AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಂದ್ಯದ ಮಧ್ಯೆ ಸೂರ್ಯಕುಮಾರ್ ಜೊತೆ ಜಗಳಕ್ಕಿಳಿದ ರಿಜ್ವಾನ್, ಶದಾಬ್: ಮುಂದೇನಾಯ್ತು?

Asia Cup 2022, India vs Pakistan: ಏಷ್ಯಾಕಪ್ 2022 ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೂರ್ಯುಮಾರ್ ಯಾದವ್ ಕ್ರೀಸ್​ನಲ್ಲಿ ಇದ್ದಾಗ ಮೊಹಮ್ಮದ್ ರಿಜ್ವಾನ್ ಹಾಗೂ ಶದಾಬ್ ಇವರನ್ನು ಸ್ಲೆಡ್ಜ್ ಮಾಡಲು ಮುಂದಾದ ಘಟನೆ ನಡೆದಿದೆ.

IND vs PAK: ಪಂದ್ಯದ ಮಧ್ಯೆ ಸೂರ್ಯಕುಮಾರ್ ಜೊತೆ ಜಗಳಕ್ಕಿಳಿದ ರಿಜ್ವಾನ್, ಶದಾಬ್: ಮುಂದೇನಾಯ್ತು?
Suryakumar Yadav IND vs PAK
TV9 Web
| Updated By: Vinay Bhat|

Updated on:Sep 05, 2022 | 11:54 AM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್​ನ (Asia Cup 2022) ಸೂಪರ್ 4 ಹಂತದ ಎರಡನೇ ಪಂದ್ಯ ಅಂದುಕೊಂಡಂತೆ ರಣರೋಚಕವಾಗಿತ್ತು. ಅಂತಿಮ ಹಂತದ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿದ್ದ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ (India vs Pakistan) 5 ವಿಕೆಟ್​ಗಳಿಂದ ಗೆದ್ದು ಬೀಗಿತು. ಏಷ್ಯಾಕಪ್ 2022 ರಲ್ಲಿ ಟೀಮ್ ಇಂಡಿಯಾ ಅನುಭವಿಸಿದ ಮೊದಲ ಸೋಲು ಇದಾಗಿದೆ. ಟಿ20 ಕ್ರಿಕೆಟ್​ನ ಬಲಿಷ್ಠ ತಂಡ ಪಾಕಿಸ್ತಾನಕ್ಕೆ 200 ರನ್​ಗಳ ಟಾರ್ಗೆಟ್ ನೀಡಿದರೂ ಅದು ಕಮ್ಮಿಯೆ. ಇದನ್ನೆ ಗಮನದಲ್ಲಿಟ್ಟುಕೊಂಡು ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ತಂಡಕ್ಕೆ ಸ್ಫೋಟಕ ಆರಂಭವೇನೊ ಒದಗಿಸಿದ್ದರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬಿಟ್ಟರೆ ಮತ್ಯಾವ ಬ್ಯಾಟರ್ ರನ್ ಕಲೆಹಾಕಲಿಲ್ಲ, ಕ್ರೀಸ್​​ನಲ್ಲಿ ನಿಲ್ಲಲಿಲ್ಲ. ಕಳೆದ ಹಾಂಗ್ ಕಾಂಗ್ ವಿರುದ್ಧ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ಕೂಡ ವೈಫಲ್ಯ ಅನುಭವಿಸಿದರು.

ಹಾಂಗ್ ಕಾಂಗ್ ವಿರುದ್ಧ ಕೇವಲ 26 ಎಸೆತಗಳಲ್ಲಿ 68 ರನ್ ಚಚ್ಚಿದ್ದ ಸೂರ್ಯ ಈ ಬಾರಿ 10 ಎಸೆತಗಳಲ್ಲಿ 2 ಫೋರ್ ಬಾರಿಸಿ 13 ರನ್​ಗೆ ಬ್ಯಾಟ್ ಕೆಳಗಿಟ್ಟರು. ಆದರೆ, ಇವರು ಕ್ರೀಸ್​ನಲ್ಲಿ ಇದ್ದಾಗ ಪಾಕಿಸ್ತಾನ ಆಟಗಾರರು ಇವರನ್ನು ಸ್ಲೆಡ್ಜ್ ಮಾಡಲು ಮುಂದಾದ ಘಟನೆ ನಡೆದಿದೆ. ಶದಾಬ್ ಖಾನ್ ಬೌಲಿಂಗ್​ನಲ್ಲಿ ಸೂರ್ಯಕಮಾರ್ ಕಟ್ ಹೊಡೆಯಲು ಪ್ರಯತ್ನಿಸಿದರು. ಆದರೆ, ಚೆಂಡು ಬ್ಯಾಟ್​ಗೆ ತಾಗದೆ ಕೀಪರ್ ಕೈ ಸೇರಿತು. ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ ಔಟೆಂದು ಅಂಪೈರ್​ಗೆ ಮನವಿ ಮಾಡಿದರು.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದ ತಕ್ಷಣ ಸ್ಟೇಡಿಯಂನಲ್ಲಿ ಫ್ಯಾನ್ಸ್ ಏನು ಮಾಡಿದ್ರು ನೋಡಿ
Image
IND vs PAK: ಒಂದು ತಪ್ಪಿನಿಂದ ಸೋಲುಂಡ ಟೀಮ್ ಇಂಡಿಯಾ..!
Image
Virat Kohli: ಹೊಸ ವಿಶ್ವ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ
Image
IND vs PAK: ದಿನೇಶ್ ಕಾರ್ತಿಕ್​ರನ್ನು ತಂಡದಿಂದ ಕೈ ಬಿಡಲು ಇದುವೇ ಕಾರಣ..!

ಚೆಂಡು ಬ್ಯಾಟ್​ನಿಂದ ದೂರ ಇರುವುದು ಸ್ಪಷ್ಟವಾಗಿ ಗೋಚರಿಸದ ಕಾರಣ ಅಂಪೈರ್ ನಾಟೌಟ್ ಎಂದರು. ಈ ಸಂದರ್ಭ ರಿಜ್ವಾನ್ ಅವರು ಸೂರ್ಯಕುಮಾರ್ ಜೊತೆ ಮಾತುಕತೆಗೆ ಇಳಿದಿದ್ದಾರೆ. ಅತ್ತ ಬೌಲರ್ ಶದಾಬ್ ಕೂಡ ರಿಜ್ವಾನ್ ಜೊತೆ ಸೇರಿ ಸೂರ್ಯ ಅವರಿಗೆ ಸ್ಲೆಡ್ಜ್ ಮಾಡಿದ್ದಾರೆ. ಆದರೆ, ಸೂರ್ಯಕುಮಾರ್ ಇದಾವುದಕ್ಕೂ ತಲೆ ಕೆಡಿಸಿಕೊಳ್ಳದೆ ರಿಜ್ವಾನ್ಶದಾಬ್ ಮಾತುಗಳನ್ನು ಕೇಳೇ ಇಲ್ಲವೆಂಬ ರೀತಿಯಲ್ಲಿ ಮುಂದೆ ಸಾಗಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್‌ಗಳನ್ನು ಕಲೆ ಹಾಕಿತು. ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಜೋಡಿ ಮೊದಲ ವಿಕೆಟ್ ನಷ್ಟಕ್ಕೆ 54 ರನ್ ಪೇರಿಸಿದರು. ರೋಹಿತ್ ಹಾಗೂ ಕೆಎಲ್ ರಾಹುಲ್ ತಲಾ 28 ರನ್​​​ಗಳಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ವಿಕೆಟ್​ಗಳು ಉರುಳುತ್ತಿದ್ದಂತೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, ತಾವೆದುರಿಸಿದ 44 ಎಸೆತಗಳಲ್ಲಿ 1 ಸಿಕ್ಸರ್, 4 ಬೌಂಡರಿಯೊಂದಿಗೆ 60 ರನ್‌ ಗಳಿಸಿದರು. ಕೊನೆ ಓವರ್​ನಲ್ಲಿ ರನೌಟ್​ ಬಲೆಗೆ ಬಿದ್ದರು. ಪಾಕಿಸ್ತಾನದ ಪರ ಶದಾಬ್ ಖಾನ್ 2 ವಿಕೆಟ್ ಪಡೆದರೆ, ನಸೀಮ್ ಶಾ, ಮೊಹಮ್ಮದ್, ಹ್ಯಾರಿಸ್ ರೌಫ್ ಹಾಗೂ ನವಾಜ್ ತಲಾ 1 ವಿಕೆಟ್ ಕಿತ್ತರು.

182 ರನ್​ಗಳ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 19.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ನಾಯಕ ಬಾಬರ್ ಅಜಮ್ (14) ಬೇಗನೆ ಔಟಾದರು. ಫಾಖರ್ ಝಮಾನ್ (15) ಕೂಡ ಬೇಗನೆ ನಿರ್ಗಮಿಸಿದರು. ಆದರೆ, ನಂತರ ಜೊತೆಯಾದ ಮೊಹಮ್ಮದ್ ರಿಜ್ವಾನ್ (71 ರನ್, 51 ಎಸೆತ, 6 ಬೌಂಡರಿ,2 ಸಿಕ್ಸರ್) ಹಾಗೂ ಮೊಹಮ್ಮದ್ ನವಾಜ್ (42 ರನ್, 20 ಎಸೆತ) 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿಗೆ ಕಾರಣರಾದರು. ಭಾರತದ ಪರ ಭುವನೇಶ್ವರ್, ರವಿ ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ ಹಾಗೂ ಯುಜ್ವೇಂದ್ರ ಚಹಲ್ ತಲಾ 1 ವಿಕೆಟ್ ಪಡೆದರು.

Published On - 8:49 am, Mon, 5 September 22

ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ