Syed Mushtaq Ali Trophy 2021: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್

Syed Mushtaq Ali Trophy 2021: 135 ರನ್​ಗಳ ಸಾಧಾರಣ ಸವಾಲು ಬೆನ್ನತ್ತಿದ ಬೆಂಗಾಲ್ ತಂಡಕ್ಕೆ ಅಭಿಮನ್ಯು ಈಶ್ವರನ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು (51) ಅಜೇಯ ಅರ್ಧಶತಕ ಬಾರಿಸಿ ಮಿಂಚಿದರು.

Syed Mushtaq Ali Trophy 2021: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್
Syed Mushtaq Ali Trophy 2021
Updated By: ಝಾಹಿರ್ ಯೂಸುಫ್

Updated on: Nov 09, 2021 | 4:30 PM

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy 2021) ಸತತ ನಾಲ್ಕು ಗೆಲುವು ದಾಖಲಿಸಿ ಅಬ್ಬರಿಸಿದ್ದ ಕರ್ನಾಟಕ ತಂಡಕ್ಕೆ ಸೋಲುಣಿಸುವಲ್ಲಿ ಕೊನೆಗೂ ಬೆಂಗಾಲ್ ತಂಡ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ದ ಗೆದ್ದ ಕರ್ನಾಟಕ, ಆ ಬಳಿಕ ಛತ್ತೀಸ್​ಗಢ್, ಸರ್ವೀಸಸ್ ಹಾಗೂ ಬರೋಡಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು. ಆದರೆ ಐದನೇ ಪಂದ್ಯದಲ್ಲಿ ಬೆಂಗಾಲ್ ವಿರುದ್ದ 7 ವಿಕೆಟ್​ಗಳಿಂದ ಸೋಲನುಭವಿಸುವ ಮೂಲಕ ಕರ್ನಾಟಕ ಲೀಗ್ ಹಂತವನ್ನು ಮುಗಿಸಿದೆ. ಗೌವಾಟಿಯ ನೆಹರು ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮನೀಷ್ ಪಾಂಡೆ ಬ್ಯಾಟಿಂಗ್ ಆಯ್ದುಕೊಂಡರು.

ಆದರೆ ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸಿದಂತೆ ಮಯಾಂಕ್ ಅಗರ್ವಾಲ್ (4) ಹಾಗೂ ದೇವದತ್ ಪಡಿಕ್ಕಲ್ ಆರಂಭದಲ್ಲೇ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಮನೀಷ್ ಪಾಂಡೆ ಹಾಗೂ ಕರುಣ್ ನಾಯರ್ 61 ರನ್​ಗಳ ಉತ್ತಮ ಜೊತೆಯಾಟವಾಡಿದರು. ಅದರಂತೆ ಪಾಂಡೆ 32 ರನ್​ಗಳಿಸಿದರೆ, ಕರುಣ್ ನಾಯರ್ 44 ರನ್​ ಕಲೆಹಾಕಿದರು. ಆದರೆ ಇವರಿಬ್ಬರು ವಿಕೆಟ್ ಒಪ್ಪಿಸುತ್ತಿದ್ದಂತೆ ಮತ್ತೆ ಕರ್ನಾಟಕ ಕುಸಿತಕ್ಕೆ ಒಳಗಾಯಿತು.

ಅನಿರುದ್ಧ್ ಜೋಶಿ (14), ಶರತ್ ಬಿಆರ್​ (10), ವೈಶಾಖ್ (3) ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಕರ್ನಾಟಕ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 134 ರನ್​ಗಳಿಸಲಷ್ಟೇ ಶಕ್ತರಾದರು. ಬೆಂಗಾಲ್ ಪರ ಮುಖೇಶ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರು.

135 ರನ್​ಗಳ ಸಾಧಾರಣ ಸವಾಲು ಬೆನ್ನತ್ತಿದ ಬೆಂಗಾಲ್ ತಂಡಕ್ಕೆ ಅಭಿಮನ್ಯು ಈಶ್ವರನ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು (51) ಅಜೇಯ ಅರ್ಧಶತಕ ಬಾರಿಸಿ ಮಿಂಚಿದರು. ಅಷ್ಟೇ ಅಲ್ಲದೆ 18 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ ತಂಡವನ್ನು 138 ರನ್​ಗೆ ತಲುಪಿಸಿ ಗುರಿ ಮುಟ್ಟಿಸಿದರು. ಈ ಸೋಲಿನ ಹೊರತಾಗಿಯೂ ಕರ್ನಾಟಕ ತಂಡವು ಗ್ರೂಪ್-ಬಿ ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿದ್ದು, ಹೀಗಾಗಿ ಪ್ರೀ ಕ್ವಾರ್ಟರ್ ಫೈನಲ್​ಗೆ ಪ್ರವೇಶಿಸಲಿದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Virat Kohli: ಟೀಮ್ ಇಂಡಿಯಾ ಮುಂದಿನ ನಾಯಕ ಯಾರು? ಸುಳಿವು ನೀಡಿದ ವಿರಾಟ್ ಕೊಹ್ಲಿ

(Syed Mushtaq Ali Trophy 2021: Bengal beat Karnataka)