AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT T20: ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ, 6.5 ಓವರ್​ನಲ್ಲಿ ಪಂದ್ಯ ಮುಗಿಸಿದ ಕರ್ನಾಟಕ

Syed Mushtaq Ali Trophy 2022: ಅಲ್ಪ ಮೊತ್ತದ ಗುರಿ ಪಡೆದ ಕರ್ನಾಟಕ ತಂಡಕ್ಕೆ ಆರಂಭಿಕ ಆಟಗಾರರಾದ ದೇವದತ್ ಪಡಿಕ್ಕಲ್ (28) ಹಾಗೂ ಮಾಯಾಂಕ್ ಅಗರ್ವಾಲ್ ಬಿರುಸಿನ ಆರಂಭ ಒದಗಿಸಿದರು.

SMAT T20: ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ, 6.5 ಓವರ್​ನಲ್ಲಿ ಪಂದ್ಯ ಮುಗಿಸಿದ ಕರ್ನಾಟಕ
karnataka team
TV9 Web
| Edited By: |

Updated on: Oct 18, 2022 | 5:09 PM

Share

Syed Mushtaq Ali Trophy 2022: ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಅರುಣಾಚಲ ಪ್ರದೇಶ ವಿರುದ್ಧ ಕರ್ನಾಟಕ (Arunachal Pradesh vs Karnataka) ತಂಡವು ಭರ್ಜರಿ ಜಯ ಸಾಧಿಸಿದೆ. ಮೊಹಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal)  ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು. ಈ ನಿರ್ಧಾರವನ್ನು ಸಮರ್ಥಿಸುವಂತೆ ಕರ್ನಾಟಕ ಬೌಲರ್​ಗಳು ಅತ್ಯುತ್ತಮ ಪ್ರದರ್ಶನವನ್ನೇ ನೀಡಿದರು.

ಮೊದಲು ಬ್ಯಾಟ್ ಮಾಡಿದ ಅರುಣಾಚಲ ಪ್ರದೇಶ ತಂಡ 14 ರನ್​ಗಳಿಸುವಷ್ಟರಲ್ಲಿ ಆರಂಭಿಕರನ್ನು ಔಟ್ ಮಾಡುವ ಮೂಲಕ ವಿಧ್ವತ್ ಕಾವೇರಪ್ಪ ಹಾಗೂ ವಿ ಕೌಶಿಕ್ ಕರ್ನಾಟಕ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ಆ ಬಳಿಕ ಬಂದ ರೋಹನ್ ಶರ್ಮಾ 18 ರನ್​ಗಳಿಸಿದರೂ ವಿಜಯ್​ಕುಮಾರ್ ವೈಶಾಖ್ ಎಸೆತಕ್ಕೆ ವಿಕೆಟ್ ಒಪ್ಪಿಸಲೇಬೇಕಾಯಿತು.

ಮತ್ತೊಂದೆಡೆ ಕೃಷ್ಣಪ್ಪ ಗೌತಮ್ ಅರುಣಾಚಲ ತಂಡದ ನಾಯಕ ಸೂರಜ್ (11) ವಿಕೆಟ್ ಪಡೆಯುವ ಮೂಲಕ ಮತ್ತೊಂದು ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ತೆಚಿ ನೇರಿಯನ್ನು ಜಗದೀಶ್ ಸುಚಿತ್ ಕ್ಲೀನ್ ಬೌಲ್ಡ್ ಮಾಡಿದರು. ಈ ಹಂತದಲ್ಲಿ ಮತ್ತೆ ದಾಳಿಗಿಳಿದ ವಿದ್ವತ್ ಕಾವೇರಪ್ಪ ಬ್ಯಾಕ್ ಟು ಬ್ಯಾಕ್ ಎರಡು ವಿಕೆಟ್ ಉರುಳಿಸಿದರು. ಅಂತಿಮವಾಗಿ ಅರುಣಾಚಲ ಪ್ರದೇಶ ತಂಡವು 19.2 ಓವರ್​ಗಳಲ್ಲಿ 75 ರನ್​ಗಳಿಗೆ ಆಲೌಟ್ ಆಯಿತು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಕರ್ನಾಟಕ ಪರ ಮಿಂಚಿನ ದಾಳಿ ಸಂಘಟಿಸಿದ ವಿಧ್ವತ್ ಕಾವೇರಪ್ಪ 4 ಓವರ್​ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರೆ, ವಿ ಕೌಶಿಕ್ 3.5 ಓವರ್​ಗಳಲ್ಲಿ ಕೇವಲ 5 ರನ್​ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು ಅಲ್ಪ ಮೊತ್ತದ ಗುರಿ ಪಡೆದ ಕರ್ನಾಟಕ ತಂಡಕ್ಕೆ ಆರಂಭಿಕ ಆಟಗಾರರಾದ ದೇವದತ್ ಪಡಿಕ್ಕಲ್ (28) ಹಾಗೂ ಮಾಯಾಂಕ್ ಅಗರ್ವಾಲ್ ಬಿರುಸಿನ ಆರಂಭ ಒದಗಿಸಿದರು. ಅದರಲ್ಲೂ ಅಗರ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೇವಲ 21 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ ಅಜೇಯ 47 ರನ್​ ಚಚ್ಚಿದರು. ಪರಿಣಾಮ ಕರ್ನಾಟಕ ತಂಡವು ಕೇವಲ 6.5 ಓವರ್​ಗಳಲ್ಲಿ 76 ರನ್​ ಬಾರಿಸುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಅರುಣಾಚಲ ಪ್ರದೇಶ ಪ್ಲೇಯಿಂಗ್ 11: ಸೂರಜ್ ತಯಾಮ್ (ನಾಯಕ) , ಟೆಚಿ ಡೋರಿಯಾ , ನೀಲಂ ಓಬಿ , ಕಮ್ಶಾ ಯಾಂಗ್‌ಫೊ , ರೋಹನ್ ಶರ್ಮಾ , ಟೆಚಿ ನೇರಿ , ಮೋಹಿತ್ ಪನ್ವರ್ , ಮೈನ್ಡುಂಗ್ ಸಿಂಗ್ಪೋ , ತನ್ಮಯ್ ಗುಪ್ತಾ , ಅಖಿಲೇಶ್ ಸಹಾನಿ , ನಬಮ್ ಟೆಂಪೋಲ್

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ತ್ ಪಡಿಕ್ಕಲ್ , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಲುವ್ನಿತ್ ಸಿಸೋಡಿಯಾ , ಜಗದೀಶ ಸುಚಿತ್ , ವಿಜಯ್ ಕುಮಾರ್ ವೈಶಾಕ್ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್

Follow Us
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು
ವಿಜಯ್ ಪ್ರಮಾಣವಚನ ಸಮಾರಂಭಕ್ಕೆ ಬಂದು ಮೊದಲ ಸಾಲಿನಲ್ಲೇ ಕುಳಿತ ತ್ರಿಶಾ
ವಿಜಯ್ ಪ್ರಮಾಣವಚನ ಸಮಾರಂಭಕ್ಕೆ ಬಂದು ಮೊದಲ ಸಾಲಿನಲ್ಲೇ ಕುಳಿತ ತ್ರಿಶಾ
ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ!
ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ!
ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್
ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್
Live: ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ
Live: ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ
Live: ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ ನೇರಪ್ರಸಾರ
Live: ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ ನೇರಪ್ರಸಾರ
ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ
ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ