AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syed Mushtaq Ali Trophy 2021: ಕರ್ನಾಟಕಕ್ಕೆ ಹ್ಯಾಟ್ರಿಕ್ ಗೆಲುವು

Syed Mushtaq Ali Trophy 2021 Highlights: ಈ ಸಾಧಾರಣ ಸವಾಲು ಬೆನ್ನತ್ತಿದ ಸರ್ವೀಸಸ್ ತಂಡಕ್ಕೆ ಆರಂಭದಲ್ಲೇ ಆಘಾತ ನೀಡುವಲ್ಲಿ ಕರ್ನಾಟಕ ಬೌಲರುಗಳು ಯಶಸ್ವಿಯಾದರು.

Syed Mushtaq Ali Trophy 2021: ಕರ್ನಾಟಕಕ್ಕೆ ಹ್ಯಾಟ್ರಿಕ್ ಗೆಲುವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 06, 2021 | 5:28 PM

Share

ಒಂದೆಡೆ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಅಬ್ಬರಿಸುತ್ತಿದ್ದರೆ, ಇತ್ತ ದೇಶೀಯ ಟೂರ್ನಿಯಲ್ಲಿ ಕರ್ನಾಟಕ ಜಯದ ನಾಗಾಲೋಟ ಮುಂದುವರೆಸಿದೆ. ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಮುಂಬೈ ಹಾಗೂ ಛತ್ತೀಸ್​ಗಢ್ ತಂಡಗಳಿಗೆ ಸೋಲುಣಿಸಿದ್ದ ಕರ್ನಾಟಕ ಇದೀಗ ಮೂರನೇ ಗೆಲುವು ದಾಖಲಿಸಿದೆ. ಸರ್ವೀಸಸ್ ವಿರುದ್ದದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸರ್ವೀಸಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಇನಿಂಗ್ಸ್​ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆಯಲಿಲ್ಲ. ತಂಡದ ಮೊತ್ತ 17 ಆಗಿದ್ದ ವೇಳೆ 6 ರನ್​ಗಳಿಸಿ ದೇವದತ್ ಪಡಿಕ್ಕಲ್ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮಯಾಂಕ್ ಅಗರ್ವಾಲ್ ಜೊತೆಗೂಡಿದ ನಾಯಕ ಮನೀಷ್ ಪಾಂಡೆ ತಂಡಕ್ಕೆ ಆಸೆಯಾದರು. ಈ ಹಂತದಲ್ಲಿ 28 ರನ್​ಗಳಿಸಿದ ಮಯಾಂಕ್ ಔಟಾಗಿ ನಡೆದರೆ, ಇದರ ಬೆನ್ನಲ್ಲೇ ಕರುಣ್ ನಾಯರ್ (6) ಕೂಡ ವಿಕೆಟ್ ಒಪ್ಪಿಸಿದರು.

ಇನ್ನೊಂದೆಡೆ ಎಚ್ಚರಿಕೆಯ ಆಟವಾಡಿದ ಮನೀಷ್ ಪಾಂಡೆ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಂತಿಮ ಹಂತದಲ್ಲಿ ಅನಿರುದ್ಧ ಜೋಶಿ 23 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 146 ಕ್ಕೆ ತಂದು ನಿಲ್ಲಿಸಿದರು.

ಈ ಸಾಧಾರಣ ಸವಾಲು ಬೆನ್ನತ್ತಿದ ಸರ್ವೀಸಸ್ ತಂಡಕ್ಕೆ ಆರಂಭದಲ್ಲೇ ಆಘಾತ ನೀಡುವಲ್ಲಿ ಕರ್ನಾಟಕ ಬೌಲರುಗಳು ಯಶಸ್ವಿಯಾದರು. ಮೊದಲ ಓವರ್​ನಲ್ಲೇ ವಿಕೆಟ್ ಪಡೆದು ಸುಚಿತ್ ಕರ್ನಾಟಕಕ್ಕೆ ಯಶಸ್ಸು ತಂದುಕೊಟ್ಟರು. ಅಷ್ಟೇ ಅಲ್ಲದೆ ಇಡೀ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿದ ಕರ್ನಾಟಕ ಬೌಲರುಗಳು ಅಂತಿಮವಾಗಿ ಸರ್ವೀಸಸ್ ತಂಡದ ಮೊತ್ತವನ್ನು 8 ವಿಕೆಟ್ ಉರುಳಿಸಿ 109 ರನ್​ಗೆ ನಿಯಂತ್ರಿಸಿದರು. ಇದರೊಂದಿಗೆ ಕರ್ನಾಟಕ 33 ರನ್​ಗಳ ಭರ್ಜರಿ ಜಯ ಸಾಧಿಸಿತು. ಕರ್ನಾಟಕ ಪರ ವಿ.ವೈಶಾಖ್ 3 ವಿಕೆಟ್ ಪಡೆದು ಮಿಂಚಿದರೆ, ದರ್ಶನ್ 2 ವಿಕೆಟ್ ಪಡೆದು ಗಮನ ಸೆಳೆದರು. ಈ ಗೆಲುವಿನೊಂದಿಗೆ ಕರ್ನಾಟಕ ಆಡಿರುವ ಮೊದಲ 3 ಪಂದ್ಯಗಳಲ್ಲೂ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(Syed Mushtaq Ali Trophy 2021: Pandey’s fifty guide Karnataka To win over Services)

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ