AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT T20: ಸರ್ವೀಸಸ್ ವಿರುದ್ಧ ಕರ್ನಾಟಕ ತಂಡಕ್ಕೆ ಭರ್ಜರಿ ಜಯ

Syed Mushtaq Ali T20 Trophy: ಈ ಗೆಲುವಿನೊಂದಿಗೆ ಗ್ರೂಪ್​-ಸಿ ನಲ್ಲಿ ಆಡಿರುವ 6 ಪಂದ್ಯಗಳಲ್ಲಿ ಕರ್ನಾಟಕ ತಂಡವು 5 ಗೆಲುವು ದಾಖಲಿಸಿದಂತಾಗಿದೆ.

SMAT T20: ಸರ್ವೀಸಸ್ ವಿರುದ್ಧ ಕರ್ನಾಟಕ ತಂಡಕ್ಕೆ ಭರ್ಜರಿ ಜಯ
Karnataka team
TV9 Web
| Edited By: |

Updated on: Oct 20, 2022 | 3:09 PM

Share

Syed Mushtaq Ali T20 Trophy: ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಸಿ ಗ್ರೂಪ್​ನ ಪಂದ್ಯದಲ್ಲಿ ಸರ್ವೀಸ್​ ವಿರುದ್ಧ ಕರ್ನಾಟಕ (Karantaka) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಕರ್ನಾಟಕ ತಂಡದ ಬೌಲರ್​ಗಳು ಪವರ್​ಪ್ಲೇನಲ್ಲಿ ಕೇವಲ 33 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಅಮಿತ್ ಪಚ್ಚರ 24 ಎಸೆತಗಳಲ್ಲಿ 35 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಈ ಹಂತದಲ್ಲಿ ದಾಳಿಗಿಳಿದ ಕೃಷ್ಣಪ್ಪ ಗೌತಮ್ ಅಮಿತ್ ಅವರನ್ನು ಎಲ್​ಬಿ ಬಲೆಗೆ ಕೆಡವಿದರು.

ಇನ್ನು ಸರ್ವೀಸಸ್ ತಂಡದ ನಾಯಕ ರಜತ್ ಪಲಿವಾಲ್​ರನ್ನು ಕೇವಲ 7 ರನ್​ಗೆ ಔಟ್ ಮಾಡುವ ಮೂಲಕ ಜಗದೀಶ್ ಸುಚಿತ್ ಕರ್ನಾಟಕ ತಂಡಕ್ಕೆ ಮತ್ತೊಂದು ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ಸರ್ವೀಸ್ ತಂಡದ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಕರ್ನಾಟಕ ಬೌಲರ್​ಗಳು ಬಿಡಲಿಲ್ಲ ಎಂದರೆ ತಪ್ಪಾಗಲಾರದು.

ಏಕೆಂದರೆ ಉತ್ತಮ ಆರಂಭ ಪಡೆದರೂ ಸರ್ವೀಸ್ ತಂಡವು ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕಲೆಹಾಕಿದ್ದು ಕೇವಲ 129 ರನ್​ಗಳು ಮಾತ್ರ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

130 ರನ್​ಗಳ ಟಾರ್ಗೆಟ್ ಪಡೆದ ಕರ್ನಾಟಕ ಪರ ಯುವ ಆರಂಭಿಕ ಆಟಗಾರ ಎಲ್​ಆರ್ ಚೇತನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ 16 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಔಟಾದರೆ, ಮತ್ತೊಂದೆಡೆ ಚೇತನ್ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಂತೆ 52 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 61 ರನ್ ಬಾರಿಸಿದರು.

ಇನ್ನು ಚೇತನ್​ಗೆ ಉತ್ತಮ ಸಾಥ್ ನೀಡಿದ ಮನೀಷ್ ಪಾಂಡೆ ಅಜೇಯ 37 ರನ್ ಬಾರಿಸುವ ಮೂಲಕ 18.1 ಓವರ್​ನಲ್ಲಿ ತಂಡವನ್ನು ಗುರಿಮುಟ್ಟಿಸಿದರು. ಈ ಮೂಲಕ ಕರ್ನಾಟಕ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಗ್ರೂಪ್​-ಸಿ ನಲ್ಲಿ ಆಡಿರುವ 6 ಪಂದ್ಯಗಳಲ್ಲಿ ಕರ್ನಾಟಕ ತಂಡವು 5 ಗೆಲುವು ದಾಖಲಿಸಿದಂತಾಗಿದೆ. ಇನ್ನು ಕರ್ನಾಟಕ ತಂಡವು ಈ ಸಲ ಸೋತಿರುವುದು ಕೇವಲ ಕೇರಳ ವಿರುದ್ಧ ಮಾತ್ರ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಮನೀಷ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಲುವ್ನಿತ್ ಸಿಸೋಡಿಯಾ ( ವಿಕೆಟ್ ಕೀಪರ್ ) , ಜಗದೀಶ ಸುಚಿತ್ , ವಿಜಯ್ ಕುಮಾರ್ ವೈಶಾಕ್ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್ , ಎಲ್​ಆರ್​ ಚೇತನ್, ಶ್ರೇಯಸ್ ಗೋಪಾಲ್

ಸರ್ವೀಸಸ್ ಪ್ಲೇಯಿಂಗ್ 11: ರಾಹುಲ್ ಸಿಂಗ್ , ಅಂಶುಲ್ ಗುಪ್ತಾ , ಅಮಿತ್ ಪಚ್ಚರ , ರಜತ್ ಪಲಿವಾಲ್ (ನಾಯಕ) , ವಿಕಾಸ್ ಹತ್ವಾಲಾ , ದೇವೇಂದ್ರ ಲೋಹ್ಚಾಬ್ ( ವಿಕೆಟ್ ಕೀಪರ್ ) , ಅರ್ಜುನ್ ಶರ್ಮಾ , ಪುಲ್ಕಿತ್ ನಾರಂಗ್ , ದಿವೇಶ್ ಪಠಾನಿಯಾ , ಮೋಹಿತ್ ಕುಮಾರ್ , ನಿತಿನ್ ಯಾದವ್ , ಪಿ ರೇಖಾಡೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ