
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಬದಲಾವಣೆಯೊಂದಿಗೆ 23 ವರ್ಷದ ಯುವ ಆಲ್ರೌಂಡರ್ ಸೂರ್ಯಂಶ್ ಶೆಡ್ಗೆ ಭಾರತ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟೀಮ್ ಇಂಡಿಯಾ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡಿದ್ದು, ಹೀಗಾಗಿ ಅವರು ಮುಂಬರುವ ಸರಣಿಗಳಿಂದ ಹೊರಗುಳಿದಿದ್ದಾರೆ.
ಅಫ್ಘಾನಿಸ್ತಾನ್ ವಿರುದ್ಧದ ಕೊನೆಯ ಏಕದಿನ ಪಂದ್ಯದ ವೇಳೆ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅವರ ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಎಡಗಾಲಿನ ಸ್ನಾಯುವಿನಲ್ಲಿ ತೀವ್ರವಾದ ಊತ ಮತ್ತು ಹಾನಿಯಾಗಿರುವುದು ದೃಢಪಟ್ಟಿದೆ. ಹೀಗಾಗಿ ವೈದ್ಯರು ಕನಿಷ್ಠ ಒಂದು ತಿಂಗಳುಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದಾರೆ.
ಸೂರ್ಯಂಶ್ ಶೆಡ್ಗೆ ವೇಗದ ಬೌಲಿಂಗ್ ಹಾಗೂ ಬ್ಯಾಟಿಂಗ್ ಮಾಡಬಲ್ಲ ಆಟಗಾರ. 23 ವರ್ಷದ ಮುಂಬೈ ಆಲ್ರೌಂಡರ್ ಇತ್ತೀಚಿನ ದೇಶಿ ಹಾಗೂ ಐಪಿಎಲ್ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಿತೀಶ್ ಕುಮಾರ್ ರೆಡ್ಡಿ ಅವರ ಸ್ಥಾನಕ್ಕೆ ಸೂರ್ಯಂಶ್ ಶೆಡ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ಸೂರ್ಯಂಶ್ ಭಾರತ ತಂಡದಲ್ಲಿ ಕಾಣಿಸಿಳ್ಳಲಿದ್ದಾರೆ.
ಇದನ್ನೂ ಓದಿ: ಸಚಿನ್ರ ವಿಶ್ವ ದಾಖಲೆ ಮುರಿಯಲು ರೂಟ್ ಇನ್ನೆಷ್ಟು ರನ್ ಕಲೆಹಾಕಬೇಕು?
Published On - 7:16 am, Wed, 24 June 26