AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪಂದ್ಯಗಳಿಗೆ ಸುಸ್ತಾದ ಬಿಸಿಸಿಐ; 9 ಫೋರ್, 7 ಸಿಕ್ಸರ್​ ಸಹಿತ ಶತಕ ಸಿಡಿಸಿ ಉತ್ತರ ಕೊಟ್ಟ ಕೆಕೆಆರ್ ಬ್ಯಾಟರ್..!

Nitish Rana: ಕಳೆದ ವರ್ಷ 1 ಏಕದಿನ ಮತ್ತು 2 ಟಿ20 ಸೇರಿದಂತೆ ಟೀಂ ಇಂಡಿಯಾ ಪರ 3 ಪಂದ್ಯಗಳನ್ನಾಡಿದ್ದ ನಿತೀಶ್, ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

3 ಪಂದ್ಯಗಳಿಗೆ ಸುಸ್ತಾದ ಬಿಸಿಸಿಐ; 9 ಫೋರ್, 7 ಸಿಕ್ಸರ್​ ಸಹಿತ ಶತಕ ಸಿಡಿಸಿ ಉತ್ತರ ಕೊಟ್ಟ ಕೆಕೆಆರ್ ಬ್ಯಾಟರ್..!
Nitish Rana
TV9 Web
| Edited By: |

Updated on: Oct 13, 2022 | 12:30 PM

Share

ಟೀಂ ಇಂಡಿಯಾಗೆ ಮರಳಲು ಹಲವು ದಿನಗಳಿಂದ ಕಾಯುತ್ತಿರುವ ಸ್ಫೋಟಕ ಬ್ಯಾಟ್ಸ್‌ಮನ್ ನಿತೀಶ್ ರಾಣಾ (Nitish Rana) ದೇಶೀ ಟೂರ್ನಿಯಲ್ಲಿ ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy) ನಿತೀಶ್ ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ್ದಾರೆ. ದೆಹಲಿ ಪರ ಆಡುತ್ತಿರುವ ನಿತೀಶ್ ಎಲೈಟ್ ಗ್ರೂಪ್ ಬಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕೇವಲ 61 ಎಸೆತಗಳಲ್ಲಿ 9 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡಂತೆ 107 ರನ್ ಸಿಡಿಸಿದರು. ಈ ಮೂಲಕ ಬಿಸಿಸಿಐ ಆಯ್ಕೆ ಮಂಡಳಿಗೆ ತಾನು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲು ಸಿದ್ದ ಎಂಬ ಸಿಗ್ನಲ್ ನೀಡಿದ್ದಾರೆ.

ಕಳೆದ ವರ್ಷ 1 ಏಕದಿನ ಮತ್ತು 2 ಟಿ20 ಸೇರಿದಂತೆ ಟೀಂ ಇಂಡಿಯಾ ಪರ 3 ಪಂದ್ಯಗಳನ್ನಾಡಿದ್ದ ನಿತೀಶ್, ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

ಇನ್ನೂ ಈ ಪಂದ್ಯದ ಕುರಿತು ಮಾತನಾಡುವುದಾದರೆ, ಈ ಪಂದ್ಯದಲ್ಲಿ ಡೆಲ್ಲಿ ಮತ್ತು ಪಂಜಾಬ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕೇವಲ 10 ರನ್‌ಗಳಿಸುವಷ್ಟರಲ್ಲಿ ತನ್ನ ತಂಡದ ಪ್ರಮುಖ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕಿಡಾಗಿತ್ತು.

ರಾಣಾ ಬ್ಯಾಟಿಂಗ್ ಪರಾಕ್ರಮ

ಆರಂಭದಲ್ಲೇ 2 ವಿಕೆಟ್‌ಗಳು ಪತನಗೊಂಡ ಬಳಿಕ ದೃತಿಗೆಡದ ನಾಯಕ ನಿತೀಶ್ ರಾಣಾ ತಮ್ಮ ಎಂದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ತಂಡದ ಸ್ಕೋರ್ ಅನ್ನು 183 ರನ್‌ಗಳಿಗೆ ಕೊಂಡೊಯ್ದರು. ನಾಯಕ ರಾಣಾ ಅವರನ್ನು ಬಲಿಪಶು ಮಾಡುವ ಮೂಲಕ ಸಿದ್ಧಾರ್ಥ್ ಕೌಲ್ ಡೆಲ್ಲಿಗೆ ಮೂರನೇ ಹೊಡೆತ ನೀಡಿದರು. ಇವರ ಬಳಿಕ ತಂಡದ ಇನ್ನಿಂಗ್ಸ್ ನಿಭಾಯಿಸಿದ ಯಶ್ ಧುಲ್ 45 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿ ತಂಡದ ಮೊತ್ತವನ್ನು 191 ರನ್‌ಗಳಿಗೆ ಕೊಂಡೊಯ್ದರು.

3 ವಿಕೆಟ್ ಪಡೆದ ಅಮಿತ್ ಮಿಶ್ರಾ

ಇದೇ ವೇಳೆ ಟೂರ್ನಿಯ ಇನ್ನೊಂದು ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಮಿಂಚಿದ ಅಮಿತ್ ಮಿಶ್ರಾ ತಂಡಕ್ಕೆ 83 ರನ್​ಗಳ ಗೆಲುವು ನೀಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಮಿಶ್ರಾ 10 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದರು. ಮೊದಲು ಬ್ಯಾಟ್ ಮಾಡಿದ ಹರಿಯಾಣ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ತಂಡದ ಪರ ರಾಹುಲ್ ತೆವಾಟಿಯಾ 19 ಎಸೆತಗಳಲ್ಲಿ ಗರಿಷ್ಠ 35 ರನ್ ಗಳಿಸಿದರೆ, ಮೇಘಾಲಯದ ರಾಜೇಶ್ ಬಿಷ್ಣೋಯ್ 12 ರನ್ ನೀಡಿ 4 ವಿಕೆಟ್ ಪಡೆದರು.

ಐಪಿಎಲ್‌ನಲ್ಲಿ ಹರಾಜಾಗಲಿಲ್ಲ

ಗುರಿ ಬೆನ್ನತ್ತಿದ ಮೇಘಾಲಯ ತಂಡ ಮಿಶ್ರಾ ದಾಳಿಗೆ ನಿಲ್ಲಲಾಗದೆ 53 ರನ್‌ಗಳಿಗೆ ಆಲೌಟ್ ಆಯಿತು. ಅದರಲ್ಲೂ ಮೇಘಾಲಯದ ಐವರು ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಐಪಿಎಲ್​ನಲ್ಲಿ ಬಹಳ ವರ್ಷಗಳಿಂದ ದೆಹಲಿ ಪರ ಆಡಿದ್ದ ಅಮಿತ್ ಮಿಶ್ರಾ ಅವರನ್ನು ಕಳೆದ ಬಾರಿಯ ಐಪಿಎಲ್ 2022 ಹರಾಜಿನಲ್ಲಿ ಯಾವುದೇ ಫ್ರಾಂಚೈಸಿಗಳು ಖರೀದಿಸಲು ಆಸಕ್ತಿಯನ್ನು ತೋರಿಸಲಿಲ್ಲ. ಹೀಗಾಗಿ ಮಿಶ್ರಾ ಐಪಿಎಲ್​ನಿಂದ ಹೊರಬರಬೇಕಾಯಿತು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!