AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪಂದ್ಯಗಳಿಗೆ ಸುಸ್ತಾದ ಬಿಸಿಸಿಐ; 9 ಫೋರ್, 7 ಸಿಕ್ಸರ್​ ಸಹಿತ ಶತಕ ಸಿಡಿಸಿ ಉತ್ತರ ಕೊಟ್ಟ ಕೆಕೆಆರ್ ಬ್ಯಾಟರ್..!

Nitish Rana: ಕಳೆದ ವರ್ಷ 1 ಏಕದಿನ ಮತ್ತು 2 ಟಿ20 ಸೇರಿದಂತೆ ಟೀಂ ಇಂಡಿಯಾ ಪರ 3 ಪಂದ್ಯಗಳನ್ನಾಡಿದ್ದ ನಿತೀಶ್, ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

3 ಪಂದ್ಯಗಳಿಗೆ ಸುಸ್ತಾದ ಬಿಸಿಸಿಐ; 9 ಫೋರ್, 7 ಸಿಕ್ಸರ್​ ಸಹಿತ ಶತಕ ಸಿಡಿಸಿ ಉತ್ತರ ಕೊಟ್ಟ ಕೆಕೆಆರ್ ಬ್ಯಾಟರ್..!
Nitish Rana
TV9 Web
| Updated By: ಪೃಥ್ವಿಶಂಕರ|

Updated on: Oct 13, 2022 | 12:30 PM

Share

ಟೀಂ ಇಂಡಿಯಾಗೆ ಮರಳಲು ಹಲವು ದಿನಗಳಿಂದ ಕಾಯುತ್ತಿರುವ ಸ್ಫೋಟಕ ಬ್ಯಾಟ್ಸ್‌ಮನ್ ನಿತೀಶ್ ರಾಣಾ (Nitish Rana) ದೇಶೀ ಟೂರ್ನಿಯಲ್ಲಿ ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy) ನಿತೀಶ್ ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ್ದಾರೆ. ದೆಹಲಿ ಪರ ಆಡುತ್ತಿರುವ ನಿತೀಶ್ ಎಲೈಟ್ ಗ್ರೂಪ್ ಬಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕೇವಲ 61 ಎಸೆತಗಳಲ್ಲಿ 9 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡಂತೆ 107 ರನ್ ಸಿಡಿಸಿದರು. ಈ ಮೂಲಕ ಬಿಸಿಸಿಐ ಆಯ್ಕೆ ಮಂಡಳಿಗೆ ತಾನು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲು ಸಿದ್ದ ಎಂಬ ಸಿಗ್ನಲ್ ನೀಡಿದ್ದಾರೆ.

ಕಳೆದ ವರ್ಷ 1 ಏಕದಿನ ಮತ್ತು 2 ಟಿ20 ಸೇರಿದಂತೆ ಟೀಂ ಇಂಡಿಯಾ ಪರ 3 ಪಂದ್ಯಗಳನ್ನಾಡಿದ್ದ ನಿತೀಶ್, ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

ಇನ್ನೂ ಈ ಪಂದ್ಯದ ಕುರಿತು ಮಾತನಾಡುವುದಾದರೆ, ಈ ಪಂದ್ಯದಲ್ಲಿ ಡೆಲ್ಲಿ ಮತ್ತು ಪಂಜಾಬ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕೇವಲ 10 ರನ್‌ಗಳಿಸುವಷ್ಟರಲ್ಲಿ ತನ್ನ ತಂಡದ ಪ್ರಮುಖ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕಿಡಾಗಿತ್ತು.

ರಾಣಾ ಬ್ಯಾಟಿಂಗ್ ಪರಾಕ್ರಮ

ಆರಂಭದಲ್ಲೇ 2 ವಿಕೆಟ್‌ಗಳು ಪತನಗೊಂಡ ಬಳಿಕ ದೃತಿಗೆಡದ ನಾಯಕ ನಿತೀಶ್ ರಾಣಾ ತಮ್ಮ ಎಂದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ತಂಡದ ಸ್ಕೋರ್ ಅನ್ನು 183 ರನ್‌ಗಳಿಗೆ ಕೊಂಡೊಯ್ದರು. ನಾಯಕ ರಾಣಾ ಅವರನ್ನು ಬಲಿಪಶು ಮಾಡುವ ಮೂಲಕ ಸಿದ್ಧಾರ್ಥ್ ಕೌಲ್ ಡೆಲ್ಲಿಗೆ ಮೂರನೇ ಹೊಡೆತ ನೀಡಿದರು. ಇವರ ಬಳಿಕ ತಂಡದ ಇನ್ನಿಂಗ್ಸ್ ನಿಭಾಯಿಸಿದ ಯಶ್ ಧುಲ್ 45 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿ ತಂಡದ ಮೊತ್ತವನ್ನು 191 ರನ್‌ಗಳಿಗೆ ಕೊಂಡೊಯ್ದರು.

3 ವಿಕೆಟ್ ಪಡೆದ ಅಮಿತ್ ಮಿಶ್ರಾ

ಇದೇ ವೇಳೆ ಟೂರ್ನಿಯ ಇನ್ನೊಂದು ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಮಿಂಚಿದ ಅಮಿತ್ ಮಿಶ್ರಾ ತಂಡಕ್ಕೆ 83 ರನ್​ಗಳ ಗೆಲುವು ನೀಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಮಿಶ್ರಾ 10 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದರು. ಮೊದಲು ಬ್ಯಾಟ್ ಮಾಡಿದ ಹರಿಯಾಣ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ತಂಡದ ಪರ ರಾಹುಲ್ ತೆವಾಟಿಯಾ 19 ಎಸೆತಗಳಲ್ಲಿ ಗರಿಷ್ಠ 35 ರನ್ ಗಳಿಸಿದರೆ, ಮೇಘಾಲಯದ ರಾಜೇಶ್ ಬಿಷ್ಣೋಯ್ 12 ರನ್ ನೀಡಿ 4 ವಿಕೆಟ್ ಪಡೆದರು.

ಐಪಿಎಲ್‌ನಲ್ಲಿ ಹರಾಜಾಗಲಿಲ್ಲ

ಗುರಿ ಬೆನ್ನತ್ತಿದ ಮೇಘಾಲಯ ತಂಡ ಮಿಶ್ರಾ ದಾಳಿಗೆ ನಿಲ್ಲಲಾಗದೆ 53 ರನ್‌ಗಳಿಗೆ ಆಲೌಟ್ ಆಯಿತು. ಅದರಲ್ಲೂ ಮೇಘಾಲಯದ ಐವರು ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಐಪಿಎಲ್​ನಲ್ಲಿ ಬಹಳ ವರ್ಷಗಳಿಂದ ದೆಹಲಿ ಪರ ಆಡಿದ್ದ ಅಮಿತ್ ಮಿಶ್ರಾ ಅವರನ್ನು ಕಳೆದ ಬಾರಿಯ ಐಪಿಎಲ್ 2022 ಹರಾಜಿನಲ್ಲಿ ಯಾವುದೇ ಫ್ರಾಂಚೈಸಿಗಳು ಖರೀದಿಸಲು ಆಸಕ್ತಿಯನ್ನು ತೋರಿಸಲಿಲ್ಲ. ಹೀಗಾಗಿ ಮಿಶ್ರಾ ಐಪಿಎಲ್​ನಿಂದ ಹೊರಬರಬೇಕಾಯಿತು.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?