AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ದಿಗ್ಗಜ ಬೌಲರ್​ಗಳಿಗೆ ಸಾಧ್ಯವಾಗದ್ದನ್ನು 2ನೇ ಟೆಸ್ಟ್​ನಲ್ಲೇ ಸಾಧಿಸಿದ ಸುತಾರ್

Manav Suthar's 10-Wicket Haul: ಸುತಾರ್, ತಮ್ಮ ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿ ಟೀಂ ಇಂಡಿಯಾಕ್ಕೆ ಗೆಲುವು ತಂದಿತ್ತರು. ಯುವ ಸ್ಪಿನ್ನರ್ ಸುತಾರ್ ಅವರ ಈ ಮಾಂತ್ರಿಕ ಪ್ರದರ್ಶನವು ವಿಶ್ವದ ಅನೇಕ ದಿಗ್ಗಜ ಬೌಲರ್‌ಗಳಾದ ಬುಮ್ರಾ, ಶಮಿ, ಬ್ರೆಟ್ ಲೀ ಅವರಂತಹವರ ಇಡೀ ವೃತ್ತಿಜೀವನದಲ್ಲಿಯೂ ಸಾಧಿಸದ ದಾಖಲೆಯನ್ನು ಸೃಷ್ಟಿಸಿತು. ಕೇವಲ ಎರಡು ಟೆಸ್ಟ್‌ಗಳಲ್ಲಿ 17 ವಿಕೆಟ್ ಪಡೆದು ಸುತಾರ್ ಭರವಸೆ ಮೂಡಿಸಿದ್ದಾರೆ.

IND vs SL: ದಿಗ್ಗಜ ಬೌಲರ್​ಗಳಿಗೆ ಸಾಧ್ಯವಾಗದ್ದನ್ನು 2ನೇ ಟೆಸ್ಟ್​ನಲ್ಲೇ ಸಾಧಿಸಿದ ಸುತಾರ್
Manav Sutar
ಪೃಥ್ವಿಶಂಕರ
|

Updated on: Aug 19, 2026 | 8:33 PM

Share

ಭಾರತ ತಂಡ ಶ್ರೀಲಂಕಾ (India vs Sri Lanka) ಪ್ರವಾಸವನ್ನು ಅದ್ಭುತ ಗೆಲುವಿನೊಂದಿಗೆ ಆರಂಭಿಸಿದೆ. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, ಆತಿಥೇಯ ಶ್ರೀಲಂಕಾವನ್ನು 165 ರನ್‌ಗಳಿಂದ ಸೋಲಿಸಿ, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ತಂಡದ ಯುವ ಎಡಗೈ ಸ್ಪಿನ್ನರ್ ಮಾನವ್ ಸುತಾರ್ (Manav Suthar ) ಟೀಂ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಜಸ್ಪ್ರೀತ್ ಬುಮ್ರಾ ಸೇರಿದಂತೆ ಅತ್ಯಂತ ಅನುಭವಿ ಬೌಲರ್‌ಗಳು ಸಹ ತಮ್ಮ ಇಡೀ ವೃತ್ತಿಜೀವನದಲ್ಲಿ ಸಾಧಿಸಲು ವಿಫಲವಾದ ಸಾಧನೆಯನ್ನು ಮಾನವ್ ಸುತಾರ್ ಕೇವಲ ಎರಡನೇ ಪಂದ್ಯದಲ್ಲೇ ಮಾಡಿದರು.

2ನೇ ಪಂದ್ಯದಲ್ಲಿ 10 ವಿಕೆಟ್‌ಗಳು

ಟೆಸ್ಟ್ ಪಂದ್ಯದ ಕೊನೆಯ ದಿನದಂದು ಟೀಂ ಇಂಡಿಯಾ, ಶ್ರೀಲಂಕಾವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 206 ರನ್‌ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು ಗೆದ್ದು ಬೀಗಿತು. ಯುವ ಸ್ಪಿನ್ನರ್ ಸುತಾರ್ ಎರಡನೇ ಇನ್ನಿಂಗ್ಸ್‌ನಲ್ಲಿ ಶ್ರೀಲಂಕಾವನ್ನು ಅಲ್ಪ ಮೊತ್ತಕ್ಕೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಇನ್ನಿಂಗ್ಸ್‌ನಲ್ಲಿ ಸುತಾರ್ 55 ರನ್‌ಗಳಿಗೆ ಅತ್ಯಧಿಕ ಆರು ವಿಕೆಟ್‌ಗಳನ್ನು ಪಡೆದರು. ಸುತಾರ್ ಇನ್ನಿಂಗ್ಸ್‌ನ ಕೊನೆಯ ನಾಲ್ಕು ವಿಕೆಟ್‌ಗಳನ್ನು ಕೇವಲ 10 ಎಸೆತಗಳಲ್ಲಿ ಪಡೆದಿದ್ದು ಮತ್ತಷ್ಟು ವಿಶೇಷವಾಗಿತ್ತು.

ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿಯೂ ಸುತಾರ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಮೂಲಕ ಸುತಾರ್ ಈ ಪಂದ್ಯದಲ್ಲಿ ಒಟ್ಟು 10ವಿಕೆಟ್​ಗಳನ್ನು ಕಬಳಿಸಿದರು. ಈ ಸಾಧನೆಯೊಂದಿಗೆ, ಸುತಾರ್ ತಮ್ಮ ಎರಡನೇ ಟೆಸ್ಟ್ ಪಂದ್ಯದಲ್ಲಿ ಅನೇಕ ಶ್ರೇಷ್ಠ ಬೌಲರ್‌ಗಳನ್ನು ಹಿಂದಿಕ್ಕಿದರು. ವಿಶ್ವ ಕ್ರಿಕೆಟ್‌ನಲ್ಲಿ ಸಾಕಷ್ಟು ವಿಕೆಟ್‌ಗಳನ್ನು ಪಡೆದ ಅನೇಕ ಶ್ರೇಷ್ಠ ಬೌಲರ್‌ಗಳು ಇದ್ದಾರೆ. ಅವರಲ್ಲಿ ಹಲವರು ಒಂದೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದಾರೆ. ಆದರೆ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಎಂದಿಗೂ 10 ವಿಕೆಟ್‌ಗಳನ್ನು ಪಡೆದಿಲ್ಲ.

ದಿಗ್ಗಜ ಬೌಲರ್​ಗಳೇ ವಿಫಲ

ಭಾರತದ ಲೆಜೆಂಡರಿ ಬೌಲರ್​ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ, ಆಸ್ಟ್ರೇಲಿಯಾದ ಬ್ರೆಟ್ ಲೀ, ಜೋಶ್ ಹೇಜಲ್‌ವುಡ್ ಮತ್ತು ಜೇಸನ್ ಗಿಲ್ಲೆಸ್ಪಿ ಅಥವಾ ಗ್ಯಾರಿ ಸೋಬರ್ಸ್ ಮತ್ತು ಜೋಯಲ್ ಗಾರ್ನರ್‌ರಂತಹ ಮಾರಕ ವೆಸ್ಟ್ ಇಂಡೀಸ್ ಬೌಲರ್‌ಗಳಾಗಲಿ, ಅವರಲ್ಲಿ ಯಾರೂ ತಮ್ಮ ಇಡೀ ವೃತ್ತಿಜೀವನದಲ್ಲಿ ಒಂದು ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ. ಆದರೆ ರಾಜಸ್ಥಾನದ ಸುತಾರ್ ತಮ್ಮ ಎರಡನೇ ಟೆಸ್ಟ್‌ನಲ್ಲಿ ಈ ಸಾಧನೆಯನ್ನು ಮಾಡಿದರು.

IND vs SL: ಐಪಿಎಲ್‌ನಲ್ಲಿ ಆಡಿಸುವ ಆಮಿಷ; ವಿಕೆಟ್ ಕೈಚೆಲ್ಲಿದ ಲಂಕಾ ಬ್ಯಾಟರ್

2 ಟೆಸ್ಟ್‌ಗಳಲ್ಲಿ ಸ್ಮರಣೀಯ ಪ್ರದರ್ಶನ

ಸುತಾರ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದುವರೆಗೆ ಆಡಿರುವ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಒಂದು ಇನ್ನಿಂಗ್ಸ್‌ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಅಫ್ಘಾನಿಸ್ತಾನ ವಿರುದ್ಧದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿಯೂ ಸುತಾರ್ ಒಂದು ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದಿದ್ದರು. ಆ ಪಂದ್ಯದಲ್ಲಿ ಅವರು ಒಟ್ಟು ಏಳು ವಿಕೆಟ್‌ಗಳನ್ನು ಪಡೆದಿದ್ದರು. ಹೀಗಾಗಿ, ಇದುವರೆಗಿನ ತಮ್ಮ ಎರಡು ಟೆಸ್ಟ್ ಪಂದ್ಯಗಳಲ್ಲಿ, ಸುತಾರ್ ಕೇವಲ 11.35 ರ ಸರಾಸರಿಯಲ್ಲಿ 17 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?