AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 1st T20I: ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ಭಾರೀ ಅವಮಾನ

Suryakumar Yadav Press Conference, India vs Australia 1st T20I: ಒಂದು ಪಂದ್ಯ ಆರಂಭಕ್ಕೂ ಮುನ್ನ ನಾಯಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವುದು ವಾಡಿಕೆ. ಅದರಂತೆ ಸೂರ್ಯಕುಮಾರ್ ಯಾದವ್ ಭಾರತ-ಆಸ್ಟ್ರೇಲಿಯಾ ಮೊದಲ ಟಿ20ಗು ಮುನ್ನ ಬುಧವಾರ ಸಂಜೆ ಸುದ್ದಿಗೋಷ್ಠಿಗೆ ಬಂದಿದ್ದರು. ಆದರೆ, ಇಲ್ಲಿ ಸೂರ್ಯಗೆ ಭಾರೀ ಅವಮಾನವಾಗಿದೆ.

IND vs AUS 1st T20I: ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ಭಾರೀ ಅವಮಾನ
Suryakumar Yadav press conference
Vinay Bhat
|

Updated on: Nov 23, 2023 | 7:42 AM

Share

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ನಲ್ಲಿ ಅನುಭವಿಸಿರುವ ಆಘಾತಕಾರಿ ಸೋಲಿನ ನಡುವೆ ಟೀಮ್ ಇಂಡಿಯಾವು ನವೆಂಬರ್ 23, ಗುರುವಾರದಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20 ಸರಣಿಗೆ ಆಸ್ಟ್ರೇಲಿಯಾವನ್ನು ಆತಿಥ್ಯ ವಹಿಸಲಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂಡೋ-ಆಸೀಸ್ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಇತರ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ, ಸೂರ್ಯಕುಮಾರ್ ಯಾದವ್ (Suryakumar Yadav) ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನ ತಂಡದ ನಾಯಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವುದು ವಾಡಿಕೆ. ಅದರಂತೆ ಸೂರ್ಯ ಬುಧವಾರ ಸಂಜೆ ಸುದ್ದಿಗೋಷ್ಠಿಗೆ ಬಂದಿದ್ದರು. ಆದರೆ, ಇಲ್ಲಿ ಸೂರ್ಯಗೆ ಭಾರೀ ಅವಮಾನವಾಗಿದೆ. ವಿಶಾಖಪಟ್ಟಣಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಪ್ರಥಮ ಟಿ20ಯ ಸುದ್ದಿಗೋಷ್ಠಿಯಲ್ಲಿ ಕೇವಲ ಇಬ್ಬರು ಪತ್ರಕರ್ತರು ಮಾತ್ರ ಮಾಧ್ಯಮ ಸಂವಾದಕ್ಕೆ ಬಂದಿದ್ದರು. ಟೀಮ್ ಇಂಡಿಯಾ ನಾಯಕನಾಗಿ ತಮ್ಮ ಮೊದಲ ಪತ್ರಿಕಾಗೋಷ್ಠಿಯಲ್ಲೇ ಸೂರ್ಯಕುಮಾರ್ ಭಾರೀ ಮುಜುಗರಕ್ಕೆ ಒಳಗಾದರು.

ಇದನ್ನೂ ಓದಿ
Image
ರಿಂಕು ಸಿಂಗ್ ಫಿನಿಶರ್: ಆಸೀಸ್ ವಿರುದ್ಧದ ಮೊದಲ ಟಿ20ಗೆ ಭಾರತ ಪ್ಲೇಯಿಂಗ್ XI
Image
ಇಂದು IND vs AUS ಮೊದಲ ಟಿ20 ಪಂದ್ಯ: ಸೇಡಿಗೆ ಕಾದು ಕುಳಿತಿದೆ ಸೂರ್ಯ ಪಡೆ
Image
ಏಕದಿನ ರ‍್ಯಾಂಕಿಂಗ್ ಅಗ್ರ ನಾಲ್ಕರಲ್ಲಿ ಮೂವರು ಭಾರತೀಯರು..!
Image
ಟಿ20 ಕ್ರಿಕೆಟ್​ನಿಂದ ರೋಹಿತ್ ಭಾಗಶಃ ದೂರ!

ಲಕ್ನೋ ತಂಡವನ್ನು ತೊರೆದು ತಾನು ಚಾಂಪಿಯನ್‌ ಮಾಡಿದ್ದ ತಂಡ ಸೇರಿಕೊಂಡ ಗಂಭೀರ್..!

ಹಿರಿಯ ಕ್ರಿಕೆಟ್ ಪತ್ರಕರ್ತ ವಿಮಲ್ ಕುಮಾರ್ ಅವರು ಈ ಪತ್ರಿಕಾಗೋಷ್ಠಿಯ ಬಗ್ಗೆ ಆಘಾತಕಾರಿ ಮಾಹಿತಿಯನ್ನ ಎಕ್ಸ್ (ಹಿಂದೆ ಟ್ವಿಟ್ಟರ್) ನಲ್ಲಿ ಹಂಚಿಕೊಂಡಿದ್ದಾರೆ. ”ವಿಶ್ವಕಪ್ ಸಮಯದಲ್ಲಿ 200ಕ್ಕೂ ಅಧಿಕ ಮಾಧ್ಯಮಗಳು ಭಾರತದ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದವು. ಆದರೆ, ಇಲ್ಲಿ ಕೇವಲ ಇಬ್ಬರು ಪತ್ರಕರ್ತರು ಮಾತ್ರ ಇದ್ದಾರೆ. ಸೂರ್ಯಕುಮಾರ್ ನಾಯಕನಾಗಿ ಅವರ ಮೊದಲ ಸುದ್ದಿಗೋಷ್ಠಿಯಲ್ಲಿ ಇದನ್ನು ಊಹಿಸಿರಲಿಲ್ಲ. ಇದು ಟೀಮ್ ಇಂಡಿಯಾ ಪತ್ರಿಕಾಗೋಷ್ಠಿಗೆ ಅತಿ ಕಡಿಮೆ ಪತ್ರಕರ್ತರು ಬಂದ ದಾಖಲೆಯೇ?, ಹೌದು ಎನಿಸುತ್ತದೆ,” ಎಂದು ವಿಮಲ್ ಕುಮಾರ್ ಬರೆದಿದ್ದಾರೆ.

ಕ್ರಿಕೆಟ್ ಪತ್ರಕರ್ತ ವಿಮಲ್ ಕುಮಾರ್ ಮಾಡಿರುವ ಟ್ವೀಟ್:

ಪತ್ರಿಗೋಷ್ಠಿಯಲ್ಲಿ ಮಾತನಾಡಿದ ಸೂರ್ಯಕುಮಾರ್ ಯಾದವ್, “ವಿಶ್ವಕಪ್ ಸೋಲು ನಿಜಕ್ಕೂ ಬೇಸರ ತರಿಸಿದೆ. ಕೊನೆಯಲ್ಲಿ, ನೀವು ವಿಶ್ವಕಪ್ ಪಯಣವನ್ನು ಹಿಂತಿರುಗಿ ನೋಡಿದಾಗ, ಅದು ನಿಜವಾಗಿಯೂ ಉತ್ತಮವಾಗಿತ್ತು. ನಾವು ಮೈದಾನದಲ್ಲಿ ನಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ ರೀತಿಗೆ ಪ್ರತಿಯೊಬ್ಬ ಸದಸ್ಯರು, ಆಟಗಾರರು ಮಾತ್ರವಲ್ಲ, ಇಡೀ ಭಾರತವೇ ಹೆಮ್ಮೆಪಡುತ್ತಿದೆ. ಪಂದ್ಯಾವಳಿಯುದ್ದಕ್ಕೂ ನಾವು ಆಡಿದ ರೀತಿ ಚೆನ್ನಾಗಿತ್ತು. ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ,” ಎಂದು ಸೂರ್ಯಕುಮಾರ್ ಹೇಳಿದರು.

“ಫೈನಲ್ ಸೋಲನ್ನು ಮರೆಯಲು ಸಮಯ ತೆಗೆದುಕೊಳ್ಳುತ್ತದೆ. ಮರುದಿನ ಬೆಳಿಗ್ಗೆ ಎದ್ದು ನಡೆದಿರುವುದನ್ನು ಮರೆತುಬಿಡಲು ಸಾಧ್ಯವಿಲ್ಲ. ಅದೊಂದು ಸುದೀರ್ಘ ಟೂರ್ನಿ. ನಿಸ್ಸಂಶಯವಾಗಿ, ನಾವು ಗೆಲ್ಲುತ್ತೇವೆ ಎಂದು ಕಣಕ್ಕಿಳಿಯಿದೆವು. ಆದರೆ, ನಾವು ಅಂದುಕೊಂಡಂತೆ ಸಾಗಲಿಲ್ಲ. ಇದನ್ನು ಮರೆತು ಮುಂದೆ ಸಾಗಬೇಕಿದೆ,” ಎಂದು ಸೂರ್ಯ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ