AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ನಾವು ಇನ್ನೆಷ್ಟು ರನ್​ಗಳಿಸಬೇಕು ಅಂತ ಕೇಳಿದೆ..!

India vs England: ಭಾರತ ತಂಡವು 7 ರನ್​ಗಳ ಗೆಲುವು ದಾಖಲಿಸಿ ಟಿ20 ವಿಶ್ವಕಪ್​ನ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್​ಗಳಿಸಿದರೆ, ಇಂಗ್ಲೆಂಡ್ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳ ಜಯದೊಂದಿಗೆ ಫೈನಲ್​ ಫೈಟ್​ಗೆ ಅರ್ಹತೆ ಪಡೆದುಕೊಂಡಿದೆ.

Suryakumar Yadav: ನಾವು ಇನ್ನೆಷ್ಟು ರನ್​ಗಳಿಸಬೇಕು ಅಂತ ಕೇಳಿದೆ..!
Suryakumar Yadav
ಝಾಹಿರ್ ಯೂಸುಫ್
|

Updated on: Mar 06, 2026 | 9:17 AM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 20 ಓವರ್​ಗಳಲ್ಲಿ 246 ರನ್​ಗಳಿಸುವ ಮೂಲಕ 7 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡರು.

ಈ ಸೋಲಿನೊಂದಿಗೆ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಿದೆ. ಅತ್ತ ಏಳು ರನ್​ಗಳ ಜಯ ಸಾಧಿಸಿದ ಟೀಮ್ ಇಂಡಿಯಾ ಫೈನಲ್​ಗೇರಿದೆ. ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದೊಂದು ನಂಬಲಾಗದ ಅನುಭವ. ಭಾರತದಲ್ಲಿ ಆಡುವುದು, ಅದ್ಭುತ ತಂಡವನ್ನು ಮುನ್ನಡೆಸುವುದು, ಆ ತಂಡವನ್ನು ಫೈನಲ್​ಗೆ ಕೊಂಡೊಯ್ಯುವುದು ನಿಜಕ್ಕೂ ವಿಶೇಷ ಅನುಭವ. ನಮ್ಮ ತಂಡಕ್ಕೆ ಈ ಪಂದ್ಯ ಎಷ್ಟು ಮುಖ್ಯ ಎಂಬುದು ಚೆನ್ನಾಗಿ ಗೊತ್ತಿತ್ತು. ಅದರಲ್ಲೂ ಸಂಜು ಸ್ಯಾಮ್ಸನ್​ಗೆ ಬ್ಯಾಟಿಂಗ್​ಗೆ ತೆರಳಿದಾಗ ಏನು ಮಾಡಬೇಕೆಂದು ತಿಳಿದಿದ್ದರು.

ವಿಕೆಟ್ ಬಿದ್ದಾಗಲೂ, ಪಿಚ್​ ಬ್ಯಾಟಿಂಗ್​ ಉತ್ತಮವಾಗಿದೆ ಎಂದು ಅವರಿಗೆ ತಿಳಿದಿತ್ತು. ಹೀಗಾಗಿಯೇ ಅವರು ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದರು. ಸಂಜು ಸ್ಯಾಮ್ಸನ್ ಪಾಲಿಗೆ ಇಂದು ವಿಶೇಷ ಇನಿಂಗ್ಸ್ ಆಗಿತ್ತು. ಈ ಇನಿಂಗ್ಸ್ ನೆರವಿನೊಂದಿಗೆ ನಾವು ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಇಷ್ಟೊಂದು ದೊಡ್ಡ ಸ್ಕೋರ್​ಗಳಿಸದರೂ ಇಂಗ್ಲೆಂಡ್ ತಂಡದ ಚೇಸಿಂಗ್ ಪ್ರಯತ್ನ ಮೆಚ್ಚಲೇಬೇಕು. ನಾನು ಇದನ್ನೇ ಹ್ಯಾರಿ ಬ್ರೂಕ್​ಗೆ ಕೇಳಿದೆ, ನಿಮ್ಮ ವಿರುದ್ಧ ಗೆಲ್ಲಲು ನಾವು ಇನ್ನೂ ಎಷ್ಟು ಸ್ಕೋರ್ ಮಾಡಬೇಕು?” ಅಂತ. ಅವರು ಬ್ಯಾಟಿಂಗ್ ಮಾಡಿದ ರೀತಿ ಅದ್ಭುತ. ಅಂತಹದೊಂದು ಚೇಸಿಂಗ್ ಕ್ರೆಡಿಟ್ ಅವರಿಗೆ ಸಲ್ಲಬೇಕು.

ಏಕೆಂದರೆ ಪಂದ್ಯದುದ್ದಕ್ಕೂ ಇಂಗ್ಲೆಂಡ್ ತಂಡ ಮ್ಯಾಚ್​ನಲ್ಲಿದ್ದರು. ಆದರೆ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಇತರ ಬೌಲರ್‌ಗಳು ಪಂದ್ಯದ ದಿಕ್ಕನ್ನು ಬದಲಿಸಿದ ರೀತಿ ನಂಬಲಾಗದದು. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಅವರ ಸಾಮರ್ಥ್ಯ ಮತ್ತು ಅವರು ಕೆಲ ವರ್ಷಗಳಿಂದ ಏನು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಇಂದು ಸಹ ಇಡೀ ಪಂದ್ಯದ ಚಿತ್ರಣ ಬದಲಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದರು.

ಇನ್ನು ನಮ್ಮ ಫೀಲ್ಡಿಂಗ್ ಕೋಚ್ ದಿಲೀಪ್ ಟಿ ಅವರಿಗೂ ನಾವು ಸ್ವಲ್ಪ ಕ್ರೆಡಿಟ್ ನೀಡಬೇಕು. ಅವರು ಅಭ್ಯಾಸ ಅವಧಿಗಳಲ್ಲಿ ಹುಡುಗರೊಂದಿಗೆ ಕೆಲಸ ಮಾಡುತ್ತಿರುವ ರೀತಿ ಆಟಗಾರರನ್ನು ಮತ್ತಷ್ಟು ಸ್ಪರ್ಧಾತ್ಮಕವಾಗಿಸುತ್ತದೆ. ಅದರ ಫಲವಾಗಿ ಟೀಮ್ ಇಂಡಿಯಾ ಫೀಲ್ಡರ್​ಗಳು ಅತ್ಯುತ್ತಮ ಕ್ಯಾಚ್​ಗಳನ್ನು ಹಿಡಿದಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದರು.

ಇದನ್ನೂ ಓದಿ: ಯಾರಿಂದಲೂ ಸಹ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಜೇಕಬ್ ಬೆಥೆಲ್

ಫೈನಲ್​ಗೂ ಮುನ್ನ  ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ. ಇದೀಗ ಇದೇ ಉತ್ಸಾಹದಲ್ಲೇ ಫೈನಲ್​ಗೆ ಹೋಗುತ್ತಿದ್ದೇವೆ. ಭಾರತದಲ್ಲಿ ಆಡುವುದು ಮತ್ತು ಪ್ರಶಸ್ತಿಗಾಗಿ ಸೆಣಸುವುದು ಅದ್ಭುತ ಅನುಭವ. ಹೀಗಾಗಿ ನಾವೆಲ್ಲರೂ ಆ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಉತ್ಸುಕರಾಗಿದ್ದೇವೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

Follow Us
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!