿ ಒಂದುಕಡೆಯಾದರೆ, ಮತ್ತೊಂದೆಡೆ ಆತಂಕ ಮನೆಮಾಡಿದೆ. ತಂಡದ ಪ್ರಮುಖ ಬ್ಯಾಟರ್ ಮುಂದಿನ ಪಂದ್ಯಗಳಲ್ಲಿ ಪ್ಲೇಯಿಂಗ್​ನಲ್ಲಿ (India Playing XI) ಕಾಣಿಸಿಕೊಳ್ಳುವುದು ಅನುಮಾನ. ಹೌದು, ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಬಳಿಕ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಇದು ವಿರಾಟ್ ಕೊಹ್ಲಿ (Virat Kohli) ಮತ್ತು ಮ್ಯಾನೇಜ್ಮೆಂಟ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಎರಡನೇ ಚರಣದ ಐಪಿಎಲ್​ನಿಂದಲೂ ಸೂರ್ಯಕುಮಾರ್ ಬ್ಯಾಡ್ ಫಾರ್ಮ್​ನಿಂದ ಟೀಕೆಗಳಿಗೆ ಗುರಿಯಾಗಿದ್ದರು. ಇದನ್ನು ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯದಲ್ಲೂ ಮುಂದುವರೆಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯಾದವ್ 9 ಎಸೆತಗಳಲ್ಲಿ 1 ಬೌಂಡರಿ ಬಾರಿಸಿ 8 ರನ್​ಗೆ ಔಟ್ ಆದರು. ಅನುಭವಿ ಶ್ರೇಯಸ್ ಅಯ್ಯರ್​ರನ್ನು ರಿಸರ್ವ್ ಪ್ಲೇಯರ್ ಆಗಿ ಕೂರಿಸಿ ಸೂರ್ಯಕುಮಾರ್​ಗೆ ಅವಕಾಶ ನೀಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ.

ಸೋಮವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಜಾನಿ ಬೈರ್​ಸ್ಟೋ ಅವರ 49 ರನ್, ಮೊಯೀನ್ ಅಲಿ ಅಜೇಯ 43 ರನ್ ಮತ್ತು ಲ್ಯಾಮ್ ಲಿವಿಂಗ್​ಸ್ಟೋನ್ ಅವರ 30 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿತು. ಭಾರತ ಪರ ಮೊಹಮ್ಮದ್ ಶಮಿ 4 ಓವರ್​ಗೆ 40 ರನ್ ನೀಡಿದ 3 ವಿಕೆಟ್ ಪಡೆದರು. ಜಸ್​ಪ್ರೀತ್ ಬುಮ್ರಾ ಮತ್ತು ರಾಹುಲ್ ಚಹಾರ್ ತಲಾ 1 ವಿಕೆಟ್ ಕಿತ್ತರು.

189 ರನ್​ಗಳ ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿ ಕೆ. ಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಿದರು. ಐಸಿಸಿ ಅಕಾಡೆಮಿ ಗ್ರೌಂಡ್​ನ ಮೂಲೆಮೂಲೆಗೆ ಚೆಂಡನ್ನು ಅಟ್ಟಿದರು. ಮೊದಲ ವಿಕೆಟ್​ಗೆ ಈ ಜೋಡಿ 8.2 ಓವರ್​ನಲ್ಲಿ 82 ರನ್ ಚಚ್ಚಿತು.

ಕೆ. ಎಲ್ ರಾಹುಲ್ ಕೇವಲ 24 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಿಡಿಸಿ 51 ರನ್​ ಬಾರಿಸಿದರೆ, ಕಿಶನ್ 46 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್​ನೊಂದಿಗೆ 70 ರನ್ ಗಳಿಸಿದ್ದಾಗ ನಿವೃತ್ತಿ ಪಡೆದುಕೊಂಡರು. ವಿರಾಟ್ ಕೊಹ್ಲಿ 13 ಎಸೆತಗಳಲ್ಲಿ 11 ರನ್​ಗೆ ಔಟ್ ಆದರೆ, ಸೂರ್ಯಕುಮಾರ್ ಯಾದವ್ 9 ಎಸೆತಗಳಲ್ಲಿ 8 ರನ್​ಗೆ ಸುಸ್ತಾದರು.

ನಂತರ ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಗೂಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂತ್ ಕೇವಲ 14 ಎಸೆತಗಳಲ್ಲಿ 3 ಸಿಕ್ಸರ್, 1 ಬೌಂಡರಿಯೊಂದಿಗತೆ ಅಜೇಯ 29 ಮತ್ತು ಪಾಂಡ್ಯ 12 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ 19 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸಿ ಭರ್ಜರಿ ಗೆಲುವು ಕಂಡಿತು.

ಟೀಮ್ ಇಂಡಿಯಾ ತನ್ನ ಮುಂದಿನ ಅಭ್ಯಾಸ ಪಂದ್ಯವನ್ನು ಇದೇ ಮೈದಾನದಲ್ಲಿ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

Sri Lanka vs Namibia: ಶ್ರೀಲಂಕಾ ಬೌಲರ್​ಗಳ ದಾಳಿಗೆ ನಲುಗಿದ ನಮೀಬಿಯಾ: ಸಿಂಹಳೀಯರಿಂದ ಭರ್ಜರಿ ಆರಂಭ

Curtis Campher: 4 ಬಾಲ್-4 ವಿಕೆಟ್: ಟಿ20 ವಿಶ್ವಕಪ್​ನ ಎರಡನೇ ದಿನವೇ ಸೃಷ್ಟಿಯಾಯಿತು ಐತಿಹಾಸಿಕ ದಾಖಲೆ

(Suryakumar Yadav poor performance continued difficult to get a chance in Team India Playing 11)

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್