AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ RCB ಆಟಗಾರನ ಸಿಡಿಲಬ್ಬರ: ಕರ್ನಾಟಕ ತಂಡಕ್ಕೆ ಹೀನಾಯ ಸೋಲು

Syed Mushtaq Ali T20 : 180 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಕರ್ನಾಟಕ ತಂಡ ಈ ಬಾರಿ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದ ದೇವದತ್ ಪಡಿಕ್ಕಲ್ ಈ ಬಾರಿ ಕೇವಲ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಮಾಜಿ RCB ಆಟಗಾರನ ಸಿಡಿಲಬ್ಬರ: ಕರ್ನಾಟಕ ತಂಡಕ್ಕೆ ಹೀನಾಯ ಸೋಲು
Mohammed Azharuddeen
TV9 Web
| Updated By: ಝಾಹಿರ್ ಯೂಸುಫ್|

Updated on: Oct 12, 2022 | 9:10 PM

Share

Syed Mushtaq Ali T20: ಮೊಹಾಲಿಯಲ್ಲಿ ನಡೆದ ಸೈಯದ್ ಮುಷ್ತಾಕ್ ಟೂರ್ನಿಯ ರೌಂಡ್​-2 ನಲ್ಲಿನ 2ನೇ ಪಂದ್ಯದಲ್ಲಿ ಕರ್ನಾಟಕ ತಂಡವು ಕೇರಳ (Karnataka vs Kerala) ವಿರುದ್ಧ ಪರಾಜಯಗೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೇರಳ ತಂಡದ ನಾಯಕ ಸಚಿನ್ ಬೇಬಿ ಬ್ಯಾಟಿಂಗ್ ಆಯ್ಕೆ ಮಾಡಿದ್ದರು. ಆದರೆ ಕೇರಳ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. 9 ಓವರ್​ನಲ್ಲಿ ಕೇವಲ 59 ರನ್ ನೀಡಿದ್ದ ಕರ್ನಾಟಕ ತಂಡದ ಬೌಲರ್​ಗಳು 2 ವಿಕೆಟ್ ಕಬಳಿಸಿ ಮೇಲುಗೈ ಸಾಧಿಸಿದ್ದರು. ಆದರೆ ಅದು ಯುವ ಸ್ಪೋಟಕ ಬ್ಯಾಟ್ಸ್​ಮನ್ ಮೊಹಮ್ಮದ್ ಅಜರುದ್ದೀನ್ (Mohammed Azaruddin) ಕ್ರೀಸ್​ಗೆ ಇಳಿಯುವ ತನಕ ಎಂಬುದು ವಿಶೇಷ. ಐಪಿಎಲ್ 2021 ರಲ್ಲಿ RCB ತಂಡದಲ್ಲಿದ್ದ ಕೇರಳದ ಯುವ ದಾಂಡಿಗ ಅಜರ್ ಕರ್ನಾಟಕ ವಿರುದ್ಧ ಅಕ್ಷರಶಃ ಅಬ್ಬರಿಸಿದರು.

ಕಣಕ್ಕಿಳಿಯುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಅಜರ್ 6 ಭರ್ಜರಿ ಸಿಕ್ಸ್  ಹಾಗೂ 8 ಫೋರ್​ಗಳನ್ನು ಚಚ್ಚಿದರು. ಪರಿಣಾಮ ಮೊದಲಾರ್ಧದಲ್ಲಿ ಮೇಲುಗೈ ಸಾಧಿಸಿದ್ದ ಕರ್ನಾಟಕ ತಂಡದ ಬೌಲರ್​ಗಳು ದ್ವಿತಿಯಾರ್ಧದಲ್ಲಿ ಲಯ ತಪ್ಪಿದರು. ಇದನ್ನೇ ಬಂಡವಾಳ ಮಾಡಿಕೊಂಡ ಅಜರ್ ಕೇವಲ 47 ಎಸೆತಗಳಲ್ಲಿ ಅಜೇಯ 95 ರನ್ ಸಿಡಿಸಿದರು. ಅಷ್ಟೇ ಅಲ್ಲದೆ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇರಳ ತಂಡದ ಮೊತ್ತವನ್ನು 179 ಕ್ಕೆ ತಂದು ನಿಲ್ಲಿಸಿದರು.

180 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಕರ್ನಾಟಕ ತಂಡ ಈ ಬಾರಿ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದ ದೇವದತ್ ಪಡಿಕ್ಕಲ್ ಈ ಬಾರಿ ಕೇವಲ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಮಯಾಂಕ್ ಅಗರ್ವಾಲ್ ಶೂನ್ಯಕ್ಕೆ ನಿರ್ಗಮಿಸಿದರು. ಇದರ ಬೆನ್ನಲ್ಲೇ ಎಲ್​ಆರ್ ಚೇತನ್ ಕೂಡ ಸೊನ್ನೆಯೊಂದಿಗೆ ಹಿಂತಿರುಗಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇನ್ನು ಅನುಭವಿ ಮನೀಷ್ ಪಾಂಡೆ 9 ರನ್​ಗಳಿಸಿದರೆ, ಲವ್​ನೀತ್ ಸಿಸೋಡಿಯಾ 36 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಅತ್ತ ಕರಾರುವಾಕ್ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಕೇರಳ ಬೌಲರ್​ಗಳು 15 ಓವರ್​ ಮುಕ್ತಾಯದ ವೇಳೆಗೆ ಕೇವಲ 77 ರನ್ ನೀಡಿ 7 ವಿಕೆಟ್ ಉರುಳಿಸಿದರು. ಅಂತಿಮವಾಗಿ ಕರ್ನಾಟಕ ತಂಡವು 9 ವಿಕೆಟ್ ನಷ್ಟಕ್ಕೆ 126 ರನ್​ಗಳಿಸುವ ಮೂಲಕ 53 ರನ್​ಗಳಿಂದ ಸೋಲೊಪ್ಪಿಕೊಂಡಿತು. ಕೇರಳ ಪರ ವೈಶಾಖ್ ಚಂದ್ರನ್ 4 ವಿಕೆಟ್ ಕಬಳಿಸುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ತ್ ಪಡಿಕ್ಕಲ್ , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಲವ್​ನೀತ್ ಸಿಸೋಡಿಯಾ, ಜಗದೀಶ ಸುಚಿತ್ , ವಿಜಯ್ ಕುಮಾರ್ ವೈಶಾಕ್ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್, ಎಲ್​ಆರ್ ಚೇತನ್.

ಕೇರಳ ಪ್ಲೇಯಿಂಗ್ 11: ಸಚಿನ್ ಬೇಬಿ (ನಾಯಕ) , ವಿಷ್ಣು ವಿನೋದ್ , ರೋಹನ್ ಕುನ್ನುಮ್ಮಳ್ , ಮೊಹಮ್ಮದ್ ಅಜರುದ್ದೀನ್ , ಕೃಷ್ಣ ಪ್ರಸಾದ್ , ಅಬ್ದುಲ್ ಬಸಿತ್ , ಸಿಜೋಮನ್ ಜೋಸೆಫ್ , ಉನ್ನಿಕೃಷ್ಣನ್, ಬಾಸಿಲ್ ತಂಪಿ , ಕೆಎಂ ಆಸಿಫ್ , ವೈಶಾಕ್ ಚಂದ್ರನ್ , ಸುಧೇಶನ್ ಮಿಧುನ್

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್