AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಸಿಕ್ಸ್, ಕೇವಲ 1 ಫೋರ್: ಸ್ಫೋಟಕ ಸೆಂಚುರಿ ಸಿಡಿಸಿದ RCB ಆಟಗಾರ

Swastik Chikara: ಸ್ವಸ್ತಿಕ ಚಿಕಾರ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಯುವ ಆಟಗಾರನಿಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ದೇಶೀಯ ಅಂಗಳದಲ್ಲಿ ಕಣಕ್ಕಿಳಿದಿರುವ ಸ್ವಸ್ತಿಕ್ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

11 ಸಿಕ್ಸ್, ಕೇವಲ 1 ಫೋರ್: ಸ್ಫೋಟಕ ಸೆಂಚುರಿ ಸಿಡಿಸಿದ RCB ಆಟಗಾರ
Swastik Chikara
ಝಾಹಿರ್ ಯೂಸುಫ್
|

Updated on: Aug 06, 2025 | 11:54 AM

Share

54ನೇ ಅಖಿಲ ಭಾರತ ಎಫ್‌ಸಿಐ ಅಂತರ ವಲಯ ಕ್ರಿಕೆಟ್ ಟೂರ್ನಮೆಂಟ್​ನ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ರೂವಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಸ್ವಸ್ತಿಕ್ ಚಿಕಾರ. ತಮಿಳುನಾಡಿನ ಸೇಲಂನಲ್ಲಿನ ಜಿವಿಎಸ್​ ಕ್ಲಬ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಹಾಗೂ ಪಶ್ಚಿಮ ವಲಯ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಉತ್ತರ ವಲಯ ಪರ ಸ್ವಸ್ತಿಕ್ ಚಿಕಾರ ಹಾಗೂ ನಿತಿನ್ ಸೈನಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು ಮೊದಲ ವಿಕೆಟ್​ಗೆ 145 ರನ್​ಗಳ ಜೊತೆಯಾಟವಾಡಿದರು.

ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ನಿತಿನ್ ಸೈನಿ (55) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಸ್ವಸ್ತಿಕ್ ಚಿಕಾರ ಪಶ್ಚಿಮ ವಲಯ ಬೌಲರ್​ಗಳ ಬೆಂಡೆತ್ತಿದರು. ಈ ಮೂಲಕ ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ 6 ಎಸೆತಗಳನ್ನು ಎದುರಿಸಿದ ಸ್ವಸ್ತಿಕ್ ಚಿಕಾರ ಮತ್ತೆರಡು ಸಿಕ್ಸ್​ ಸಿಡಿಸಿದರು. ಈ ಮೂಲಕ ಕೇವಲ 68 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 114 ರನ್ ಚಚ್ಚಿದರು. ಸ್ವಸ್ತಿಕ್ ಚಿಕಾರ ಅವರ ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಉತ್ತರ ವಲಯ ತಂಡ 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು.

198 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಶ್ಚಿಮ ವಲಯ ತಂಡಕ್ಕೆ ಸಾಹಿಲ್ ಪರಕ್ (46) ಹಾಗೂ  ಓಂಕಾರ್ ಗೌರವ್ (23) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ದಶರತ್ ಚಾವನ್ 29 ಎಸೆತಗಳಲ್ಲಿ 47 ರನ್ ಬಾರಿಸಿದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಪಶ್ಚಿಮ ವಲಯ ತಂಡವು 18.3 ಓವರ್​ಗಳಲ್ಲಿ 160 ರನ್​ಗಳಿಸಿ ಆಲೌಟ್ ಆಯಿತು.

ಇದನ್ನೂ ಓದಿ: ಮೊಹಮ್ಮದ್ ಸಿರಾಜ್​ಗೆ ಬರೋಬ್ಬರಿ 80 ಲಕ್ಷ ರೂ..!

ಈ ಮೂಲಕ ಉತ್ತರ ವಲಯ ತಂಡವು 37 ರನ್​ಗಳ ಭರ್ಜರಿ ಜಯ ಸಾಧಿಸಿ ಅಖಿಲ ಭಾರತ ಎಫ್‌ಸಿಐ ಅಂತರ ವಲಯ ಕ್ರಿಕೆಟ್ ಟೂರ್ನಮೆಂಟ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ ಸ್ವಸ್ತಿಕ್ ಚಿಕಾರ ಆವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ