AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syed Mushtaq Ali Trophy 2021: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್

Syed Mushtaq Ali Trophy 2021: 135 ರನ್​ಗಳ ಸಾಧಾರಣ ಸವಾಲು ಬೆನ್ನತ್ತಿದ ಬೆಂಗಾಲ್ ತಂಡಕ್ಕೆ ಅಭಿಮನ್ಯು ಈಶ್ವರನ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು (51) ಅಜೇಯ ಅರ್ಧಶತಕ ಬಾರಿಸಿ ಮಿಂಚಿದರು.

Syed Mushtaq Ali Trophy 2021: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್
Syed Mushtaq Ali Trophy 2021
TV9 Web
| Edited By: |

Updated on: Nov 09, 2021 | 4:30 PM

Share

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy 2021) ಸತತ ನಾಲ್ಕು ಗೆಲುವು ದಾಖಲಿಸಿ ಅಬ್ಬರಿಸಿದ್ದ ಕರ್ನಾಟಕ ತಂಡಕ್ಕೆ ಸೋಲುಣಿಸುವಲ್ಲಿ ಕೊನೆಗೂ ಬೆಂಗಾಲ್ ತಂಡ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ದ ಗೆದ್ದ ಕರ್ನಾಟಕ, ಆ ಬಳಿಕ ಛತ್ತೀಸ್​ಗಢ್, ಸರ್ವೀಸಸ್ ಹಾಗೂ ಬರೋಡಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು. ಆದರೆ ಐದನೇ ಪಂದ್ಯದಲ್ಲಿ ಬೆಂಗಾಲ್ ವಿರುದ್ದ 7 ವಿಕೆಟ್​ಗಳಿಂದ ಸೋಲನುಭವಿಸುವ ಮೂಲಕ ಕರ್ನಾಟಕ ಲೀಗ್ ಹಂತವನ್ನು ಮುಗಿಸಿದೆ. ಗೌವಾಟಿಯ ನೆಹರು ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮನೀಷ್ ಪಾಂಡೆ ಬ್ಯಾಟಿಂಗ್ ಆಯ್ದುಕೊಂಡರು.

ಆದರೆ ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸಿದಂತೆ ಮಯಾಂಕ್ ಅಗರ್ವಾಲ್ (4) ಹಾಗೂ ದೇವದತ್ ಪಡಿಕ್ಕಲ್ ಆರಂಭದಲ್ಲೇ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಮನೀಷ್ ಪಾಂಡೆ ಹಾಗೂ ಕರುಣ್ ನಾಯರ್ 61 ರನ್​ಗಳ ಉತ್ತಮ ಜೊತೆಯಾಟವಾಡಿದರು. ಅದರಂತೆ ಪಾಂಡೆ 32 ರನ್​ಗಳಿಸಿದರೆ, ಕರುಣ್ ನಾಯರ್ 44 ರನ್​ ಕಲೆಹಾಕಿದರು. ಆದರೆ ಇವರಿಬ್ಬರು ವಿಕೆಟ್ ಒಪ್ಪಿಸುತ್ತಿದ್ದಂತೆ ಮತ್ತೆ ಕರ್ನಾಟಕ ಕುಸಿತಕ್ಕೆ ಒಳಗಾಯಿತು.

ಅನಿರುದ್ಧ್ ಜೋಶಿ (14), ಶರತ್ ಬಿಆರ್​ (10), ವೈಶಾಖ್ (3) ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಕರ್ನಾಟಕ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 134 ರನ್​ಗಳಿಸಲಷ್ಟೇ ಶಕ್ತರಾದರು. ಬೆಂಗಾಲ್ ಪರ ಮುಖೇಶ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರು.

135 ರನ್​ಗಳ ಸಾಧಾರಣ ಸವಾಲು ಬೆನ್ನತ್ತಿದ ಬೆಂಗಾಲ್ ತಂಡಕ್ಕೆ ಅಭಿಮನ್ಯು ಈಶ್ವರನ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು (51) ಅಜೇಯ ಅರ್ಧಶತಕ ಬಾರಿಸಿ ಮಿಂಚಿದರು. ಅಷ್ಟೇ ಅಲ್ಲದೆ 18 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ ತಂಡವನ್ನು 138 ರನ್​ಗೆ ತಲುಪಿಸಿ ಗುರಿ ಮುಟ್ಟಿಸಿದರು. ಈ ಸೋಲಿನ ಹೊರತಾಗಿಯೂ ಕರ್ನಾಟಕ ತಂಡವು ಗ್ರೂಪ್-ಬಿ ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿದ್ದು, ಹೀಗಾಗಿ ಪ್ರೀ ಕ್ವಾರ್ಟರ್ ಫೈನಲ್​ಗೆ ಪ್ರವೇಶಿಸಲಿದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Virat Kohli: ಟೀಮ್ ಇಂಡಿಯಾ ಮುಂದಿನ ನಾಯಕ ಯಾರು? ಸುಳಿವು ನೀಡಿದ ವಿರಾಟ್ ಕೊಹ್ಲಿ

(Syed Mushtaq Ali Trophy 2021: Bengal beat Karnataka)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ