AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಪಾಕ್ ಗೆಲುವಿನ ಸಂಭ್ರಮದಲ್ಲಿ ಗುಂಡಿನ ಸುರಿಮಳೆ

India vs Pakistan: ಪಾಕಿಸ್ತಾನದ ಈ ಐತಿಹಾಸಿಕ ಗೆಲುವಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಬಾಬರ್ ಆಜಂ ಬಳಗವನ್ನು ಅಭಿನಂದಿಸಿದ್ದಾರೆ. ಒಟ್ಟಿನಲ್ಲಿ ಮಿತಿ ಮೀರಿದ ಸಂಭ್ರಮದಿಂದಾಗಿ 12 ಮಂದಿ ಆಸ್ಪತ್ರೆ ಸೇರುವಂತಾಗಿದೆ.

T20 World Cup: ಪಾಕ್ ಗೆಲುವಿನ ಸಂಭ್ರಮದಲ್ಲಿ ಗುಂಡಿನ ಸುರಿಮಳೆ
Pakistan fan celebration
TV9 Web
| Updated By: ಝಾಹಿರ್ ಯೂಸುಫ್|

Updated on: Oct 25, 2021 | 4:36 PM

Share

ಟೀಮ್ ಇಂಡಿಯಾ (Team India) ವಿರುದ್ದ ಪಾಕ್ ತಂಡವು ಐತಿಹಾಸಿಕ ಗೆಲುವು ದಾಖಲಿಸಿದ ಬೆನ್ನಲ್ಲೇ ಅತ್ತ ಪಾಕಿಸ್ತಾನದಲ್ಲಿ ಸಂಭ್ರಮ ಮನೆಮಾಡಿತ್ತು. ಪಾಕ್​ನ ಪ್ರಮುಖ ನಗರಗಳಾದ ಇಸ್ಲಾಮಾಬಾದ್, ಕರಾಚಿ, ರಾವಲ್ಪಿಂಡಿ ಮತ್ತು ಕ್ವೆಟ್ಟಾ ನಗರಗಳಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಅಷ್ಟೇ ಅಲ್ಲದೆ ಪಟಾಕಿ-ಸಿಡಿಮದ್ದುಗಳನ್ನು ಸಿಡಿಸಿ ಪಾಕ್ ಕ್ರಿಕೆಟ್ ಪ್ರೇಮಿಗಳು ಕುಣಿದು ಕುಪ್ಪಿಳಿಸಿದರು. ಇನ್ನೊಂದೆಡೆ ಕರಾಚಿಯಲ್ಲಿ ಗೆಲುವಿನ ಸಂಭ್ರಮ ಅತಿರೇಕ್ಕೆ ಹೋಗಿ 12 ಮಂದಿ ಆಸ್ಪತ್ರೆ ಸೇರಿದ್ದಾರೆ.

ಹೌದು, ಟೀಮ್ ಇಂಡಿಯಾ ವಿರುದ್ದ ಪಾಕ್ ಗೆಲ್ಲುತ್ತಿದ್ದಂತೆ ಕರಾಚಿಯ ಒರಂಗಿ ಟೌನ್​ ಬೀದಿಯಲ್ಲಿ ಜನ ಸಮೂಹ ಸೇರಿತ್ತು. ಈ ಸಂಭ್ರಮಕ್ಕೆ ಕಿಚ್ಚು ಹಚ್ಚಲೆಂದು ಬಂದ ಯುವಕರ ಗುಂಪೊಂದು ಬಂದೂಕು ಮೂಲಕ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅತಿರೇಕಕ್ಕೆ ಹೋದ ಸಂಭ್ರಮದಿಂದಾಗಿ ಸ್ಥಳದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ 12 ಮಂದಿ ಅಪರಿಚಿತರ ಗುಂಡಿನ ದಾಳಿಯಲ್ಲಿ ಗಾಯಗೊಂಡರು. ಇದೀಗ ಗೆಲುವನ್ನು ಸಂಭ್ರಮಿಸಲು ಬೀದಿಗಿಳಿದಿದ್ದ ಜನರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದು, ಇವರಲ್ಲಿ ಬಂದೂಕಿನೊಂದಿಗೆ ಬಂದ ವ್ಯಕ್ತಿಗಾಗಿ ಬಲೆಬೀಸಿದ್ದಾರೆ.

ಈ ಘಟನೆಯ ಹೊರತಾಗಿ, ಪಾಕಿಸ್ತಾನಿಗಳು ಬೀದಿಗಳಲ್ಲಿ ನೃತ್ಯ ಮತ್ತು ಹಾಡುಗಳನ್ನು ಹಾಡುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಾಕಿಸ್ತಾನದ ಈ ಐತಿಹಾಸಿಕ ಗೆಲುವಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಾಬರ್ ಆಜಂ ಬಳಗವನ್ನು ಅಭಿನಂದಿಸಿದ್ದಾರೆ. ಒಟ್ಟಿನಲ್ಲಿ ಮಿತಿ ಮೀರಿದ ಸಂಭ್ರಮದಿಂದಾಗಿ 12 ಮಂದಿ ಆಸ್ಪತ್ರೆ ಸೇರುವಂತಾಗಿದೆ.

ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪಾಕ್ ವೇಗಿ ಶಾಹಿನ್ ಅಫ್ರಿದಿ ಟೀಮ್ ಇಂಡಿಯಾ ಆರಂಭಿಕರನ್ನು ಪವರ್​ಪ್ಲೇನಲ್ಲೇ ಪೆವಿಲಿಯನ್​ಗೆ ಕಳುಹಿಸಿ ನಾಯಕನ ನಿರ್ಧಾರವನ್ನು ಸಮರ್ಥಿಸಿದ್ದರು. ಅಷ್ಟೇ ಅಲ್ಲದೆ ಭಾರತ ತಂಡವನ್ನು 20 ಓವರ್​ನಲ್ಲಿ ಪಾಕ್​ ಬೌಲರುಗಳು ಕೇವಲ 151 ರನ್​ಗಳಿಗೆ ನಿಯಂತ್ರಿಸಿದ್ದರು. 152 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಪಾಕ್ ತಂಡಕ್ಕೆ ಆರಂಭಿಕರಾದ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್ ಭರ್ಜರಿ ಆರಂಭ ಒದಗಿಸಿದ್ದರು. ಟೀಮ್ ಇಂಡಿಯಾ ಬೌಲರುಗಳನ್ನು ಲೀಲಾಜಾಲವಾಗಿ ಎದುರಿಸಿದ ಈ ಜೋಡಿ ವಿಶ್ವಕಪ್​ ಇತಿಹಾಸದಲ್ಲೇ ಭಾರತದ ವಿರುದ್ದ ಪಾಕಿಸ್ತಾನಕ್ಕೆ ಮೊದಲ ಜಯ ತಂದುಕೊಟ್ಟಿದ್ದರು.

ಇದನ್ನೂ ಓದಿ: ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಂಡಿಯೂರಿದ್ದು ಯಾಕೆ ಗೊತ್ತಾ?

ಇದನ್ನೂ ಓದಿ:  Virat Kohli: ಸೋತರೂ ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(T20 World Cup, 12 Injured In Joy Firing Celebrating Victory Against India Across Karachi)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ