AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಶಸ್ತ್ರಚಿಕಿತ್ಸೆಗೆ ಒಳಗಾದ ಸೂರ್ಯಕುಮಾರ್ ಯಾದವ್

Suryakumar Yadav: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಸೂರ್ಯಕುಮಾರ್ ಯಾದವ್ ಅನಿವಾರ್ಯ. ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಅವರು ಚುಟುಕು ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿರುವ 57 ಇನಿಂಗ್ಸ್​ಗಳಲ್ಲಿ ಸೂರ್ಯ 4 ಶತಕ ಹಾಗೂ 17 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

Suryakumar Yadav: ಶಸ್ತ್ರಚಿಕಿತ್ಸೆಗೆ ಒಳಗಾದ ಸೂರ್ಯಕುಮಾರ್ ಯಾದವ್
Suryakumar Yadav
TV9 Web
| Edited By: |

Updated on: Jan 18, 2024 | 10:47 AM

Share

ಟೀಮ್ ಇಂಡಿಯಾದ (Team India) ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ಅವರು ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮೇಜರ್ ಸರ್ಜರಿ ಮುಗಿಸಿರುವ ಸೂರ್ಯ ನನ್ನ ಬಗ್ಗೆ ಕಾಳಜಿವಹಿಸಿರುವವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿರುವ ಸೂರ್ಯಕುಮಾರ್, ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಿಮ್ಮಲ್ಲೆರ ಕಾಳಜಿ ಮತ್ತು ವಿಶಸ್​ಗೆ ಧನ್ಯವಾದಗಳು. ಶೀಘ್ರದಲ್ಲೇ ನಾನು ಕಂಬ್ಯಾಕ್ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಸೂರ್ಯಕುಮಾರ್ ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಒಂದು ತಿಂಗಳು ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-17 ರ ವೇಳೆಗೆ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಹಾಗೆಯೇ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಸೂರ್ಯ ಹೊರಗುಳಿಯುವ ಸಾಧ್ಯತೆಯನ್ನೂ ಕೂಡ ತಳ್ಳಿ ಹಾಕುವಂತಿಲ್ಲ.

ಏಕೆಂದರೆ ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮೈದಾನಕ್ಕೆ ಮರಳಲು ಬಿಸಿಸಿಐ ಸೂಚಿಸಿದೆ. ಹೀಗಾಗಿ ಐಪಿಎಲ್​ನ ಆರಂಭಿಕ ಕೆಲ ಪಂದ್ಯಗಳಿಂದ ಅವರು ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಅದರಂತೆ ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯುವುದು ಖಚಿತ. ಹಾಗೆಯೇ ಯುಎಸ್​ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ.

ಟೀಮ್ ಇಂಡಿಯಾ ಪಾಲಿಗೆ ಸೂರ್ಯ ಅನಿವಾರ್ಯ:

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಸೂರ್ಯಕುಮಾರ್ ಯಾದವ್ ಅನಿವಾರ್ಯ. ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಅವರು ಚುಟುಕು ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿರುವ 57 ಇನಿಂಗ್ಸ್​ಗಳಲ್ಲಿ ಸೂರ್ಯ 4 ಶತಕ ಹಾಗೂ 17 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ 171.55 ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ 2141 ರನ್ಸ್​ ಕಲೆಹಾಕಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಬಲ ಹೆಚ್ಚಿಸಲು ಟೀಮ್ ಇಂಡಿಯಾಗೆ ಸೂರ್ಯಕುಮಾರ್ ಯಾದವ್ ಅವರ ಕಂಬ್ಯಾಕ್ ಅನಿವಾರ್ಯ ಎನ್ನಬಹುದು.

ಇದನ್ನೂ ಓದಿ: Rohit Sharma: ಧೋನಿ ದಾಖಲೆ ಉಡೀಸ್: ರೋಹಿತ್ ಶರ್ಮಾ ಈಗ ನಂಬರ್ 1 ಕ್ಯಾಪ್ಟನ್

ಟಿ20 ವಿಶ್ವಕಪ್ 2024 ಯಾವಾಗ ಶುರು?

2024 ರ ಟಿ20 ವಿಶ್ವಕಪ್ ಜೂನ್ 1 ರಿಂದ ಆರಂಭವಾಗಲಿದೆ. ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಇನ್ನು ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?