AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾಗೆ ಗುಡ್​ ನ್ಯೂಸ್: ಇಂಗ್ಲೆಡ್​ನತ್ತ ಇಬ್ಬರು ಬ್ಯಾಟ್ಸ್​ಮನ್​ಗಳು

India vs England Test: ಭಾರತ-ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಪ್ರಾರಂಭವಾಗಲಿದೆ. 2ನೇ ಟೆಸ್ಟ್ ಪಂದ್ಯವು ಆಗಸ್ಟ್ 12 ರಿಂದ 16ರವರೆಗೆ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು 25 ರಿಂದ ಪ್ರಾರಂಭವಾಗಲಿದೆ.

Team India: ಟೀಮ್ ಇಂಡಿಯಾಗೆ ಗುಡ್​ ನ್ಯೂಸ್: ಇಂಗ್ಲೆಡ್​ನತ್ತ ಇಬ್ಬರು ಬ್ಯಾಟ್ಸ್​ಮನ್​ಗಳು
Team India t
TV9 Web
| Edited By: |

Updated on:Aug 02, 2021 | 5:25 PM

Share

ಇಂಗ್ಲೆಂಡ್​ ವಿರುದ್ದದ ಟೆಸ್ಟ್​ ಸರಣಿಗಾಗಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಶೀಘ್ರದಲ್ಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈ ಹಿಂದೆ ಶ್ರೀಲಂಕಾ ಪ್ರವಾಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಹಾಗೂ ಪೃಥ್ವಿ ಶಾ ಇಂಗ್ಲೆಂಡ್ ಟೆಸ್ಟ್ ಸರಣಿಗಾಗಿ ಆಯ್ಕೆಯಾಗಿದ್ದರು. ಆದರೆ ಲಂಕಾ ವಿರುದ್ದದ 2ನೇ ಟಿ20 ಪಂದ್ಯದ ವೇಳೆ ಟೀಮ್ ಇಂಡಿಯಾ ಆಲ್​ರೌಂಡರ್ ಕೃನಾಲ್ ಪಾಂಡ್ಯ ಕೊರೋನಾ ಪಾಸಿಟಿವ್ ಆಗಿದ್ದರು. ಇದೇ ವೇಳೆ ಕೃನಾಲ್ ಜೊತೆ ನೇರ ಸಂಪರ್ಕ ಹೊಂದಿದ್ದ ಆಟಗಾರರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು. ಈ ಪಟ್ಟಿಯಲ್ಲಿ ಸೂರ್ಯ ಹಾಗೂ ಪೃಥ್ವಿ ಶಾ ಒಳಗೊಂಡಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ದ ಸರಣಿಗಾಗಿ ಈ ಇಬ್ಬರು ಆಟಗಾರರು ಅಲಭ್ಯರಾಗುವ ಸಾಧ್ಯತೆಯಿತ್ತು.

ಆದರೀಗ ಕೋವಿಡ್​-19 ಟೆಸ್ಟ್​ನಲ್ಲಿ ಈ ಇಬ್ಬರು ಆಟಗಾರರ ರಿಸಲ್ಟ್ ನೆಗೆಟಿವ್ ಬಂದಿದೆ. ಅಲ್ಲದೆ ಮುಂದಿನ 24 ಗಂಟೆಯೊಳಗೆ ಸೂರ್ಯಕುಮಾರ್ ಯಾದವ್ ಹಾಗೂ ಪೃಥ್ವಿ ಶಾ ಶ್ರೀಲಂಕಾದಿಂದಲೇ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಬಹುದು. ಈಗಾಗಲೇ ವೀಸಾ ಕುರಿತಂತೆ ಶ್ರೀಲಂಕಾದ ಇಂಗ್ಲೆಂಡ್ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದು, ಅದರಂತೆ ಸೋಮವಾರ ಅಥವಾ ಮಂಗಳವಾರ ಈ ಇಬ್ಬರು ಕ್ರಿಕೆಟಿಗರು ಇಂಗ್ಲೆಂಡ್​ಗೆ ಪ್ರಯಾಣಿಸಲಿದ್ದಾರೆ.

ಇದಾಗ್ಯೂ ಭಾರತ ಮತ್ತು ಶ್ರೀಲಂಕಾದಿಂದ ಬರುವ ಪ್ರವಾಸಿಗರಿಗೆ ಬ್ರಿಟಿಷ್ ಸರ್ಕಾರ ರೆಡ್ ಅಲರ್ಟ್ ವಿಧಿಸಿದ್ದರಿಂದ ಮೊದಲ ಟೆಸ್ಟ್​ ವೇಳೆ ಶಾ ಮತ್ತು ಯಾದವ್ ತಂಡವನ್ನು ಕೂಡಿಕೊಳ್ಳೋದು ಕಷ್ಟ. ಹೀಗಾಗಿ ಇಂಗ್ಲೆಂಡ್​ನಲ್ಲಿ ಒಂದು ವಾರಗಳ ಕ್ವಾರಂಟೈನ್​ ಬಳಿಕ 2ನೇ ಟೆಸ್ಟ್​ ವೇಳೆ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಭಾರತ-ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಪ್ರಾರಂಭವಾಗಲಿದೆ. 2ನೇ ಟೆಸ್ಟ್ ಪಂದ್ಯವು ಆಗಸ್ಟ್ 12 ರಿಂದ 16ರವರೆಗೆ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು 25 ರಿಂದ ಪ್ರಾರಂಭವಾಗಲಿದ್ದು, 4ನೇ ಟೆಸ್ಟ್​ ಸೆಪ್ಟೆಂಬರ್ 2 ಕ್ಕೆ ಶುರುವಾಗಿ ಸೆ.6 ರವರೆಗೆ ನಡೆಯಲಿದೆ. ಇನ್ನು ಅಂತಿಮ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 10 ರಿಂದ ಸೆ.14ರವರೆಗೆ ಜರುಗಲಿದೆ.

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್

ಹೆಚ್ಚುವರಿ ಆಟಗಾರರು: ಪ್ರಸಿದ್ಧ್ ಕೃಷ್ಣ, ಅರ್ಝಾನ್ ನಾಗ್ವಾಸ್ವಾಲಾ

ಇದನ್ನೂ ಓದಿ: Virat Kohli: ಇಂಗ್ಲೆಂಡ್ ವಿರುದ್ದ ಸಿಡಿಸಿದ್ರೆ ಈ 5 ದಾಖಲೆಗಳು ಕೊಹ್ಲಿ ಪಾಲಾಗುವುದು ಪಕ್ಕಾ

ಇದನ್ನೂ ಓದಿ: IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

ಇದನ್ನೂ ಓದಿ: PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!

Published On - 5:24 pm, Mon, 2 August 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ