AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syed Mushtaq Ali Trophy: ನಿರ್ಣಾಯಕ ಪಂದ್ಯಕ್ಕೆ ಕರ್ನಾಟಕ ತಂಡದ ನಾಲ್ವರು ಅಲಭ್ಯ

Syed Mushtaq Ali Trophy 2021 Schedule: ನವೆಂಬರ್ 20 ರಂದು ಎರಡು ಸೆಮಿಫೈನಲ್ಸ್​ ನಡೆಯಲಿದ್ದು, ಫೈನಲ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನವೆಂಬರ್ 22 ರಂದು ಜರುಗಲಿದೆ.

Syed Mushtaq Ali Trophy: ನಿರ್ಣಾಯಕ ಪಂದ್ಯಕ್ಕೆ ಕರ್ನಾಟಕ ತಂಡದ ನಾಲ್ವರು ಅಲಭ್ಯ
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on:Nov 13, 2021 | 6:29 PM

Share

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ದವಾಗಿದೆ. ಮಂಗಳವಾರ ನಡೆಯಲಿರುವ ಪ್ರೀ ಕ್ವಾರ್ಟರ್​ನ 3ನೇ ಪಂದ್ಯದಲ್ಲಿ ಕರ್ನಾಟಕ ಹಾಗೂ ಸೌರಾಷ್ಟ್ರ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಕರ್ನಾಟಕ ತಂಡದ ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ. ಅದರಂತೆ ನಿರ್ಣಾಯಕ ಪಂದ್ಯದಲ್ಲಿ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯುವುದಿಲ್ಲ. ಮಯಾಂಕ್ ಅಗರ್ವಾಲ್ ಹಾಗೂ ಪ್ರಸಿದ್ಧ್ ಕೃಷ್ಣ ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಇನ್ನು ಕೃಷ್ಣಪ್ಪ ಗೌತಮ್ ಹಾಗೂ ದೇವದತ್ ಪಡಿಕ್ಕಲ್ ಭಾರತ ಎ ತಂಡದ ಭಾಗವಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತೆರಳಬೇಕಿದೆ. ಹೀಗಾಗಿ ಈ ನಾಲ್ವರು ಆಟಗಾರರು ಪ್ರೀ ಕ್ವಾರ್ಟರ್ ಫೈನಲ್​ಗೆ ಅಲಭ್ಯರಾಗಲಿದ್ದಾರೆ. ಈ ನಾಲ್ವರು ಆಟಗಾರರು ಮನೀಷ್ ಪಾಂಡೆ ಮುನ್ನಡೆಸುತ್ತಿರುವ ಕರ್ನಾಟಕ ತಂಡದ ಪ್ಲೇಯಿಂಗ್ ಇಲೆವೆನ್​​ನ ಭಾಗವಾಗಿದ್ದರು ಎಂಬುದು ಇಲ್ಲಿ ವಿಶೇಷ. ಹೀಗಾಗಿ ಸೌರಾಷ್ಟ್ರ ವಿರುದ್ದದ ಪಂದ್ಯದಲ್ಲಿ ಕರ್ನಾಟಕ ತಂಡವು ನಾಲ್ವರು ಬದಲಿ ಆಟಗಾರರನ್ನು ಕಣಕ್ಕಿಳಿಸಬೇಕಿದೆ.

ಸದ್ಯ ನಾಲ್ವರು ಬದಲಿ ಆಟಗಾರರನ್ನು ಕರ್ನಾಟಕ ತಂಡ ಘೋಷಿಸಿದ್ದು, ಅದರಂತೆ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್, ಮಧ್ಯಮ ವೇಗಿ ವಿ ಕೌಶಿಕ್ ಹಾಗೂ ಸ್ಪಿನ್ನರ್​ಗಳಾದ ರಿತೇಶ್ ಭಟ್ಕಳ್ ಹಾಗೂ ಆದಿತ್ಯ ಸೋಮಣ್ಣ ತಂಡವನ್ನು ಸೇರಲಿದ್ದಾರೆ.

ಕರ್ನಾಕಟ ತಂಡ ಹೀಗಿದೆ:

1. ಮನೀಷ್ ಪಾಂಡೆ (ನಾಯಕ), 2. ರವಿಕುಮಾರ್ ಸಮರ್ಥ್, 3. ಕರುಣ್ ನಾಯರ್, 4. ಸಿದ್ಧಾರ್ಥ್ ಕೆ.ವಿ. 5. ರೋಹನ್ ಕದಮ್, 6. ಅಭಿನವ್ ಮನೋಹರ್, 7. ಶ್ರೇಯಸ್ ಗೋಪಾಲ್, 8. ಪ್ರವೀಣ್ ದುಬೆ, 9. ಆದಿತ್ಯ ಸೋಮಣ್ಣ, 10. ಜಗದೀಶ ಸುಚಿತ್, 11. ಶರತ್ ಬಿ.ಆರ್​ (ವಿಕೆಟ್ ಕೀಪರ್), 12. ನಿಹಾಲ್ ಉಳ್ಳಾಲ್ (ವಿಕೆಟ್ ಕೀಪರ್), 13. ವೈಶಾಕ್ ವಿಜಯಕುಮಾರ್, 14. ದರ್ಶನ್ ಎಂ.ಬಿ, 15. ಪ್ರತೀಕ್ ಜೈನ್, 16. ಕಾರ್ಯಪ್ಪ ಕೆಸಿ, 17. ಕೌಶಿಕ್ ವಿ, 18. ಅನಿರುಧ್ ಜೋಶಿ, 19. ವಿದ್ಯಾಧರ್ ಪಾಟೀಲ್, 20. ರಿತೇಶ್ ಭಟ್ಕಳ್.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ವೇಳಾಪಟ್ಟಿ ಹೀಗಿದೆ:

ಪ್ರೀ ಕ್ವಾರ್ಟರ್ ಫೈನಲ್ ನವೆಂಬರ್ 16 (ಮಂಗಳವಾರ)- ಮಹಾರಾಷ್ಟ್ರ vs ವಿದರ್ಭ (8:30AM ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ) ಹಿಮಾಚಲ ಪ್ರದೇಶ vs ಕೇರಳ (12:00PM ಪಾಲಂ ಎ ಸ್ಟೇಡಿಯಂ, ದೆಹಲಿ) ಕರ್ನಾಟಕ vs ಸೌರಾಷ್ಟ್ರ (1:00PM ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

ಕ್ವಾರ್ಟರ್ ಫೈನಲ್ ನವೆಂಬರ್ 18 (ಗುರುವಾರ) 1 ನೇ ಕ್ವಾರ್ಟರ್ ಫೈನಲ್ ತಮಿಳುನಾಡು vs (ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಗೆಲ್ಲುವ ತಂಡ) (8:30AM ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ) 2ನೇ ಕ್ವಾರ್ಟರ್ ಫೈನಲ್ ರಾಜಸ್ಥಾನ vs (ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಗೆಲ್ಲುವ ತಂಡ) (8:30AM ಪಾಲಂ ಎ ಸ್ಟೇಡಿಯಂ, ದೆಹಲಿ) 3ನೇ ಕ್ವಾರ್ಟರ್ ಫೈನಲ್ ಬೆಂಗಾಲ್ ವಿರುದ್ಧ ((ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಗೆಲ್ಲುವ ತಂಡ) (1:00PM ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ) 4ನೇ ಕ್ವಾರ್ಟರ್ ಫೈನಲ್ ಗುಜರಾತ್ vs ಹೈದರಾಬಾದ್ (1:00PM ಪಾಲಂ ಎ ಸ್ಟೇಡಿಯಂ, ದೆಹಲಿ)

ನವೆಂಬರ್ 20 ರಂದು ಎರಡು ಸೆಮಿಫೈನಲ್ಸ್​ ನಡೆಯಲಿದ್ದು, ಫೈನಲ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನವೆಂಬರ್ 22 ರಂದು ಜರುಗಲಿದೆ.

ಇದನ್ನೂ ಓದಿ: Explained: ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮತ್ತೊಂದು ಭಾರತ-ಪಾಕಿಸ್ತಾನ್…ಆದರೆ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

(Syed Mushtaq Ali Trophy: Karnataka to miss out in Padikkal,Agarwal)

Published On - 6:28 pm, Sat, 13 November 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ